<p><strong>ಕೆಜಿಎಫ್:</strong> ಪ್ರತಿಯೊಬ್ಬರು ಸಾಮಾಜಿಕ ಜವಾಬ್ದಾರಿ ಅರಿಯಬೇಕಾಗಿದೆ. ಈ ನಿಟ್ಟಿನಲ್ಲಿ ಎನ್ಎಸ್ಎಸ್ ಅಂತಹ ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ಸಾಮಾಜಿಕ ಕರ್ತವ್ಯವನ್ನು ಅರಿತುಕೊಳ್ಳುವುದು ಸಾಧ್ಯವಿದೆ~ ಎಂದು ಬೂದಿಕೋಟೆ ಸರ್ಕಾರಿ ಕಿರಿಯ ಕಾಲೇಜು ಉಪನ್ಯಾಸಕ ಜನಾರ್ದನ ಹೇಳಿದರು.<br /> <br /> ರಾಬರ್ಟ್ಸನ್ಪೇಟೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆರಂಭವಾದ ನೂತನ ಎಸ್ಎಸ್ಎಸ್ ಘಟಕ ಉದ್ಘಾಟಿಸಿ ಮಾತನಾಡಿದರು.<br /> <br /> `ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕಾದರೆ ಕೆಲವು ಜವಾಬ್ದಾರಿ ಹೊರಬೇಕು. ಸಾಮಾಜಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರೆ ನಾಯಕತ್ವ ಗುಣ ಸಹಜವಾಗಿಯೇ ಬರುತ್ತದೆ~ ಎಂದು ಸಲಹೆ ನೀಡಿದರು.<br /> <br /> ಪ್ರಾಂಶುಪಾಲ ಸುಬ್ರಹ್ಮಣ್ಯ ಆಚಾರಿ ಮಾತನಾಡಿ, ಪರೀಕ್ಷೆಯಲ್ಲಿ ಅಂಕ ಗಳಿಕೆ ಮಾತ್ರ ವಿದ್ಯಾರ್ಥಿಗಳಿಗೆ ಮಾನದಂಡವಾಗಬಾರದು. ಜೀವನದಲ್ಲಿ ಮೌಲ್ಯಗಳನ್ನು ಸಹ ಬೆಳೆಸಿಕೊಳ್ಳಬೇಕು ಎಂದರು.<br /> ಎನ್ಎಸ್ಎಸ್ ಅಧಿಕಾರಿ ಪ್ರಭಾಕರರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಮಂಜುನಾಥ ರಾವ್, ಉಪನ್ಯಾಸಕರಾದ ಧನಲಕ್ಷ್ಮಿ, ಚಂದ್ರಪ್ಪ, ರಾಮಚಂದ್ರ ಹಾಜರಿದ್ದರು.<br /> ಹರಿನಾಥ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ಪ್ರತಿಯೊಬ್ಬರು ಸಾಮಾಜಿಕ ಜವಾಬ್ದಾರಿ ಅರಿಯಬೇಕಾಗಿದೆ. ಈ ನಿಟ್ಟಿನಲ್ಲಿ ಎನ್ಎಸ್ಎಸ್ ಅಂತಹ ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ಸಾಮಾಜಿಕ ಕರ್ತವ್ಯವನ್ನು ಅರಿತುಕೊಳ್ಳುವುದು ಸಾಧ್ಯವಿದೆ~ ಎಂದು ಬೂದಿಕೋಟೆ ಸರ್ಕಾರಿ ಕಿರಿಯ ಕಾಲೇಜು ಉಪನ್ಯಾಸಕ ಜನಾರ್ದನ ಹೇಳಿದರು.<br /> <br /> ರಾಬರ್ಟ್ಸನ್ಪೇಟೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆರಂಭವಾದ ನೂತನ ಎಸ್ಎಸ್ಎಸ್ ಘಟಕ ಉದ್ಘಾಟಿಸಿ ಮಾತನಾಡಿದರು.<br /> <br /> `ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕಾದರೆ ಕೆಲವು ಜವಾಬ್ದಾರಿ ಹೊರಬೇಕು. ಸಾಮಾಜಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರೆ ನಾಯಕತ್ವ ಗುಣ ಸಹಜವಾಗಿಯೇ ಬರುತ್ತದೆ~ ಎಂದು ಸಲಹೆ ನೀಡಿದರು.<br /> <br /> ಪ್ರಾಂಶುಪಾಲ ಸುಬ್ರಹ್ಮಣ್ಯ ಆಚಾರಿ ಮಾತನಾಡಿ, ಪರೀಕ್ಷೆಯಲ್ಲಿ ಅಂಕ ಗಳಿಕೆ ಮಾತ್ರ ವಿದ್ಯಾರ್ಥಿಗಳಿಗೆ ಮಾನದಂಡವಾಗಬಾರದು. ಜೀವನದಲ್ಲಿ ಮೌಲ್ಯಗಳನ್ನು ಸಹ ಬೆಳೆಸಿಕೊಳ್ಳಬೇಕು ಎಂದರು.<br /> ಎನ್ಎಸ್ಎಸ್ ಅಧಿಕಾರಿ ಪ್ರಭಾಕರರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಮಂಜುನಾಥ ರಾವ್, ಉಪನ್ಯಾಸಕರಾದ ಧನಲಕ್ಷ್ಮಿ, ಚಂದ್ರಪ್ಪ, ರಾಮಚಂದ್ರ ಹಾಜರಿದ್ದರು.<br /> ಹರಿನಾಥ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>