<p>ಮದ್ದೂರು: ಪಟ್ಟಣ ಸಹಕಾರಿ ಬ್ಯಾಂಕುಗಳ ಸದಸ್ಯರಿಗೆ ಹೊಸ ವಿಮಾ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಅಧ್ಯಕ್ಷ ಎಚ್.ಕೆ.ಪಾಟೀಲ್ ಸೋಮವಾರ ತಿಳಿಸಿದರು. <br /> <br /> ಪಟ್ಟಣದ ಶಿಂಷಾ ಸಹಕಾರ ಬ್ಯಾಂಕಿಗೆ ಭೇಟಿ ನೀಡಿದ ಅವರು, ಬ್ಯಾಂಕಿನ ವಹಿವಾಟು ಕುರಿತು ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಡನೆ ಮಾತನಾಡಿದರು.<br /> <br /> ಸಣ್ಣ ಮತ್ತು ಅತೀ ಸಣ್ಣ ವ್ಯಾಪಾರಸ್ಥರ ಹಿತರಕ್ಷಿಸುವ ನಿಟ್ಟಿನಲ್ಲಿ ಮಹಾಮಂಡಳದ ಮೂಲಕ ಹೊಸ ಯೋಜನೆಯೊಂದನ್ನು ಜಾರಿಗೆ ತರಲಾಗುತ್ತಿದೆ. ಅಲ್ಲದೇ ವೃತ್ತಿಪರ ತರಬೇತಿಗಳನ್ನು ನೀಡುವ ಮೂಲಕ ಸ್ವಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಮಂಡಳದ ಮೂಲಕ ರೂಪಿಸಲಾಗುತ್ತಿದೆ ಎಂದರು.<br /> <br /> ಮಹಾಮಂಡಳ ವ್ಯಾಪ್ತಿಯ ಬಹುತೇಕ ಬ್ಯಾಂಕುಗಳಲ್ಲಿ ಕೋರ್ ಬ್ಯಾಂಕಿಂಗ್ ಪದ್ಧತಿ ಜಾರಿಗೊಳಿಸಲಾಗಿದೆ. ಎಟಿಎಂ ಕೇಂದ್ರಗಳನ್ನು ಸ್ಥಾಪನೆ ಮಾಡಲು ರಿಸರ್ವ್ ಬ್ಯಾಂಕಿನ ಅನುಮತಿ ಕಾಯಲಾಗುತ್ತಿದೆ. ಚಿನ್ನದ ಖರೀದಿ ವ್ಯವಸ್ಥೆಯನ್ನು ಸಹಕಾರ ಬ್ಯಾಂಕುಗಳ ಮೂಲಕ ಜಾರಿಗೆ ತೆರಲು ಚಿಂತನ ನಡೆಸಲಾಗಿದೆ ಎಂದು ವಿವರಿಸಿದರು.<br /> <br /> ಬ್ಯಾಂಕಿನ ಅಧ್ಯಕ್ಷ ಬಿ.ಅಪ್ಪಾಜಯ್ಯ, ಉಪಾಧ್ಯಕ್ಷ ಬೋರಯ್ಯ, ನಿರ್ದೇಶಕರಾದ ಬಿ.ಎಂ.ವನಜಾಕ್ಷಿರಾಮರಾಜು, ಎಂ.ಸಿ.ಸತೀಶ್, ವ್ಯವಸ್ಥಾಪಕ ಲಕ್ಷ್ಮಿನಾರಾಯಣಗೌಡ, ಗುಮಾಸ್ತರಾದ ಸಾಯಿ ಪ್ರಸನ್ನ, ಉಮಾಶಂಕರ್ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮದ್ದೂರು: ಪಟ್ಟಣ ಸಹಕಾರಿ ಬ್ಯಾಂಕುಗಳ ಸದಸ್ಯರಿಗೆ ಹೊಸ ವಿಮಾ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಅಧ್ಯಕ್ಷ ಎಚ್.ಕೆ.ಪಾಟೀಲ್ ಸೋಮವಾರ ತಿಳಿಸಿದರು. <br /> <br /> ಪಟ್ಟಣದ ಶಿಂಷಾ ಸಹಕಾರ ಬ್ಯಾಂಕಿಗೆ ಭೇಟಿ ನೀಡಿದ ಅವರು, ಬ್ಯಾಂಕಿನ ವಹಿವಾಟು ಕುರಿತು ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಡನೆ ಮಾತನಾಡಿದರು.<br /> <br /> ಸಣ್ಣ ಮತ್ತು ಅತೀ ಸಣ್ಣ ವ್ಯಾಪಾರಸ್ಥರ ಹಿತರಕ್ಷಿಸುವ ನಿಟ್ಟಿನಲ್ಲಿ ಮಹಾಮಂಡಳದ ಮೂಲಕ ಹೊಸ ಯೋಜನೆಯೊಂದನ್ನು ಜಾರಿಗೆ ತರಲಾಗುತ್ತಿದೆ. ಅಲ್ಲದೇ ವೃತ್ತಿಪರ ತರಬೇತಿಗಳನ್ನು ನೀಡುವ ಮೂಲಕ ಸ್ವಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಮಂಡಳದ ಮೂಲಕ ರೂಪಿಸಲಾಗುತ್ತಿದೆ ಎಂದರು.<br /> <br /> ಮಹಾಮಂಡಳ ವ್ಯಾಪ್ತಿಯ ಬಹುತೇಕ ಬ್ಯಾಂಕುಗಳಲ್ಲಿ ಕೋರ್ ಬ್ಯಾಂಕಿಂಗ್ ಪದ್ಧತಿ ಜಾರಿಗೊಳಿಸಲಾಗಿದೆ. ಎಟಿಎಂ ಕೇಂದ್ರಗಳನ್ನು ಸ್ಥಾಪನೆ ಮಾಡಲು ರಿಸರ್ವ್ ಬ್ಯಾಂಕಿನ ಅನುಮತಿ ಕಾಯಲಾಗುತ್ತಿದೆ. ಚಿನ್ನದ ಖರೀದಿ ವ್ಯವಸ್ಥೆಯನ್ನು ಸಹಕಾರ ಬ್ಯಾಂಕುಗಳ ಮೂಲಕ ಜಾರಿಗೆ ತೆರಲು ಚಿಂತನ ನಡೆಸಲಾಗಿದೆ ಎಂದು ವಿವರಿಸಿದರು.<br /> <br /> ಬ್ಯಾಂಕಿನ ಅಧ್ಯಕ್ಷ ಬಿ.ಅಪ್ಪಾಜಯ್ಯ, ಉಪಾಧ್ಯಕ್ಷ ಬೋರಯ್ಯ, ನಿರ್ದೇಶಕರಾದ ಬಿ.ಎಂ.ವನಜಾಕ್ಷಿರಾಮರಾಜು, ಎಂ.ಸಿ.ಸತೀಶ್, ವ್ಯವಸ್ಥಾಪಕ ಲಕ್ಷ್ಮಿನಾರಾಯಣಗೌಡ, ಗುಮಾಸ್ತರಾದ ಸಾಯಿ ಪ್ರಸನ್ನ, ಉಮಾಶಂಕರ್ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>