<p><strong>ಬೆಂಗಳೂರು:</strong> `ರಾಜ್ಯದ ಸಾಕ್ಷರತೆ ಪ್ರಮಾಣವನ್ನು 2012ರ ವೇಳೆಗೆ ಶೇ 85ರಷ್ಟಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ~ ಎಂದು ಲೋಕ ಶಿಕ್ಷಣ ಸಚಿವ ರೇವೂನಾಯಕ್ ಬೆಳಮಗಿ ಹೇಳಿದರು.<br /> <br /> 47ನೇ ಅಂತರರಾಷ್ಟ್ರೀಯ ಸಾಕ್ಷರತಾ ಸಪ್ತಾಹದ ಅಂಗವಾಗಿ ರಾಜ್ಯ ಸಾಕ್ಷರತಾ ಮಿಶನ್ ಪ್ರಾಧಿಕಾರ ಹಾಗೂ ಲೋಕ ಶಿಕ್ಷಣ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಕ್ಷರತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ರಾಜ್ಯದಲ್ಲಿ ಸಾಕ್ಷರತಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಪರಿಣಾಮ 2001ರಲ್ಲಿ ಶೇ 66.64ರಷ್ಟಿದ್ದ ಸಾಕ್ಷರತಾ ಪ್ರಮಾಣ ಇದೀಗ ಶೇ 75.66ಕ್ಕೆ ಹೆಚ್ಚಿದೆ. 2011ರ ಜನಗಣತಿ ಪ್ರಕಾರ ಪುರುಷರ ಸಾಕ್ಷರತೆ ಪ್ರಮಾಣ ಶೇ 82.10ರಷ್ಟಿದ್ದರೆ, ಮಹಿಳಾ ಸಾಕ್ಷರತಾ ಪ್ರಮಾಣ ಶೇ 65.40ರಷ್ಟಿದೆ.<br /> <br /> ಪುರುಷ ಹಾಗೂ ಸ್ತ್ರೀಯರ ಸಾಕ್ಷರತೆ ಪ್ರಮಾಣದ ಅಂತರ ಶೇ 16.70ರಷ್ಟಿದ್ದು, ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರ ಸಾಕ್ಷರತೆ ಪ್ರಮಾಣ ಕಡಿಮೆ ಇದೆ. ಈ ಅಂತರವನ್ನು ಕಡಿಮೆ ಮಾಡಿ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸುವುದು ಸರ್ಕಾರದ ಗುರಿ~ ಎಂದರು.<br /> <br /> `2009-10ರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ `ಸಾಕ್ಷರ ಭಾರತ್~ ಕಾರ್ಯಕ್ರಮವನ್ನು ರಾಜ್ಯದ 20 ಜಿಲ್ಲೆಗಳ 3,788 ಗ್ರಾಮ ಪಂಚಾಯ್ತಿಗಳ ಮೂಲಕ ಅನುಷ್ಠಾನಗೊಳಿಸಲಾಗಿದೆ. 15 ವರ್ಷ ಮೀರಿದ ಸುಮಾರು 40 ಲಕ್ಷ ಅನಕ್ಷರಸ್ಥರನ್ನು ಅದರಲ್ಲೂ ಪ್ರಮುಖವಾಗಿ ಮಹಿಳೆಯರು, ಪರಿಶಿಷ್ಟ ಜಾತಿ/ ವರ್ಗ, ಅಲ್ಪಸಂಖ್ಯಾತರನ್ನು ಸಾಕ್ಷರರನ್ನಾಗಿ ಮಾಡುವ ಕಾರ್ಯಕ್ರಮ ಇದಾಗಿದೆ~ ಎಂದು ಅವರು ಹೇಳಿದರು.<br /> <br /> `ಲೋಕ ಶಿಕ್ಷಣ ನಿರ್ದೇಶನಾಲಯವು ಡಾ.ಡಿ.ಎಂ.ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ ಜಿಲ್ಲೆಗಳಲ್ಲಿ ಅನಕ್ಷರಸ್ಥರಿಗೆ ಜ್ಞಾನ ಒದಗಿಸಲು ಪ್ರಯತ್ನಿಸುತ್ತಿದೆ. ಅಲ್ಲದೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಸ್ಸಿಪಿ/ಟಿಎಸ್ಪಿ ಕಾರ್ಯಕ್ರಮಗಳ ಅಡಿ ಪರಿಶಿಷ್ಟ ನವ ಸಾಕ್ಷರರಿಗೆ ವೃತ್ತಿ ಕೌಶಲ ಒದಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ವಿದ್ಯಾಪೀಠಗಳ ಮೂಲಕ ಗ್ರಾಮೀಣ ವಿದ್ಯಾವಂತ ಯುವಕ ಯುವತಿಯರಿಗೆ ಆಧುನಿಕ ವೃತ್ತಿ ಕೌಶಲ ತರಬೇತಿ ನೀಡುತ್ತಿದೆ~ ಎಂದು ಸಚಿವರು ಮಾಹಿತಿ ನೀಡಿದರು.<br /> <br /> ಶಿಕ್ಷಣ ಇಲಾಖೆ ಕಾರ್ಯದರ್ಶಿ ಜಿ.ಕುಮಾರ್ ನಾಯಕ್, `ಸಾಕ್ಷರತೆ ಹಾಗೂ ಅಭಿವೃದ್ಧಿಗೆ ಅನ್ಯೋನ್ಯ ಸಂಬಂಧವಿದೆ. ಸಾಕ್ಷರತೆಯಿಂದ ಅಭಿವೃದ್ಧಿ, ತಲಾ ಆದಾಯ ಹೆಚ್ಚಳ, ಸ್ತ್ರೀ ಸಮಾನತೆ ಸಾಧಿಸಲು ಸಹಕಾರಿಯಾಗಲಿದೆ. ಆದ್ದರಿಂದ ಅನಕ್ಷರತೆಯ ವಿಷ ವರ್ತುಲದಿಂದ ಎಲ್ಲರನ್ನು ಹೊರ ತರಲು ಸಾಕ್ಷರರು ಪ್ರಯತ್ನಿಸಬೇಕು~ ಎಂದು ಮನವಿ ಮಾಡಿದರು.<br /> <br /> ಲೋಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಬಿ.ಬಿ.ಕಾವೇರಿ ಸ್ವಾಗತಿಸಿದರು. ಸಾಕ್ಷರ ಭಾರತ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಶ್ರಮಿಸಿದ ಸಂಯೋಜಕರು ಹಾಗೂ ಸ್ವಯಂ ಸೇವಕರಿಗೆ ಸಮಾವೇಶದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜ್ಯದ ಸಾಕ್ಷರತೆ ಪ್ರಮಾಣವನ್ನು 2012ರ ವೇಳೆಗೆ ಶೇ 85ರಷ್ಟಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ~ ಎಂದು ಲೋಕ ಶಿಕ್ಷಣ ಸಚಿವ ರೇವೂನಾಯಕ್ ಬೆಳಮಗಿ ಹೇಳಿದರು.<br /> <br /> 47ನೇ ಅಂತರರಾಷ್ಟ್ರೀಯ ಸಾಕ್ಷರತಾ ಸಪ್ತಾಹದ ಅಂಗವಾಗಿ ರಾಜ್ಯ ಸಾಕ್ಷರತಾ ಮಿಶನ್ ಪ್ರಾಧಿಕಾರ ಹಾಗೂ ಲೋಕ ಶಿಕ್ಷಣ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಕ್ಷರತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ರಾಜ್ಯದಲ್ಲಿ ಸಾಕ್ಷರತಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಪರಿಣಾಮ 2001ರಲ್ಲಿ ಶೇ 66.64ರಷ್ಟಿದ್ದ ಸಾಕ್ಷರತಾ ಪ್ರಮಾಣ ಇದೀಗ ಶೇ 75.66ಕ್ಕೆ ಹೆಚ್ಚಿದೆ. 2011ರ ಜನಗಣತಿ ಪ್ರಕಾರ ಪುರುಷರ ಸಾಕ್ಷರತೆ ಪ್ರಮಾಣ ಶೇ 82.10ರಷ್ಟಿದ್ದರೆ, ಮಹಿಳಾ ಸಾಕ್ಷರತಾ ಪ್ರಮಾಣ ಶೇ 65.40ರಷ್ಟಿದೆ.