<p>ಕೆ.ಆರ್.ನಗರ: `ಪಟ್ಟಣದ ಸರ್ವೆ ಇಲಾಖೆಯಲ್ಲಿ ಲಂಚದ ಹಾವಳಿ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ತಿದ್ದಿಕೊಳ್ಳದಿದ್ದಲ್ಲಿ ಲೋಕಾಯುಕ್ತ ಪೊಲೀಸರಿಗೆ ಹಿಡಿದು ಕೊಡಬೇಕಾಗುತ್ತದೆ~ ಎಂದು ಶಾಸಕ ಸಾ.ರಾ.ಮಹೇಶ್ ಎಚ್ಚರಿಸಿದರು.<br /> <br /> ಪಟ್ಟಣದ ಸರ್ವೆ ಇಲಾಖೆ ಕಚೇರಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ನಂತರ ಇಲ್ಲಿನ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ ಅವರು, ಹಣ ಇಲ್ಲದೇ ಇಲ್ಲಿನ ಯಾವ ಅಧಿಕಾರಿಯೂ ಕೆಲಸ ಮಾಡುತ್ತಿಲ್ಲ ಎಂದು ತಹಶೀಲ್ದಾರ್ ಮತ್ತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.<br /> <br /> ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅರ್ಜಿ ಸಲ್ಲಿಸಿದ 15ದಿನದ ಒಳಗಾಗಿ 11ಇ ನಕ್ಷೆ ವಿತರಿಸಬೇಕಾಗುತ್ತದೆ. ಆದರೆ ಇಲ್ಲಿನ ಅಧಿಕಾರಿಗಳು ಅನಗತ್ಯವಾಗಿ ಅರ್ಜಿದಾರರಿಗೆ ವಿಳಂಬ ಮಾಡುತ್ತಿದ್ದಾರೆ. <br /> <br /> ಹಣ ಇಲ್ಲದೇ ಯಾವ ಕೆಲಸವೂ ಮಾಡುತ್ತಿಲ್ಲ. ರೈತರೊಬ್ಬರು ಅರ್ಜಿ ಸಲ್ಲಿಸಿ ಎರಡೂವರೆ ತಿಂಗಳಾಗಿದೆ. ಹಣ ಕೊಡದೇ ಇರುವುದರಿಂದ 11ಇ ನಕ್ಷೆ ಇನ್ನೂವರೆಗೆ ವಿತರಿಸಿಲ್ಲ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಮೇಲಧಿಕಾರಿಗಳಿಗೆ ತಿಳಿಸಲಾಗುತ್ತದೆ ಎಂದರು.<br /> <br /> ತಾ.ಪಂ.ಉಪಾಧ್ಯಕ್ಷ ಮೇಲೂರು ಕೃಷ್ಣೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗಣ್ಣ, ಪುರಸಭೆ ಸದಸ್ಯ ಕೆ.ಎಲ್. ಕುಮಾರ್, ಮುಖಂಡರಾದ ವೇಣು, ಉಮೇಶ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ನಗರ: `ಪಟ್ಟಣದ ಸರ್ವೆ ಇಲಾಖೆಯಲ್ಲಿ ಲಂಚದ ಹಾವಳಿ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ತಿದ್ದಿಕೊಳ್ಳದಿದ್ದಲ್ಲಿ ಲೋಕಾಯುಕ್ತ ಪೊಲೀಸರಿಗೆ ಹಿಡಿದು ಕೊಡಬೇಕಾಗುತ್ತದೆ~ ಎಂದು ಶಾಸಕ ಸಾ.ರಾ.ಮಹೇಶ್ ಎಚ್ಚರಿಸಿದರು.<br /> <br /> ಪಟ್ಟಣದ ಸರ್ವೆ ಇಲಾಖೆ ಕಚೇರಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ನಂತರ ಇಲ್ಲಿನ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ ಅವರು, ಹಣ ಇಲ್ಲದೇ ಇಲ್ಲಿನ ಯಾವ ಅಧಿಕಾರಿಯೂ ಕೆಲಸ ಮಾಡುತ್ತಿಲ್ಲ ಎಂದು ತಹಶೀಲ್ದಾರ್ ಮತ್ತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.<br /> <br /> ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅರ್ಜಿ ಸಲ್ಲಿಸಿದ 15ದಿನದ ಒಳಗಾಗಿ 11ಇ ನಕ್ಷೆ ವಿತರಿಸಬೇಕಾಗುತ್ತದೆ. ಆದರೆ ಇಲ್ಲಿನ ಅಧಿಕಾರಿಗಳು ಅನಗತ್ಯವಾಗಿ ಅರ್ಜಿದಾರರಿಗೆ ವಿಳಂಬ ಮಾಡುತ್ತಿದ್ದಾರೆ. <br /> <br /> ಹಣ ಇಲ್ಲದೇ ಯಾವ ಕೆಲಸವೂ ಮಾಡುತ್ತಿಲ್ಲ. ರೈತರೊಬ್ಬರು ಅರ್ಜಿ ಸಲ್ಲಿಸಿ ಎರಡೂವರೆ ತಿಂಗಳಾಗಿದೆ. ಹಣ ಕೊಡದೇ ಇರುವುದರಿಂದ 11ಇ ನಕ್ಷೆ ಇನ್ನೂವರೆಗೆ ವಿತರಿಸಿಲ್ಲ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಮೇಲಧಿಕಾರಿಗಳಿಗೆ ತಿಳಿಸಲಾಗುತ್ತದೆ ಎಂದರು.<br /> <br /> ತಾ.ಪಂ.ಉಪಾಧ್ಯಕ್ಷ ಮೇಲೂರು ಕೃಷ್ಣೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗಣ್ಣ, ಪುರಸಭೆ ಸದಸ್ಯ ಕೆ.ಎಲ್. ಕುಮಾರ್, ಮುಖಂಡರಾದ ವೇಣು, ಉಮೇಶ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>