<p>ದಾವಣಗೆರೆ: ಗ್ರಾಮ ಸ್ವರಾಜ್ಯ ಆದರ್ಶ ಕಲ್ಪನೆ ಎಲ್ಲರಿಗೂ ಬೋಧಿಸಲಾಗುತ್ತಿದ್ದರೂ, ಅನುಷ್ಠಾನಕ್ಕೆ ಬರುತ್ತಿಲ್ಲ ಎಂದು ಪ್ರೊ.ಎಸ್.ಎಚ್. ಪಟೇಲ್ ಅಭಿಪ್ರಾಯಪಟ್ಟರು.<br /> <br /> ಸಮೀಪದ ಕೊಂಡಜ್ಜಿಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ಸಾಗರದ ಲೋಹಿಯಾ ಜನ್ಮಶತಾಬ್ದಿ ಪ್ರತಿಷ್ಠಾನ ಸೋಮವಾರ ಆಯೋಜಿಸಿದ್ದ ಜಾಗತೀಕರಣ ಮತ್ತು ಗ್ರಾಮ ಸ್ವರಾಜ್ಯದ ಕನಸು~ ವಿಚಾರ ಸಂಕಿರಣ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಸ್ವರಾಜ್ಯದ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡಲ್ಲಿ ಪ್ರಗತಿ ಹಾದಿಯಲ್ಲಿ ಇರುತ್ತಿದ್ದವು. ಗ್ರಾಮಸ್ವರಾಜ್ಯ ಕನಸು ಕಂಡಿರುವ ಲೋಹಿಯಾ, ಮಹಾತ್ಮ ಗಾಂಧಿ ಕನಸು ಸಾಕಾರವಾಗುತ್ತಿಲ್ಲ ಎಂದು ವಿಷಾದಿಸಿದರು.<br /> <br /> ಲೋಹಿಯಾ ಪ್ರತಿಷ್ಠಾನದ ಅಧ್ಯಕ್ಷ ಡಿ.ಎಸ್. ನಾಗಭೂಷಣ, ಕವಯತ್ರಿ ಸವಿತಾ ನಾಗಭೂಷಣ, ಪ್ರೊ.ಬಿ.ಪಿ. ವೀರೇಂದ್ರ ಕುಮಾರ್, ಪ್ರೊ.ಬಿ.ವಿ. ವೀರಭದ್ರಪ್ಪ, ತೊಗ್ಗಳ್ಳಿಗೌಡ್ರು ಪುಟ್ಟರಾಜು, ಎನ್.ಎಂ. ಕುಲಕರ್ಣಿ, ರಾಜಾರಾಮ್ ತೋಳ್ಪಡಿ, ಅನಸೂಯಮ್ಮ, ಶೌರೀಶ್ ಇತರರು ಭಾಗವಹಿಸಿದ್ದರು,</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಗ್ರಾಮ ಸ್ವರಾಜ್ಯ ಆದರ್ಶ ಕಲ್ಪನೆ ಎಲ್ಲರಿಗೂ ಬೋಧಿಸಲಾಗುತ್ತಿದ್ದರೂ, ಅನುಷ್ಠಾನಕ್ಕೆ ಬರುತ್ತಿಲ್ಲ ಎಂದು ಪ್ರೊ.ಎಸ್.ಎಚ್. ಪಟೇಲ್ ಅಭಿಪ್ರಾಯಪಟ್ಟರು.<br /> <br /> ಸಮೀಪದ ಕೊಂಡಜ್ಜಿಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ಸಾಗರದ ಲೋಹಿಯಾ ಜನ್ಮಶತಾಬ್ದಿ ಪ್ರತಿಷ್ಠಾನ ಸೋಮವಾರ ಆಯೋಜಿಸಿದ್ದ ಜಾಗತೀಕರಣ ಮತ್ತು ಗ್ರಾಮ ಸ್ವರಾಜ್ಯದ ಕನಸು~ ವಿಚಾರ ಸಂಕಿರಣ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಸ್ವರಾಜ್ಯದ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡಲ್ಲಿ ಪ್ರಗತಿ ಹಾದಿಯಲ್ಲಿ ಇರುತ್ತಿದ್ದವು. ಗ್ರಾಮಸ್ವರಾಜ್ಯ ಕನಸು ಕಂಡಿರುವ ಲೋಹಿಯಾ, ಮಹಾತ್ಮ ಗಾಂಧಿ ಕನಸು ಸಾಕಾರವಾಗುತ್ತಿಲ್ಲ ಎಂದು ವಿಷಾದಿಸಿದರು.<br /> <br /> ಲೋಹಿಯಾ ಪ್ರತಿಷ್ಠಾನದ ಅಧ್ಯಕ್ಷ ಡಿ.ಎಸ್. ನಾಗಭೂಷಣ, ಕವಯತ್ರಿ ಸವಿತಾ ನಾಗಭೂಷಣ, ಪ್ರೊ.ಬಿ.ಪಿ. ವೀರೇಂದ್ರ ಕುಮಾರ್, ಪ್ರೊ.ಬಿ.ವಿ. ವೀರಭದ್ರಪ್ಪ, ತೊಗ್ಗಳ್ಳಿಗೌಡ್ರು ಪುಟ್ಟರಾಜು, ಎನ್.ಎಂ. ಕುಲಕರ್ಣಿ, ರಾಜಾರಾಮ್ ತೋಳ್ಪಡಿ, ಅನಸೂಯಮ್ಮ, ಶೌರೀಶ್ ಇತರರು ಭಾಗವಹಿಸಿದ್ದರು,</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>