<p>ಚೆನ್ನೈ(ಪಿಟಿಐ): ಸಾಮಾಜಿಕ ಮಾಧ್ಯಮಗಳಲ್ಲಿ ಚುನಾವಣಾ ಪ್ರಚಾರ ನಡೆಸಲು ಚುನಾವಣಾ ಆಯೋಗ ನಿಯೋಜಿಸಿರುವ ಸಮಿತಿಯ ಅನುಮತಿ ಪಡೆದುಕೊಳ್ಳುವುದು ಕಡ್ಡಾಯ ಎಂದು ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ ಪ್ರವೀಣ ಕುಮಾರ ಹೇಳಿದ್ದಾರೆ.<br /> <br /> ‘ಎಐಡಿಎಂಕೆ ಸಾಮಾಜಿಕ ಮಾಧ್ಯಮದಲ್ಲಿ ನಡೆಸಲು ಉದ್ದೇಶಿಸಿರುವ ಚುನಾವಣಾ ಪ್ರಚಾರದ ಕುರಿತು ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗ ಹೇಳಿದೆ. ಪಕ್ಷವು ತನ್ನ ಪ್ರಚಾರ ವಿಷಯಗಳನ್ನು ಒಳಗೊಂಡ ಸಿಡಿಯನ್ನು ಚುನಾವಣಾ ಆಯೋಗಕ್ಕೆ ನೀಡುತ್ತದೆ. ಚುನಾವಣಾ ಆಯೋಗದಿಂದ ಈ ಉದ್ದೇಶಕ್ಕಾಗಿಯೇ ನಿಯೋಜಿತಗೊಂಡ ಸಮಿತಿಯ ಸಿಡಿಯನ್ನು ವೀಕ್ಷಿಸುತ್ತದೆ’ ಎಂದು ಪ್ರವೀಣ ಹೇಳಿದ್ದಾರೆ.<br /> <br /> <strong>ಫೇಸ್ಬುಕ್ ಮೊರೆ ಹೋದ ಸಿಬಲ್ </strong><br /> ನವದೆಹಲಿ ವರದಿ: ಚುನಾವಣಾ ಕಾವು ಏರುತ್ತಿದ್ದಂತೆಯೇ ಕೇಂದ್ರ ಕಾನೂನು ಮತ್ತು ದೂರಸಂಪರ್ಕ ಖಾತೆ ಸಚಿವ ಕಪಿಲ್ ಸಿಬಲ್ ಪ್ರಚಾರಕ್ಕಾಗಿ ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾರೆ.<br /> <br /> ರಾಜಕೀಯ ವಿರೋಧಿಗಳು ತಮ್ಮ ವಿರುದ್ಧ ನಡೆಸುತ್ತಿರುವ ಅಪಪ್ರಚಾರಕ್ಕೆ ಫೇಸ್ಬುಕ್ ಮೂಲಕ ಉತ್ತರಿಸುತ್ತಿದ್ದಾರೆ.<br /> ಚುನಾವಣಾ ವೇಳೆ ಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದು, ಸರಿಯಾದ ಮಾಹಿತಿಯನ್ನು ಅವರಿಗ ತಲುಪಿಸಲು ಸಾಮಾಜಿಕ ಜಾಲತಾಣಗಳ ಅಗತ್ಯವಿದೆ ಎಂದು ಸಿಬಲ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.<br /> <br /> ‘ಫೇಸ್ಬುಕ್ ಮೂಲಕ ಹೆಚ್ಚು ಜನರನ್ನು ತಲುಪಬಹುದು. ಬಿಜೆಪಿಯ ರಾಜಕೀಯ ಪ್ರೇರಿತ ಅಪಪ್ರಚಾರ ತಡೆಯಲು ಮತ್ತು ನನ್ನ ಕೆಲಸಗಳ ಬಗ್ಗೆ ಜನರಿಗೆ ಮಾಹಿತಿ ತಿಳಿಸಲು ಫೇಸ್ಬುಕ್ ಅನುಕೂಲವಾಗಲಿದೆ’ ಎಂದು ಸಿಬಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ(ಪಿಟಿಐ): ಸಾಮಾಜಿಕ ಮಾಧ್ಯಮಗಳಲ್ಲಿ ಚುನಾವಣಾ ಪ್ರಚಾರ ನಡೆಸಲು ಚುನಾವಣಾ ಆಯೋಗ ನಿಯೋಜಿಸಿರುವ ಸಮಿತಿಯ ಅನುಮತಿ ಪಡೆದುಕೊಳ್ಳುವುದು ಕಡ್ಡಾಯ ಎಂದು ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ ಪ್ರವೀಣ ಕುಮಾರ ಹೇಳಿದ್ದಾರೆ.<br /> <br /> ‘ಎಐಡಿಎಂಕೆ ಸಾಮಾಜಿಕ ಮಾಧ್ಯಮದಲ್ಲಿ ನಡೆಸಲು ಉದ್ದೇಶಿಸಿರುವ ಚುನಾವಣಾ ಪ್ರಚಾರದ ಕುರಿತು ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗ ಹೇಳಿದೆ. ಪಕ್ಷವು ತನ್ನ ಪ್ರಚಾರ ವಿಷಯಗಳನ್ನು ಒಳಗೊಂಡ ಸಿಡಿಯನ್ನು ಚುನಾವಣಾ ಆಯೋಗಕ್ಕೆ ನೀಡುತ್ತದೆ. ಚುನಾವಣಾ ಆಯೋಗದಿಂದ ಈ ಉದ್ದೇಶಕ್ಕಾಗಿಯೇ ನಿಯೋಜಿತಗೊಂಡ ಸಮಿತಿಯ ಸಿಡಿಯನ್ನು ವೀಕ್ಷಿಸುತ್ತದೆ’ ಎಂದು ಪ್ರವೀಣ ಹೇಳಿದ್ದಾರೆ.<br /> <br /> <strong>ಫೇಸ್ಬುಕ್ ಮೊರೆ ಹೋದ ಸಿಬಲ್ </strong><br /> ನವದೆಹಲಿ ವರದಿ: ಚುನಾವಣಾ ಕಾವು ಏರುತ್ತಿದ್ದಂತೆಯೇ ಕೇಂದ್ರ ಕಾನೂನು ಮತ್ತು ದೂರಸಂಪರ್ಕ ಖಾತೆ ಸಚಿವ ಕಪಿಲ್ ಸಿಬಲ್ ಪ್ರಚಾರಕ್ಕಾಗಿ ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾರೆ.<br /> <br /> ರಾಜಕೀಯ ವಿರೋಧಿಗಳು ತಮ್ಮ ವಿರುದ್ಧ ನಡೆಸುತ್ತಿರುವ ಅಪಪ್ರಚಾರಕ್ಕೆ ಫೇಸ್ಬುಕ್ ಮೂಲಕ ಉತ್ತರಿಸುತ್ತಿದ್ದಾರೆ.<br /> ಚುನಾವಣಾ ವೇಳೆ ಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದು, ಸರಿಯಾದ ಮಾಹಿತಿಯನ್ನು ಅವರಿಗ ತಲುಪಿಸಲು ಸಾಮಾಜಿಕ ಜಾಲತಾಣಗಳ ಅಗತ್ಯವಿದೆ ಎಂದು ಸಿಬಲ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.<br /> <br /> ‘ಫೇಸ್ಬುಕ್ ಮೂಲಕ ಹೆಚ್ಚು ಜನರನ್ನು ತಲುಪಬಹುದು. ಬಿಜೆಪಿಯ ರಾಜಕೀಯ ಪ್ರೇರಿತ ಅಪಪ್ರಚಾರ ತಡೆಯಲು ಮತ್ತು ನನ್ನ ಕೆಲಸಗಳ ಬಗ್ಗೆ ಜನರಿಗೆ ಮಾಹಿತಿ ತಿಳಿಸಲು ಫೇಸ್ಬುಕ್ ಅನುಕೂಲವಾಗಲಿದೆ’ ಎಂದು ಸಿಬಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>