<p>ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರನ್ನು ಕೆ.ಆರ್.ಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.<br /> <br /> ಜಾಲಹಳ್ಳಿ ನಿವಾಸಿ ಪಾಪಣ್ಣ ಎಂಬುವರ ಪುತ್ರ ಪಿ.ಚೇತನ್ಕುಮಾರ್ (28) ಬಂಧಿತ ಆರೋಪಿ. ಎಚ್ಎಎಲ್ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸಾಫ್ಟ್ವೇರ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಆತ, ಸೌಮ್ಯಾ ಎಂಬುವರನ್ನು 11 ತಿಂಗಳ ಹಿಂದೆ ವಿವಾಹವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಚೇತನ್ಕುಮಾರ್ ಪತ್ನಿಯ ಜತೆ ದೇವಸಂದ್ರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಆತನ ತಂದೆ ಪಾಪಣ್ಣ ಮತ್ತು ತಾಯಿ ಲೀಲಾವತಿ ಅವರು ಜಾಲಹಳ್ಳಿಯಲ್ಲಿ ನೆಲೆಸಿದ್ದರು. ಚೇತನ್ಕುಮಾರ್ ಮತ್ತು ಪೋಷಕರು, ತವರು ಮನೆಯಿಂದ ಐದು ಲಕ್ಷ ರೂಪಾಯಿ ಹಣ ತರುವಂತೆ ಸೌಮ್ಯಾ ಅವರಿಗೆ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಸೌಮ್ಯಾ ಅವರು ನೀಡಿದ ದೂರು ಆಧರಿಸಿ ಆತನನ್ನು ಬಂಧಿಸಿ ನಗರದ ಹತ್ತನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು ಎಂದು ಹೇಳಿದ್ದಾರೆ.<br /> <br /> ಪ್ರಕರಣದ ಇತರೆ ಆರೋಪಿಗಳಾದ ಪಾಪಣ್ಣ, ಲೀಲಾವತಿ ಮತ್ತು ಅವರ ಕೆಲ ಸಂಬಂಧಿಕರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರನ್ನು ಕೆ.ಆರ್.ಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.<br /> <br /> ಜಾಲಹಳ್ಳಿ ನಿವಾಸಿ ಪಾಪಣ್ಣ ಎಂಬುವರ ಪುತ್ರ ಪಿ.ಚೇತನ್ಕುಮಾರ್ (28) ಬಂಧಿತ ಆರೋಪಿ. ಎಚ್ಎಎಲ್ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸಾಫ್ಟ್ವೇರ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಆತ, ಸೌಮ್ಯಾ ಎಂಬುವರನ್ನು 11 ತಿಂಗಳ ಹಿಂದೆ ವಿವಾಹವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಚೇತನ್ಕುಮಾರ್ ಪತ್ನಿಯ ಜತೆ ದೇವಸಂದ್ರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಆತನ ತಂದೆ ಪಾಪಣ್ಣ ಮತ್ತು ತಾಯಿ ಲೀಲಾವತಿ ಅವರು ಜಾಲಹಳ್ಳಿಯಲ್ಲಿ ನೆಲೆಸಿದ್ದರು. ಚೇತನ್ಕುಮಾರ್ ಮತ್ತು ಪೋಷಕರು, ತವರು ಮನೆಯಿಂದ ಐದು ಲಕ್ಷ ರೂಪಾಯಿ ಹಣ ತರುವಂತೆ ಸೌಮ್ಯಾ ಅವರಿಗೆ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಸೌಮ್ಯಾ ಅವರು ನೀಡಿದ ದೂರು ಆಧರಿಸಿ ಆತನನ್ನು ಬಂಧಿಸಿ ನಗರದ ಹತ್ತನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು ಎಂದು ಹೇಳಿದ್ದಾರೆ.<br /> <br /> ಪ್ರಕರಣದ ಇತರೆ ಆರೋಪಿಗಳಾದ ಪಾಪಣ್ಣ, ಲೀಲಾವತಿ ಮತ್ತು ಅವರ ಕೆಲ ಸಂಬಂಧಿಕರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>