<p><strong>ಕೃಷ್ಣರಾಜಪೇಟೆ: </strong>ಸಾಮಾಜಿಕ ಅನಿಷ್ಟಗಳನ್ನು ತೊಲಗಿಸಿ, ದೇಶವನ್ನು ಸದೃಢವಾಗಿ ನಿರ್ಮಿಸಲು ಯುವ ಜನರು ಪಣತೊಡಬೇಕು ಎಂದು ಮಾಜಿ ಸ್ಪೀಕರ್ ಕೃಷ್ಣ ತಿಳಿಸಿದರು.<br /> ಪಟ್ಟಣದ ಕಲ್ಪತರು ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ತಾಲ್ಲೂಕಿನ ಹೊಡಕೆಶೆಟ್ಟ ಹಳ್ಳಿಯಲ್ಲಿ ನಡೆದ ವಿಶೇಷ ಶ್ರಮದಾನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸೋಮವಾರ ಮಾತನಾಡಿದರು. <br /> <br /> ಸಮಾಜದಲ್ಲಿ ಅನೇಕ ಅಸಮಾನತೆಗಳು ತಾಂಡವ ವಾಡುತ್ತಿದ್ದು, ಇದರಿಂದಾಗಿ ದೇಶವು ಹಲವಾರು ಸಂಕಷ್ಟಗಳನ್ನು ಎದುರಿಸಬೇಕಾಗಿದೆ. ಇದನ್ನು ಯುವಜನರು ಅರಿತು ಕೊಂಡು ಸಾಮಾಜಿಕ ಕ್ರಾಂತಿಗೆ ಮುಂದಾಗಬೇಕು ಎಂದರು.ಸಮಾರೋಪ ಭಾಷಣ ಮಾಡಿದ ಮಾಜಿ ಶಾಸಕ ಬಿ.ಪ್ರಕಾಶ್, ಯುವಜನರು ನಾಯಕತ್ವದ ಗುಣಗಳನ್ನು ಮೈಗೂಡಿಸಿ ಕೊಳ್ಳಬೇಕು. ಪರೋಪಕಾರ, ಸಹಕಾರದ ಚಿಂತನೆ ಗಳನ್ನು ಅಳವಡಿಸಿಕೊಳ್ಳಬೇಕು ಎಂದರು.<br /> <br /> ಮನ್ಮುಲ್ ಅಧ್ಯಕ್ಷ ಎಂ.ಬಿ. ಹರೀಶ್, ಜಿ.ಪಂ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್, ಮಾಜಿ ಸದಸ್ಯ ಅಘಲಯ ಮಂಜು ನಾಥ್, ತಾ.ಪಂ ಸದಸ್ಯ ಸೋಮ ಶೇಖರ್, ಮುಖಂಡ ರಾದ ಕೆ.ಆರ್. ನೀಲಕಂಠ, ಹಾದ ನೂರು ಪರಮೇಶ್ ಶಿಬಿರಾಧಿಕಾರಿ ಆರ್.ಎಸ್.ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪೇಟೆ: </strong>ಸಾಮಾಜಿಕ ಅನಿಷ್ಟಗಳನ್ನು ತೊಲಗಿಸಿ, ದೇಶವನ್ನು ಸದೃಢವಾಗಿ ನಿರ್ಮಿಸಲು ಯುವ ಜನರು ಪಣತೊಡಬೇಕು ಎಂದು ಮಾಜಿ ಸ್ಪೀಕರ್ ಕೃಷ್ಣ ತಿಳಿಸಿದರು.<br /> ಪಟ್ಟಣದ ಕಲ್ಪತರು ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ತಾಲ್ಲೂಕಿನ ಹೊಡಕೆಶೆಟ್ಟ ಹಳ್ಳಿಯಲ್ಲಿ ನಡೆದ ವಿಶೇಷ ಶ್ರಮದಾನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸೋಮವಾರ ಮಾತನಾಡಿದರು. <br /> <br /> ಸಮಾಜದಲ್ಲಿ ಅನೇಕ ಅಸಮಾನತೆಗಳು ತಾಂಡವ ವಾಡುತ್ತಿದ್ದು, ಇದರಿಂದಾಗಿ ದೇಶವು ಹಲವಾರು ಸಂಕಷ್ಟಗಳನ್ನು ಎದುರಿಸಬೇಕಾಗಿದೆ. ಇದನ್ನು ಯುವಜನರು ಅರಿತು ಕೊಂಡು ಸಾಮಾಜಿಕ ಕ್ರಾಂತಿಗೆ ಮುಂದಾಗಬೇಕು ಎಂದರು.ಸಮಾರೋಪ ಭಾಷಣ ಮಾಡಿದ ಮಾಜಿ ಶಾಸಕ ಬಿ.ಪ್ರಕಾಶ್, ಯುವಜನರು ನಾಯಕತ್ವದ ಗುಣಗಳನ್ನು ಮೈಗೂಡಿಸಿ ಕೊಳ್ಳಬೇಕು. ಪರೋಪಕಾರ, ಸಹಕಾರದ ಚಿಂತನೆ ಗಳನ್ನು ಅಳವಡಿಸಿಕೊಳ್ಳಬೇಕು ಎಂದರು.<br /> <br /> ಮನ್ಮುಲ್ ಅಧ್ಯಕ್ಷ ಎಂ.ಬಿ. ಹರೀಶ್, ಜಿ.ಪಂ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್, ಮಾಜಿ ಸದಸ್ಯ ಅಘಲಯ ಮಂಜು ನಾಥ್, ತಾ.ಪಂ ಸದಸ್ಯ ಸೋಮ ಶೇಖರ್, ಮುಖಂಡ ರಾದ ಕೆ.ಆರ್. ನೀಲಕಂಠ, ಹಾದ ನೂರು ಪರಮೇಶ್ ಶಿಬಿರಾಧಿಕಾರಿ ಆರ್.ಎಸ್.ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>