<p><strong>ಕೃಷ್ಣರಾಜಪೇಟೆ:</strong> ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ ಜವಾಬ್ದಾರಿ ಸಾಕ್ಷರತಾ ಕಾರ್ಯಕರ್ತರ ಮೇಲಿದ್ದು, ಈ ಕಾರ್ಯವನ್ನು ಅವರು ಬದ್ಧತೆಯಿಂದ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ವಿರೋಧ ಪಕ್ಷದ ಮುಖಂಡ ರವೀಂದ್ರಬಾಬು ತಿಳಿಸಿದರು.<br /> <br /> ಲೋಕಶಿಕ್ಷಣ ಇಲಾಖೆ ವತಿಯಿಂದ ಪಟ್ಟಣದ ಶಿಕ್ಷಕರ ಭವನದಲ್ಲಿ ಮಂಗಳವಾರ ತಾಲ್ಲೂಕಿನ ಸಾಕ್ಷರತಾ ತರಬೇತುದಾರರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಕ್ಷರತೆಯ ಪ್ರಮಾಣವು ದೇಶದ ಪ್ರಗತಿಯ ಸೂಚಕವಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ದೇಶವು ಪ್ರಗತಿ ಹೊಂದಿದ ರಾಷ್ಟ್ರ ಎಂದು ಗುರುತಿಸಿಕೊಳ್ಳಲು ಎಲ್ಲ ರಂಗಗಳಲ್ಲಿಯೂ ಮುಂದುವರೆಯಬೇಕಾದ ಅಗತ್ಯವಿದೆ ಎಂದರು.<br /> <br /> ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪಾಧ್ಯಕ್ಷೆ ಭುವನೇಶ್ವರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರೇವಣ್ಣ, ಲೋಕಶಿಕ್ಷಣ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಅಂ.ಚಿ. ಸಣ್ಣಸ್ವಾಮಿಗೌಡ, ತಾಲ್ಲೂಕು ಸಾಕ್ಷರತಾ ಸಂಯೋಜಕರಾದ ಮಂಜುನಾಥ್, ಬಿ.ಎನ್. ರಾಮಚಂದ್ರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪೇಟೆ:</strong> ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ ಜವಾಬ್ದಾರಿ ಸಾಕ್ಷರತಾ ಕಾರ್ಯಕರ್ತರ ಮೇಲಿದ್ದು, ಈ ಕಾರ್ಯವನ್ನು ಅವರು ಬದ್ಧತೆಯಿಂದ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ವಿರೋಧ ಪಕ್ಷದ ಮುಖಂಡ ರವೀಂದ್ರಬಾಬು ತಿಳಿಸಿದರು.<br /> <br /> ಲೋಕಶಿಕ್ಷಣ ಇಲಾಖೆ ವತಿಯಿಂದ ಪಟ್ಟಣದ ಶಿಕ್ಷಕರ ಭವನದಲ್ಲಿ ಮಂಗಳವಾರ ತಾಲ್ಲೂಕಿನ ಸಾಕ್ಷರತಾ ತರಬೇತುದಾರರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಕ್ಷರತೆಯ ಪ್ರಮಾಣವು ದೇಶದ ಪ್ರಗತಿಯ ಸೂಚಕವಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ದೇಶವು ಪ್ರಗತಿ ಹೊಂದಿದ ರಾಷ್ಟ್ರ ಎಂದು ಗುರುತಿಸಿಕೊಳ್ಳಲು ಎಲ್ಲ ರಂಗಗಳಲ್ಲಿಯೂ ಮುಂದುವರೆಯಬೇಕಾದ ಅಗತ್ಯವಿದೆ ಎಂದರು.<br /> <br /> ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪಾಧ್ಯಕ್ಷೆ ಭುವನೇಶ್ವರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರೇವಣ್ಣ, ಲೋಕಶಿಕ್ಷಣ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಅಂ.ಚಿ. ಸಣ್ಣಸ್ವಾಮಿಗೌಡ, ತಾಲ್ಲೂಕು ಸಾಕ್ಷರತಾ ಸಂಯೋಜಕರಾದ ಮಂಜುನಾಥ್, ಬಿ.ಎನ್. ರಾಮಚಂದ್ರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>