<p><strong>ಧಾರವಾಡ:</strong> `ಗ್ರಾಮೀಣ ಪ್ರದೇಶದ ಸಾಕ್ಷರತಾ ಪ್ರಮಾಣವನ್ನು ಪ್ರಾಮಾಣಿವಾಗಿ ಹೆಚ್ಚಿಸಲು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು~ ಎಂದು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಹೇಳಿದರು. <br /> <br /> ಇಲ್ಲಿನ ಗುರುಭವನದಲ್ಲಿ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಸಾಕ್ಷರ ದೀಪ ಸಮಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಾಕ್ಷರತೆಯ ಮೂಲಕ ಶೋಷಣೆ ರಹಿತ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಬೇಕು ಎಂದರು. <br /> <br /> ಜಿಪಂ ಅಧ್ಯಕ್ಷ ಅಡಿವೆಪ್ಪ ಮನಮಿ ಉದ್ಘಾಟಿಸಿ, ಅಕ್ಷರದ ಮೂಲಕ ಅರಿವು ಮೂಡಿಸಿ ಅನಕ್ಷರಸ್ಥರನ್ನು ಕ್ರಿಯಾಶೀಲರನ್ನಾಗಿ ಮಾಡಬೇಕು. ಸಾಕ್ಷರತೆಯು ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಬದುಕಿನ ಶಿಕ್ಷಣ ನೀಡಿ ಸಾಕ್ಷರತಾ ಭಾರತವನ್ನು ಕಟ್ಟಬೇಕು ಎಂದು ಹೇಳಿದರು. <br /> <br /> ಶಾಸಕ ಚಂದ್ರಕಾಂತ ಬೆಲ್ಲದ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಕರಡಿಕೊಪ್ಪ ಮಾತನಾಡಿದರು. ಉಪಾಧ್ಯಕ್ಷೆ ಮಮತಾಜಬಿ ನದಾಫ್, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದತ್ತಾ ಡೋರ್ಲೆ, ಶಂಕರ ಹಲಗತ್ತಿ, ಜಿಪಂ ಸದಸ್ಯೆ ಪ್ರೇಮಾ ಕೊಮಾರದೇಸಾಯಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಶಿಖಾ, ರುದ್ರಸ್ವಾಮಿ, ಮಮತಾ ನಾಯ್ಕ, ಎ.ಬಿ.ಚಪ್ಪರಬಂದ, ಎಸ್.ಆರ್.ರಾಚಣ್ಣವರ, ಬಿ.ಎಸ್.ಹಂಚಿನಾಳ, ನಾರಾಯಣ ಭಜಂತ್ರಿ, ಜಿ.ವೈ.ಪಡಸುಣಗಿ, ಸಿ.ಎಚ್.ಅದರಗುಂಚಿ ಉಪಸ್ಥಿತರಿದ್ದರು.<br /> <br /> ಎಸ್.ಎಂ.ಹುಡೇದಮನಿ ಸ್ವಾಗತಿಸಿದರು. ಬಸವರಾಜ ವಾಸನದ ಮಾತನಾಡಿದರು. ಗುರು ತಿಗಡಿ ನಿರೂಪಿಸಿ, ವೀರಣ್ಣ ವಡ್ಡೀನ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> `ಗ್ರಾಮೀಣ ಪ್ರದೇಶದ ಸಾಕ್ಷರತಾ ಪ್ರಮಾಣವನ್ನು ಪ್ರಾಮಾಣಿವಾಗಿ ಹೆಚ್ಚಿಸಲು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು~ ಎಂದು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಹೇಳಿದರು. <br /> <br /> ಇಲ್ಲಿನ ಗುರುಭವನದಲ್ಲಿ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಸಾಕ್ಷರ ದೀಪ ಸಮಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಾಕ್ಷರತೆಯ ಮೂಲಕ ಶೋಷಣೆ ರಹಿತ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಬೇಕು ಎಂದರು. <br /> <br /> ಜಿಪಂ ಅಧ್ಯಕ್ಷ ಅಡಿವೆಪ್ಪ ಮನಮಿ ಉದ್ಘಾಟಿಸಿ, ಅಕ್ಷರದ ಮೂಲಕ ಅರಿವು ಮೂಡಿಸಿ ಅನಕ್ಷರಸ್ಥರನ್ನು ಕ್ರಿಯಾಶೀಲರನ್ನಾಗಿ ಮಾಡಬೇಕು. ಸಾಕ್ಷರತೆಯು ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಬದುಕಿನ ಶಿಕ್ಷಣ ನೀಡಿ ಸಾಕ್ಷರತಾ ಭಾರತವನ್ನು ಕಟ್ಟಬೇಕು ಎಂದು ಹೇಳಿದರು. <br /> <br /> ಶಾಸಕ ಚಂದ್ರಕಾಂತ ಬೆಲ್ಲದ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಕರಡಿಕೊಪ್ಪ ಮಾತನಾಡಿದರು. ಉಪಾಧ್ಯಕ್ಷೆ ಮಮತಾಜಬಿ ನದಾಫ್, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದತ್ತಾ ಡೋರ್ಲೆ, ಶಂಕರ ಹಲಗತ್ತಿ, ಜಿಪಂ ಸದಸ್ಯೆ ಪ್ರೇಮಾ ಕೊಮಾರದೇಸಾಯಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಶಿಖಾ, ರುದ್ರಸ್ವಾಮಿ, ಮಮತಾ ನಾಯ್ಕ, ಎ.ಬಿ.ಚಪ್ಪರಬಂದ, ಎಸ್.ಆರ್.ರಾಚಣ್ಣವರ, ಬಿ.ಎಸ್.ಹಂಚಿನಾಳ, ನಾರಾಯಣ ಭಜಂತ್ರಿ, ಜಿ.ವೈ.ಪಡಸುಣಗಿ, ಸಿ.ಎಚ್.ಅದರಗುಂಚಿ ಉಪಸ್ಥಿತರಿದ್ದರು.<br /> <br /> ಎಸ್.ಎಂ.ಹುಡೇದಮನಿ ಸ್ವಾಗತಿಸಿದರು. ಬಸವರಾಜ ವಾಸನದ ಮಾತನಾಡಿದರು. ಗುರು ತಿಗಡಿ ನಿರೂಪಿಸಿ, ವೀರಣ್ಣ ವಡ್ಡೀನ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>