<p><strong>ತುಮಕೂರು: </strong>ಮಲ್ಲಸಂದ್ರ ಕೆರೆಯಲ್ಲಿ ಒಂದು ವಾರದಿಂದ ಬೀಡುಬಿಟ್ಟಿದ್ದ ಆರು ಕಾಡಾನೆಗಳ ಹಿಂಡನ್ನು ಸೋಮವಾರ ಕುಶಾಲನಗರದ ದುಬಾರೆ ಆನೆ ಶಿಬಿರದ ಹರ್ಷ, ಪ್ರಶಾಂತ್ ಹಾಗೂ ವಿಕ್ರಂ ಸಹಾಯದಿಂದ ಕಾಡಿಗೆ ಅಟ್ಟುವ ಕಾರ್ಯಾಚರಣೆ ಆರಂಭಿಸಲಾಯಿತು.<br /> <br /> ಭಾನುವಾರ ರಾತ್ರಿ ನಗರಕ್ಕೆ ಬಂದಿಳಿದು, ಗೊಲ್ಲಹಳ್ಳಿಯಲ್ಲಿ ಬಿಡಾರ ಹೂಡಿದ್ದ ಸಾಕಾನೆಗಳು ಸೋಮವಾರ ಮಧ್ಯಾಹ್ನ 3 ಗಂಟೆಗೆ ಕಾರ್ಯಾಚರಣೆಗೆ ಇಳಿದವು.</p>.<p>ಕೆರೆಯ ಮಧ್ಯಭಾಗದಲ್ಲಿ ತಂಗಿದ್ದ ಕಾಡಾನೆಗಳನ್ನು ನೀರಿನಿಂದ ಹೊರ ಬರುವಂತೆ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟರು. ಸಾಕಾನೆಗಳ ಕಾರ್ಯಾಚರಣೆ ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು, ಸಾರ್ವಜನಿಕರು ನೆರೆದಿದ್ದರು.<br /> <br /> ಕಾಡಾನೆ ಹಿಂಡು ಹೊರಬರುತ್ತಿದ್ದಂತೆ ಸಾಕಾನೆಗಳು ಅವುಗಳ ಜತೆಯಲ್ಲೇ ಮುಂದೆ ಸಾಗಿದವು. ಮಲ್ಲಸಂದ್ರ, ಹೊನ್ನುಡಿಕೆ ಮಾರ್ಗದಲ್ಲಿ ಆನೆಗಳನ್ನು ಬನ್ನೇರುಘಟ್ಟ ಅರಣ್ಯ ಪ್ರದೇಶದತ್ತ ಓಡಿಸುವ ಕಾರ್ಯಾಚರಣೆ ನಡೆಯಿತು.<br /> ಸಾಕಾನೆಗಳು ಹೆಜ್ಜೆ ಹಾಕುತ್ತಿದ್ದರೆ, ಅವುಗಳನ್ನು ಕಾಡಾನೆಗಳು ಹಿಂಬಾಲಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಮಲ್ಲಸಂದ್ರ ಕೆರೆಯಲ್ಲಿ ಒಂದು ವಾರದಿಂದ ಬೀಡುಬಿಟ್ಟಿದ್ದ ಆರು ಕಾಡಾನೆಗಳ ಹಿಂಡನ್ನು ಸೋಮವಾರ ಕುಶಾಲನಗರದ ದುಬಾರೆ ಆನೆ ಶಿಬಿರದ ಹರ್ಷ, ಪ್ರಶಾಂತ್ ಹಾಗೂ ವಿಕ್ರಂ ಸಹಾಯದಿಂದ ಕಾಡಿಗೆ ಅಟ್ಟುವ ಕಾರ್ಯಾಚರಣೆ ಆರಂಭಿಸಲಾಯಿತು.<br /> <br /> ಭಾನುವಾರ ರಾತ್ರಿ ನಗರಕ್ಕೆ ಬಂದಿಳಿದು, ಗೊಲ್ಲಹಳ್ಳಿಯಲ್ಲಿ ಬಿಡಾರ ಹೂಡಿದ್ದ ಸಾಕಾನೆಗಳು ಸೋಮವಾರ ಮಧ್ಯಾಹ್ನ 3 ಗಂಟೆಗೆ ಕಾರ್ಯಾಚರಣೆಗೆ ಇಳಿದವು.</p>.<p>ಕೆರೆಯ ಮಧ್ಯಭಾಗದಲ್ಲಿ ತಂಗಿದ್ದ ಕಾಡಾನೆಗಳನ್ನು ನೀರಿನಿಂದ ಹೊರ ಬರುವಂತೆ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟರು. ಸಾಕಾನೆಗಳ ಕಾರ್ಯಾಚರಣೆ ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು, ಸಾರ್ವಜನಿಕರು ನೆರೆದಿದ್ದರು.<br /> <br /> ಕಾಡಾನೆ ಹಿಂಡು ಹೊರಬರುತ್ತಿದ್ದಂತೆ ಸಾಕಾನೆಗಳು ಅವುಗಳ ಜತೆಯಲ್ಲೇ ಮುಂದೆ ಸಾಗಿದವು. ಮಲ್ಲಸಂದ್ರ, ಹೊನ್ನುಡಿಕೆ ಮಾರ್ಗದಲ್ಲಿ ಆನೆಗಳನ್ನು ಬನ್ನೇರುಘಟ್ಟ ಅರಣ್ಯ ಪ್ರದೇಶದತ್ತ ಓಡಿಸುವ ಕಾರ್ಯಾಚರಣೆ ನಡೆಯಿತು.<br /> ಸಾಕಾನೆಗಳು ಹೆಜ್ಜೆ ಹಾಕುತ್ತಿದ್ದರೆ, ಅವುಗಳನ್ನು ಕಾಡಾನೆಗಳು ಹಿಂಬಾಲಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>