<p><strong>ಗುಂಡ್ಲುಪೇಟೆ: </strong>ರಾಜಕೀಯ ಸುದ್ದಿಗಳಿಗಿಂತ ಸಾಮಾಜಿಕ ಅಭಿವೃದ್ಧಿಯ ಸುದ್ದಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಅಗತ್ಯತೆ ಇದೆ ಎಂದು ಪತ್ರಿಕೋದ್ಯಮಿ ರಾಜಶೇಖರ ಕೋಟಿ ಹೇಳಿದರು.<br /> <br /> ಪಟ್ಟಣದ ಶ್ರೀ ಮದ್ದಾನೇಶ್ವರ ವಿದ್ಯಾಸಂಸ್ಥೆಯ ಮಹಾಮನೆಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ `ಪತ್ರಿಕಾ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಭಿನ್ನ ದೃಷ್ಟಿಕೋನಗಳಿಂದ ಸುದ್ದಿಯನ್ನು ವಿಮರ್ಶಿಸಿ ಅದರಿಂದಾಗುವ ಸಾಮಾಜಿಕ ಕಾಳಜಿಯನ್ನು ಎತ್ತಿ ತೋರಿಸುವ ಕೆಲಸ ಪರ್ತಕರ್ತರಿಂದ ಆಗಬೇಕಿದೆ ಎಂದರು.<br /> <br /> ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ರಹಂ ಡಿ ಸಿಲ್ವಾ ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯರಾದ ಡಿ.ಸಿ. ನಾಗೇಂದ್ರ, ಕೆಜೆಪಿ ಮುಖಂಡ ಸಿ.ಎಸ್. ನಿರಂಜನಕುಮಾರ್, ಜೆಡಿಎಸ್ ತಾಲೂಕು ಘಟಕ ಅಧ್ಯಕ್ಷ ಬಿ.ಪಿ. ಮುದ್ದುಮಲ್ಲು, ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ನಂಜಪ್ಪ, ವಿಮೋಚನ ಟ್ರಸ್ಟ್ ಅಧ್ಯಕ್ಷ ಸಿದ್ದರಾಜು ಹಾಗೂ ಇತರರು ಹಾಜರಿದ್ದರು.<br /> <br /> ವಿಮೋಚನ ಚಾರಿಟಬಲ್ ಟ್ರಸ್ಟ್ ಮತ್ತು ದಿ ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರವನ್ನು ಮೈಮುಲ್ ಅಧ್ಯಕ್ಷ ಎನ್. ಮಹದೇವಪ್ಪ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ರಾಜಕೀಯ ಸುದ್ದಿಗಳಿಗಿಂತ ಸಾಮಾಜಿಕ ಅಭಿವೃದ್ಧಿಯ ಸುದ್ದಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಅಗತ್ಯತೆ ಇದೆ ಎಂದು ಪತ್ರಿಕೋದ್ಯಮಿ ರಾಜಶೇಖರ ಕೋಟಿ ಹೇಳಿದರು.<br /> <br /> ಪಟ್ಟಣದ ಶ್ರೀ ಮದ್ದಾನೇಶ್ವರ ವಿದ್ಯಾಸಂಸ್ಥೆಯ ಮಹಾಮನೆಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ `ಪತ್ರಿಕಾ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಭಿನ್ನ ದೃಷ್ಟಿಕೋನಗಳಿಂದ ಸುದ್ದಿಯನ್ನು ವಿಮರ್ಶಿಸಿ ಅದರಿಂದಾಗುವ ಸಾಮಾಜಿಕ ಕಾಳಜಿಯನ್ನು ಎತ್ತಿ ತೋರಿಸುವ ಕೆಲಸ ಪರ್ತಕರ್ತರಿಂದ ಆಗಬೇಕಿದೆ ಎಂದರು.<br /> <br /> ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ರಹಂ ಡಿ ಸಿಲ್ವಾ ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯರಾದ ಡಿ.ಸಿ. ನಾಗೇಂದ್ರ, ಕೆಜೆಪಿ ಮುಖಂಡ ಸಿ.ಎಸ್. ನಿರಂಜನಕುಮಾರ್, ಜೆಡಿಎಸ್ ತಾಲೂಕು ಘಟಕ ಅಧ್ಯಕ್ಷ ಬಿ.ಪಿ. ಮುದ್ದುಮಲ್ಲು, ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ನಂಜಪ್ಪ, ವಿಮೋಚನ ಟ್ರಸ್ಟ್ ಅಧ್ಯಕ್ಷ ಸಿದ್ದರಾಜು ಹಾಗೂ ಇತರರು ಹಾಜರಿದ್ದರು.<br /> <br /> ವಿಮೋಚನ ಚಾರಿಟಬಲ್ ಟ್ರಸ್ಟ್ ಮತ್ತು ದಿ ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರವನ್ನು ಮೈಮುಲ್ ಅಧ್ಯಕ್ಷ ಎನ್. ಮಹದೇವಪ್ಪ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>