<p><strong>ಸಾಗರ:</strong> ನಗರದ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ನಗರಸಭೆ ನಿರ್ಮಿಸುತ್ತಿರುವ ರಂಗಮಂದಿರ ಕಾಮಗಾರಿ ವಿಳಂಬ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ರಸ್ತೆತಡೆ ನಡೆಸಿದರು.<br /> <br /> ವಿವಿಧ ಬಡಾವಣೆಗಳಲ್ಲಿ ಅನೇಕ ಕಾಮಗಾರಿಗಳು ನೆನೆಗುದಿಗೆ ಬಿದ್ದಿದ್ದು, ನಗರಸಭೆ ಅವುಗಳನ್ನು ಕೂಡಲೇ ಪೂರ್ಣಗೊಳಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.<br /> <br /> ಹಲವು ವರ್ಷಗಳ ಹಿಂದೆಯೇ ರಂಗಮಂದಿರ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಿ ಭಾಗಶಃ ಕಾಮಗಾರಿ ನಡೆದಿದ್ದರೂ ನಂತರ ಅದನ್ನು ಮುಂದುವರಿಸದೇ ಇರುವುದರಿಂದ ಸಾರ್ವಜನಿಕರ ಹಣ ಪೋಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದರು. <br /> <br /> ಅನೇಕ ಕಡೆ ಹೊಸದಾಗಿ ನಿರ್ಮಿಸಿರುವ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಅವುಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ವಾರ್ಡ್ನಂ. 15, 17 ಹಾಗೂ ರಾಮನಗರ ಬಡಾವಣೆಗಳಲ್ಲಿ ಹಲವು ವರ್ಷಗಳಿಂದ ಮನೆ ಕಟ್ಟಿಕೊಂಡಿರುವವರು ಮನೆಯನ್ನು ತೆರವುಗೊಳಿಸುವಂತೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ನಗರ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಆಶ್ರಯ ನಿವೇಶನ ಹಾಗೂ ಆಶ್ರಯ ಮನೆಗಳಿಗೆ ಹಕ್ಕುಪತ್ರ ವಿತರಿಸಿಲ್ಲ. ಈ ಕೆಲಸಕ್ಕೆ ಕೂಡಲೇ ಚಾಲನೆ ನೀಡಬೇಕು. ರಾಷ್ಟ್ರೀಯ ವಿಮಾ ಯೋಜನೆ ಅರ್ಜಿ ಸಲ್ಲಿಸಲು ಇರುವ ಕಾಲಾವಕಾಶವನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.<br /> <br /> ಕಾಂಗ್ರೆಸ್ನ ಪ್ರಮುಖರಾದ ಮಹಮ್ಮದ್ ಖಾಸಿಂ, ಐ.ಎನ್.ಸುರೇಶ್ಬಾಬು, ನಂದಾ ಗೊಜನೂರು, ಕಾಗೋಡು ಅಣ್ಣಪ್ಪ, ಹರೀಶ್ಗೌಡ, ಸುಂದರ್ಸಿಂಗ್, ವಡ್ನಾಲ್ ಕೃಷ್ಣಪ್ಪ,ಡಿ. ದಿನೇಶ್, ಸುರೇಶ್ಕುಮಾರ್, ಎನ್. ಶ್ರೀನಾಥ್, ಗಣಪತಿ ಸುಳಗೋಡು, ಅಬ್ದುಲ್ ಹಮೀದ್ ಇನ್ನಿತರರು ಪಾಲ್ಗೊಂಡಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ನಗರದ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ನಗರಸಭೆ ನಿರ್ಮಿಸುತ್ತಿರುವ ರಂಗಮಂದಿರ ಕಾಮಗಾರಿ ವಿಳಂಬ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ರಸ್ತೆತಡೆ ನಡೆಸಿದರು.<br /> <br /> ವಿವಿಧ ಬಡಾವಣೆಗಳಲ್ಲಿ ಅನೇಕ ಕಾಮಗಾರಿಗಳು ನೆನೆಗುದಿಗೆ ಬಿದ್ದಿದ್ದು, ನಗರಸಭೆ ಅವುಗಳನ್ನು ಕೂಡಲೇ ಪೂರ್ಣಗೊಳಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.<br /> <br /> ಹಲವು ವರ್ಷಗಳ ಹಿಂದೆಯೇ ರಂಗಮಂದಿರ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಿ ಭಾಗಶಃ ಕಾಮಗಾರಿ ನಡೆದಿದ್ದರೂ ನಂತರ ಅದನ್ನು ಮುಂದುವರಿಸದೇ ಇರುವುದರಿಂದ ಸಾರ್ವಜನಿಕರ ಹಣ ಪೋಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದರು. <br /> <br /> ಅನೇಕ ಕಡೆ ಹೊಸದಾಗಿ ನಿರ್ಮಿಸಿರುವ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಅವುಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ವಾರ್ಡ್ನಂ. 15, 17 ಹಾಗೂ ರಾಮನಗರ ಬಡಾವಣೆಗಳಲ್ಲಿ ಹಲವು ವರ್ಷಗಳಿಂದ ಮನೆ ಕಟ್ಟಿಕೊಂಡಿರುವವರು ಮನೆಯನ್ನು ತೆರವುಗೊಳಿಸುವಂತೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ನಗರ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಆಶ್ರಯ ನಿವೇಶನ ಹಾಗೂ ಆಶ್ರಯ ಮನೆಗಳಿಗೆ ಹಕ್ಕುಪತ್ರ ವಿತರಿಸಿಲ್ಲ. ಈ ಕೆಲಸಕ್ಕೆ ಕೂಡಲೇ ಚಾಲನೆ ನೀಡಬೇಕು. ರಾಷ್ಟ್ರೀಯ ವಿಮಾ ಯೋಜನೆ ಅರ್ಜಿ ಸಲ್ಲಿಸಲು ಇರುವ ಕಾಲಾವಕಾಶವನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.<br /> <br /> ಕಾಂಗ್ರೆಸ್ನ ಪ್ರಮುಖರಾದ ಮಹಮ್ಮದ್ ಖಾಸಿಂ, ಐ.ಎನ್.ಸುರೇಶ್ಬಾಬು, ನಂದಾ ಗೊಜನೂರು, ಕಾಗೋಡು ಅಣ್ಣಪ್ಪ, ಹರೀಶ್ಗೌಡ, ಸುಂದರ್ಸಿಂಗ್, ವಡ್ನಾಲ್ ಕೃಷ್ಣಪ್ಪ,ಡಿ. ದಿನೇಶ್, ಸುರೇಶ್ಕುಮಾರ್, ಎನ್. ಶ್ರೀನಾಥ್, ಗಣಪತಿ ಸುಳಗೋಡು, ಅಬ್ದುಲ್ ಹಮೀದ್ ಇನ್ನಿತರರು ಪಾಲ್ಗೊಂಡಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>