<br /> <br /> ಪುರುಷ ಹಾಗೂ ಸ್ತ್ರೀಯರ ಸಾಕ್ಷರತೆ ಪ್ರಮಾಣದ ಅಂತರ ಶೇ 16.70ರಷ್ಟಿದ್ದು, ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರ ಸಾಕ್ಷರತೆ ಪ್ರಮಾಣ ಕಡಿಮೆ ಇದೆ. ಈ ಅಂತರವನ್ನು ಕಡಿಮೆ ಮಾಡಿ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸುವುದು ಸರ್ಕಾರದ ಗುರಿ~ ಎಂದರು.<br /> <br /> `2009-10ರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ `ಸಾಕ್ಷರ ಭಾರತ್~ ಕಾರ್ಯಕ್ರಮವನ್ನು ರಾಜ್ಯದ 20 ಜಿಲ್ಲೆಗಳ 3,788 ಗ್ರಾಮ ಪಂಚಾಯ್ತಿಗಳ ಮೂಲಕ ಅನುಷ್ಠಾನಗೊಳಿಸಲಾಗಿದೆ. 15 ವರ್ಷ ಮೀರಿದ ಸುಮಾರು 40 ಲಕ್ಷ ಅನಕ್ಷರಸ್ಥರನ್ನು ಅದರಲ್ಲೂ ಪ್ರಮುಖವಾಗಿ ಮಹಿಳೆಯರು, ಪರಿಶಿಷ್ಟ ಜಾತಿ/ ವರ್ಗ, ಅಲ್ಪಸಂಖ್ಯಾತರನ್ನು ಸಾಕ್ಷರರನ್ನಾಗಿ ಮಾಡುವ ಕಾರ್ಯಕ್ರಮ ಇದಾಗಿದೆ~ ಎಂದು ಅವರು ಹೇಳಿದರು.<br /> <br /> `ಲೋಕ ಶಿಕ್ಷಣ ನಿರ್ದೇಶನಾಲಯವು ಡಾ.ಡಿ.ಎಂ.ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ ಜಿಲ್ಲೆಗಳಲ್ಲಿ ಅನಕ್ಷರಸ್ಥರಿಗೆ ಜ್ಞಾನ ಒದಗಿಸಲು ಪ್ರಯತ್ನಿಸುತ್ತಿದೆ. ಅಲ್ಲದೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಸ್ಸಿಪಿ/ಟಿಎಸ್ಪಿ ಕಾರ್ಯಕ್ರಮಗಳ ಅಡಿ ಪರಿಶಿಷ್ಟ ನವ ಸಾಕ್ಷರರಿಗೆ ವೃತ್ತಿ ಕೌಶಲ ಒದಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ವಿದ್ಯಾಪೀಠಗಳ ಮೂಲಕ ಗ್ರಾಮೀಣ ವಿದ್ಯಾವಂತ ಯುವಕ ಯುವತಿಯರಿಗೆ ಆಧುನಿಕ ವೃತ್ತಿ ಕೌಶಲ ತರಬೇತಿ ನೀಡುತ್ತಿದೆ~ ಎಂದು ಸಚಿವರು ಮಾಹಿತಿ ನೀಡಿದರು.<br /> <br /> ಶಿಕ್ಷಣ ಇಲಾಖೆ ಕಾರ್ಯದರ್ಶಿ ಜಿ.ಕುಮಾರ್ ನಾಯಕ್, `ಸಾಕ್ಷರತೆ ಹಾಗೂ ಅಭಿವೃದ್ಧಿಗೆ ಅನ್ಯೋನ್ಯ ಸಂಬಂಧವಿದೆ. ಸಾಕ್ಷರತೆಯಿಂದ ಅಭಿವೃದ್ಧಿ, ತಲಾ ಆದಾಯ ಹೆಚ್ಚಳ, ಸ್ತ್ರೀ ಸಮಾನತೆ ಸಾಧಿಸಲು ಸಹಕಾರಿಯಾಗಲಿದೆ. ಆದ್ದರಿಂದ ಅನಕ್ಷರತೆಯ ವಿಷ ವರ್ತುಲದಿಂದ ಎಲ್ಲರನ್ನು ಹೊರ ತರಲು ಸಾಕ್ಷರರು ಪ್ರಯತ್ನಿಸಬೇಕು~ ಎಂದು ಮನವಿ ಮಾಡಿದರು.<br /> <br /> ಲೋಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಬಿ.ಬಿ.ಕಾವೇರಿ ಸ್ವಾಗತಿಸಿದರು. ಸಾಕ್ಷರ ಭಾರತ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಶ್ರಮಿಸಿದ ಸಂಯೋಜಕರು ಹಾಗೂ ಸ್ವಯಂ ಸೇವಕರಿಗೆ ಸಮಾವೇಶದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>