<p>ಚಿತ್ರದುರ್ಗ: ಜನಸಾಮಾನ್ಯರಲ್ಲಿ ಆರ್ಥಿಕ ಮತ್ತು ಸಾಮಾಜಿಕ ಪರಿವರ್ತನೆ ತರುವುದೇ ಸರ್ಕಾರದ ಗುರಿಯಾಗಬೇಕು ಎಂದು ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಪ್ರತಿಪಾದಿಸಿದರು.<br /> <br /> ನಗರದಲ್ಲಿ ಶನಿವಾರ ನಡೆದ ಬಿಜೆಪಿ ‘ಶಕ್ತಿ ಕೇಂದ್ರ’ದ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.<br /> <br /> ಗ್ರಾಮೀಣ ಪ್ರದೇಶದ ಅಭ್ಯುದಯ ಮತ್ತು ಸಮಾಜದ ಪರಿವರ್ತನೆಗೆ ಚುನಾಯಿತ ಪ್ರತಿನಿಧಿಯ ಅಗತ್ಯವಿದೆ. ಸಮಾಜ ಕಟ್ಟುವ ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಆದ್ದರಿಂದ ಕಾರ್ಯಕರ್ತರು ಸೈದ್ಧಾಂತಿಕ ಹಿನ್ನೆಲೆಯಲ್ಲಿ ದುಡಿದು ಜನರಿಗೆ ಯೋಜನೆಗಳನ್ನು ತಲುಪಿಸಬೇಕು ಎಂದು ಕರೆ ನೀಡಿದರು.<br /> <br /> ಕಾಂಗ್ರೆಸ್ 45 ಸಾವಿರ ದಿನಗಳು, ಜೆಡಿಎಸ್ 8 ಸಾವಿರ ದಿನಗಳು ಮತ್ತು ಬಿಜೆಪಿ 1 ಸಾವಿರ ದಿನಗಳ ಆಡಳಿತ ನಡೆಸಿವೆ. ಚಿತ್ರದುರ್ಗ ಜಿಲ್ಲೆಯಲ್ಲಿನ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದರೆ 45 ಸಾವಿರ ದಿನಗಳ ಆಡಳಿತ ಹೇಗೆ ನಡೆದಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಟೀಕಿಸಿದರು.<br /> <br /> ಜಿಲ್ಲೆಯಲ್ಲಿ ಇನ್ನೂ ಅಸ್ಪೃಶ್ಯತೆ ಇದೆ. ಸುಮಾರು 172 ಹಳ್ಳಿಗಳ ಗೊಲ್ಲರಹಟ್ಟಿಗಳು ಇತರ ಸಮಾಜದ ಬಂಧುಗಳ ಜತೆ ಸಾಮರಸ್ಯವನ್ನೇ ಬೆಳೆಸದಿರುವುದು ದುರದೃಷ್ಟಕರ. ಶೋಷಣೆಯ ಸ್ಥಿತಿಯಲ್ಲಿರುವ ನಾಗರಿಕರ ಬದುಕನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯಬೇಕು. ಇದಕ್ಕಾಗಿ ಶೈಕ್ಷಣಿಕ ಕ್ರಾಂತಿಯಾಗಬೇಕು. ಕೀಳರಿಮೆಯನ್ನು ತೊಡೆದುಹಾಕುವ ಪ್ರಯತ್ನ ನಡೆಯಬೇಕು ಎಂದು ನುಡಿದರು.<br /> <br /> ಅನೇಕ ರಾಜಕೀಯ ಪಕ್ಷಗಳಿಗೆ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾರ್ಯಕರ್ತರು ನೆನಪಾಗುತ್ತಾರೆ. ಬಿಜೆಪಿಯಲ್ಲಿ ಮಾತ್ರ ನಿರಂತರ ಬೂತ್ಮಟ್ಟದಲ್ಲಿ ಚಟುವಟಿಕೆಗಳು ನಡೆಯುತ್ತವೆ ಎಂದರು.<br /> <br /> ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ಮುಖಂಡರಾದ ಅನ್ವರ್ ಮಾನಿಪಾಡಿ, ನಂದೀಶ್, ಗಿರೀಶ್ ಪಟೇಲ್, ಟಿ. ಗುರುಸಿದ್ಧನಗೌಡ, ಗೀತಾ ಧನಂಜಯ, ಸಿದ್ದೇಶ್ ಯಾದವ್ ಹಾಜರಿದ್ದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಜನಸಾಮಾನ್ಯರಲ್ಲಿ ಆರ್ಥಿಕ ಮತ್ತು ಸಾಮಾಜಿಕ ಪರಿವರ್ತನೆ ತರುವುದೇ ಸರ್ಕಾರದ ಗುರಿಯಾಗಬೇಕು ಎಂದು ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಪ್ರತಿಪಾದಿಸಿದರು.