<p>ಬೆಂಗಳೂರು: ರಾಯಲ್ ಚಾಲೆಂ ಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಕಿರು ಇತಿಹಾಸದಲ್ಲಿ ಎರಡು ಸಲ ಪ್ರಶಸ್ತಿ ಗೆಲ್ಲುವ ಅವಕಾಶದಿಂದ ಸ್ವಲ್ಪದರಲ್ಲೇ ವಂಚಿತವಾಗಿತ್ತು. <br /> <br /> 2009 ರಲ್ಲಿ ಹಾಗೂ ಕಳೆದ ವರ್ಷದ ಟೂರ್ನಿಯಲ್ಲಿ ಆರ್ಸಿಬಿ ಫೈನಲ್ನಲ್ಲಿ ಎಡವಿ `ರನ್ನರ್ ಅಪ್~ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.<br /> <br /> ಡೇನಿಯಲ್ ವೆಟೋರಿ ನೇತೃತ್ವದಲ್ಲಿ ಕಣಕ್ಕಿಳಿಯಲಿರುವ ಬೆಂಗಳೂರಿನ ತಂಡ ಈ ಬಾರಿ ಕಿರೀಟ ಮುಡಿಗೇರಿಸಿಕೊಳ್ಳಲಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಐದನೇ ಅವತರಣಿಕೆಯ ಟೂರ್ನಿಗೆ ಆರ್ಸಿಬಿ ಸಕಲ ರೀತಿಯಲ್ಲೂ ಸಜ್ಜಾಗಿದೆ ಎಂದು ನಾಯಕ ವೆಟೋರಿ ಸೋಮವಾರ ತಿಳಿಸಿದರು.<br /> <br /> `ಐಪಿಎಲ್ನ ಐದನೇ ಅವತರಣಿಕೆಯ ಟೂರ್ನಿ ಸವಾಲಿನಿಂದ ಕೂಡಿರಲಿದೆ. ಪ್ರಶಸ್ತಿ ಗೆಲ್ಲುವುದೇ ನಮ್ಮ ಏಕೈಕ ಉದ್ದೇಶ. ನಮ್ಮ ತಂಡ ಬಲಿಷ್ಠವಾಗಿದೆ. ಕೆಲವು ಹೊಸ ಆಟಗಾರರು ಸೇರಿಕೊಂಡಿದ್ದಾರೆ. ತಂಡದಲ್ಲಿರುವ ಯುವ ಆಟಗಾರರು ಶ್ರೇಷ್ಠ ಆಟ ತೋರುವ ಹುಮ್ಮಸ್ಸಿನಲ್ಲಿದ್ದಾರೆ. ಆರ್ಸಿಬಿ ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸ ನನ್ನದು~ ಎಂದರು.<br /> <br /> ಕ್ರಿಸ್ ಗೇಲ್ ಬಗ್ಗೆ ಮಾತನಾಡಿದ ವೆಟೋರಿ, `ಕ್ರಿಸ್ ಎಂತಹ ಆಟಗಾರ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಕಳೆದ ವರ್ಷದಂತೆ ಈ ವರ್ಷವೂ ಅವರು ಎಲ್ಲ ಪಂದ್ಯಗಳಲ್ಲಿ ಮಿಂಚಬೇಕೆಂಬುದು ನಮ್ಮ ಬಯಕೆ. ತಮ್ಮ ಸಾಮರ್ಥ್ಯ ತೋರಿಸಲು ಉತ್ಸುಕರಾದ ಇತರ ಕೆಲವು ಆಟಗಾರರೂ ತಂಡದಲ್ಲಿದ್ದಾರೆ. ಕಳೆದ ವರ್ಷ ವಿರಾಟ್ ಕೊಹ್ಲಿ ಆಕರ್ಷಕ ಪ್ರದರ್ಶನ ನೀಡಿದ್ದರು. ಇವರಿಬ್ಬರು ತಂಡದ ಪ್ರಧಾನ ಆಟಗಾರರು~ ಎಂದರು.<br /> <br /> `ಮುತ್ತಯ್ಯ ಮುರಳೀಧರನ್ ಕೂಡಾ ಈ ಬಾರಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. ಅವರು ಅಂತಿಮ ಇಲೆವೆನ್ನಲ್ಲಿ ಸ್ಥಾನ ಪಡೆಯಲು ಚಾರ್ಲ್ ಲಾಂಗ್ವೆಲ್ಟ್ ಮತ್ತು ಡಿರ್ಕ್ ನಾನೆಸ್ ಜೊತೆ ಪೈಪೋಟಿ ನಡೆಸಬೇಕಿದೆ. ಮುರಳಿ ಹೊಂದಿರುವ ಅಪಾರ ಅನುಭವ ತಂಡದ ನೆರವಿಗೆ ಬರಲಿದೆ~ ಎಂದು ವೆಟೋರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಯಲ್ ಚಾಲೆಂ ಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಕಿರು ಇತಿಹಾಸದಲ್ಲಿ ಎರಡು ಸಲ ಪ್ರಶಸ್ತಿ ಗೆಲ್ಲುವ ಅವಕಾಶದಿಂದ ಸ್ವಲ್ಪದರಲ್ಲೇ ವಂಚಿತವಾಗಿತ್ತು. <br /> <br /> 2009 ರಲ್ಲಿ ಹಾಗೂ ಕಳೆದ ವರ್ಷದ ಟೂರ್ನಿಯಲ್ಲಿ ಆರ್ಸಿಬಿ ಫೈನಲ್ನಲ್ಲಿ ಎಡವಿ `ರನ್ನರ್ ಅಪ್~ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.<br /> <br /> ಡೇನಿಯಲ್ ವೆಟೋರಿ ನೇತೃತ್ವದಲ್ಲಿ ಕಣಕ್ಕಿಳಿಯಲಿರುವ ಬೆಂಗಳೂರಿನ ತಂಡ ಈ ಬಾರಿ ಕಿರೀಟ ಮುಡಿಗೇರಿಸಿಕೊಳ್ಳಲಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಐದನೇ ಅವತರಣಿಕೆಯ ಟೂರ್ನಿಗೆ ಆರ್ಸಿಬಿ ಸಕಲ ರೀತಿಯಲ್ಲೂ ಸಜ್ಜಾಗಿದೆ ಎಂದು ನಾಯಕ ವೆಟೋರಿ ಸೋಮವಾರ ತಿಳಿಸಿದರು.<br /> <br /> `ಐಪಿಎಲ್ನ ಐದನೇ ಅವತರಣಿಕೆಯ ಟೂರ್ನಿ ಸವಾಲಿನಿಂದ ಕೂಡಿರಲಿದೆ. ಪ್ರಶಸ್ತಿ ಗೆಲ್ಲುವುದೇ ನಮ್ಮ ಏಕೈಕ ಉದ್ದೇಶ. ನಮ್ಮ ತಂಡ ಬಲಿಷ್ಠವಾಗಿದೆ. ಕೆಲವು ಹೊಸ ಆಟಗಾರರು ಸೇರಿಕೊಂಡಿದ್ದಾರೆ. ತಂಡದಲ್ಲಿರುವ ಯುವ ಆಟಗಾರರು ಶ್ರೇಷ್ಠ ಆಟ ತೋರುವ ಹುಮ್ಮಸ್ಸಿನಲ್ಲಿದ್ದಾರೆ. ಆರ್ಸಿಬಿ ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸ ನನ್ನದು~ ಎಂದರು.<br /> <br /> ಕ್ರಿಸ್ ಗೇಲ್ ಬಗ್ಗೆ ಮಾತನಾಡಿದ ವೆಟೋರಿ, `ಕ್ರಿಸ್ ಎಂತಹ ಆಟಗಾರ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಕಳೆದ ವರ್ಷದಂತೆ ಈ ವರ್ಷವೂ ಅವರು ಎಲ್ಲ ಪಂದ್ಯಗಳಲ್ಲಿ ಮಿಂಚಬೇಕೆಂಬುದು ನಮ್ಮ ಬಯಕೆ. ತಮ್ಮ ಸಾಮರ್ಥ್ಯ ತೋರಿಸಲು ಉತ್ಸುಕರಾದ ಇತರ ಕೆಲವು ಆಟಗಾರರೂ ತಂಡದಲ್ಲಿದ್ದಾರೆ. ಕಳೆದ ವರ್ಷ ವಿರಾಟ್ ಕೊಹ್ಲಿ ಆಕರ್ಷಕ ಪ್ರದರ್ಶನ ನೀಡಿದ್ದರು. ಇವರಿಬ್ಬರು ತಂಡದ ಪ್ರಧಾನ ಆಟಗಾರರು~ ಎಂದರು.<br /> <br /> `ಮುತ್ತಯ್ಯ ಮುರಳೀಧರನ್ ಕೂಡಾ ಈ ಬಾರಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. ಅವರು ಅಂತಿಮ ಇಲೆವೆನ್ನಲ್ಲಿ ಸ್ಥಾನ ಪಡೆಯಲು ಚಾರ್ಲ್ ಲಾಂಗ್ವೆಲ್ಟ್ ಮತ್ತು ಡಿರ್ಕ್ ನಾನೆಸ್ ಜೊತೆ ಪೈಪೋಟಿ ನಡೆಸಬೇಕಿದೆ. ಮುರಳಿ ಹೊಂದಿರುವ ಅಪಾರ ಅನುಭವ ತಂಡದ ನೆರವಿಗೆ ಬರಲಿದೆ~ ಎಂದು ವೆಟೋರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>