<p><strong>ಮೈಸೂರು: </strong>ಸಾಫ್ಟ್ವೇರ್ ಎಂಜಿನಿಯರ್ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ನಗರದ ಜೆ.ಪಿ.ನಗರದಲ್ಲಿ ಮಂಗಳವಾರ ರಾತ್ರಿ ಜರುಗಿದೆ.</p>.<p>ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಸುನಿಲ್ಕುಮಾರ್ ಪತ್ನಿ ಅಶ್ವಿನಿ (24) ಕೊಲೆಯಾದವರು. ಎರಡು ವರ್ಷಗಳ ಹಿಂದೆ ಅಶ್ವಿನ್ಕುಮಾರ್ ಅವರನ್ನು ಅಶ್ವಿನಿ ವರಿಸಿದ್ದರು. ಒಂದು ತಿಂಗಳ ಸಂಸಾರ ನಡೆಸಿದ ಇಬ್ಬರ ನಡುವೆ ವಿರಸ ಉಂಟಾಗಿತ್ತು. ಈ ನಡುವೆ ಪತಿ ಮನೆಯವರು ವರದಕ್ಷಿಣೆಗೆ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಅಶ್ವಿನಿ ಬೆಂಗಳೂರಿನ ಹಲಸೂರು ಗೇಟ್ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು. ನಂತರ ಪತಿ ಮನೆ ತೊರೆದು ನಗರದ ಜೆ.ಪಿ.ನಗರ 13ನೇ ಮುಖ್ಯರಸ್ತೆ, 10ನೇ ಅಡ್ಡರಸ್ತೆಯಲ್ಲಿರುವ ತವರು ಮನೆಗೆ ಬಂದಿದ್ದರು. ಅಲ್ಲದೆ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ಪೊಲೀಸರು ತಿಳಿಸಿದರು</p>.<p>ಪೋಷಕರಾದ ಜಗನ್ನಾಥ್ ಆಚಾರ್-ರಾಜರಾಜೇಶ್ವರಿ ಚಿತ್ರದುರ್ಗಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿ ಮನೆಯ ಒಳನುಗ್ಗಿ ಅಶ್ವಿನಿ ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸಾಫ್ಟ್ವೇರ್ ಎಂಜಿನಿಯರ್ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ನಗರದ ಜೆ.ಪಿ.ನಗರದಲ್ಲಿ ಮಂಗಳವಾರ ರಾತ್ರಿ ಜರುಗಿದೆ.</p>.<p>ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಸುನಿಲ್ಕುಮಾರ್ ಪತ್ನಿ ಅಶ್ವಿನಿ (24) ಕೊಲೆಯಾದವರು. ಎರಡು ವರ್ಷಗಳ ಹಿಂದೆ ಅಶ್ವಿನ್ಕುಮಾರ್ ಅವರನ್ನು ಅಶ್ವಿನಿ ವರಿಸಿದ್ದರು. ಒಂದು ತಿಂಗಳ ಸಂಸಾರ ನಡೆಸಿದ ಇಬ್ಬರ ನಡುವೆ ವಿರಸ ಉಂಟಾಗಿತ್ತು. ಈ ನಡುವೆ ಪತಿ ಮನೆಯವರು ವರದಕ್ಷಿಣೆಗೆ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಅಶ್ವಿನಿ ಬೆಂಗಳೂರಿನ ಹಲಸೂರು ಗೇಟ್ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು. ನಂತರ ಪತಿ ಮನೆ ತೊರೆದು ನಗರದ ಜೆ.ಪಿ.ನಗರ 13ನೇ ಮುಖ್ಯರಸ್ತೆ, 10ನೇ ಅಡ್ಡರಸ್ತೆಯಲ್ಲಿರುವ ತವರು ಮನೆಗೆ ಬಂದಿದ್ದರು. ಅಲ್ಲದೆ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ಪೊಲೀಸರು ತಿಳಿಸಿದರು</p>.<p>ಪೋಷಕರಾದ ಜಗನ್ನಾಥ್ ಆಚಾರ್-ರಾಜರಾಜೇಶ್ವರಿ ಚಿತ್ರದುರ್ಗಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿ ಮನೆಯ ಒಳನುಗ್ಗಿ ಅಶ್ವಿನಿ ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>