<br /> <br /> ನಗರದಲ್ಲಿ ಶನಿವಾರ ನಡೆದ ಬಿಜೆಪಿ ‘ಶಕ್ತಿ ಕೇಂದ್ರ’ದ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.<br /> <br /> ಗ್ರಾಮೀಣ ಪ್ರದೇಶದ ಅಭ್ಯುದಯ ಮತ್ತು ಸಮಾಜದ ಪರಿವರ್ತನೆಗೆ ಚುನಾಯಿತ ಪ್ರತಿನಿಧಿಯ ಅಗತ್ಯವಿದೆ. ಸಮಾಜ ಕಟ್ಟುವ ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಆದ್ದರಿಂದ ಕಾರ್ಯಕರ್ತರು ಸೈದ್ಧಾಂತಿಕ ಹಿನ್ನೆಲೆಯಲ್ಲಿ ದುಡಿದು ಜನರಿಗೆ ಯೋಜನೆಗಳನ್ನು ತಲುಪಿಸಬೇಕು ಎಂದು ಕರೆ ನೀಡಿದರು.<br /> <br /> ಕಾಂಗ್ರೆಸ್ 45 ಸಾವಿರ ದಿನಗಳು, ಜೆಡಿಎಸ್ 8 ಸಾವಿರ ದಿನಗಳು ಮತ್ತು ಬಿಜೆಪಿ 1 ಸಾವಿರ ದಿನಗಳ ಆಡಳಿತ ನಡೆಸಿವೆ. ಚಿತ್ರದುರ್ಗ ಜಿಲ್ಲೆಯಲ್ಲಿನ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದರೆ 45 ಸಾವಿರ ದಿನಗಳ ಆಡಳಿತ ಹೇಗೆ ನಡೆದಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಟೀಕಿಸಿದರು.<br /> <br /> ಜಿಲ್ಲೆಯಲ್ಲಿ ಇನ್ನೂ ಅಸ್ಪೃಶ್ಯತೆ ಇದೆ. ಸುಮಾರು 172 ಹಳ್ಳಿಗಳ ಗೊಲ್ಲರಹಟ್ಟಿಗಳು ಇತರ ಸಮಾಜದ ಬಂಧುಗಳ ಜತೆ ಸಾಮರಸ್ಯವನ್ನೇ ಬೆಳೆಸದಿರುವುದು ದುರದೃಷ್ಟಕರ. ಶೋಷಣೆಯ ಸ್ಥಿತಿಯಲ್ಲಿರುವ ನಾಗರಿಕರ ಬದುಕನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯಬೇಕು. ಇದಕ್ಕಾಗಿ ಶೈಕ್ಷಣಿಕ ಕ್ರಾಂತಿಯಾಗಬೇಕು. ಕೀಳರಿಮೆಯನ್ನು ತೊಡೆದುಹಾಕುವ ಪ್ರಯತ್ನ ನಡೆಯಬೇಕು ಎಂದು ನುಡಿದರು.<br /> <br /> ಅನೇಕ ರಾಜಕೀಯ ಪಕ್ಷಗಳಿಗೆ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾರ್ಯಕರ್ತರು ನೆನಪಾಗುತ್ತಾರೆ. ಬಿಜೆಪಿಯಲ್ಲಿ ಮಾತ್ರ ನಿರಂತರ ಬೂತ್ಮಟ್ಟದಲ್ಲಿ ಚಟುವಟಿಕೆಗಳು ನಡೆಯುತ್ತವೆ ಎಂದರು.<br /> <br /> ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ಮುಖಂಡರಾದ ಅನ್ವರ್ ಮಾನಿಪಾಡಿ, ನಂದೀಶ್, ಗಿರೀಶ್ ಪಟೇಲ್, ಟಿ. ಗುರುಸಿದ್ಧನಗೌಡ, ಗೀತಾ ಧನಂಜಯ, ಸಿದ್ದೇಶ್ ಯಾದವ್ ಹಾಜರಿದ್ದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>