<p>ಬೆಂಗಳೂರು: ಹೆಬ್ಬಗೋಡಿ ಸಮೀಪದ ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ಸಾಮಿಲ್ಗೆ ಶನಿವಾರ ನಸುಕಿನ ವೇಳೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಹೋಗಿವೆ.<br /> <br /> ‘ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ‘ಶ್ರೀ ಮಂಜುನಾಥ ಟಿಂಬರ್ ಅಂಡ್ ಸಾಮಿಲ್ಸ್’ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಬೆಳಗಿನ ಜಾವ 3.30ಕ್ಕೆ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಬಂತು.<br /> <br /> ಕೂಡಲೇ 14 ವಾಹನಗಳಲ್ಲಿ ಸ್ಥಳಕ್ಕೆ ತೆರಳಿದ 75 ಮಂದಿ ಸಿಬ್ಬಂದಿ, ಸತತ ಎಂಟೂವರೆ ತಾಸುಗಳ ಕಾಲ ಕಾರ್ಯಾಚರಣೆ ನಡೆಸಿದರು. ಅಂತಿಮವಾಗಿ ಶನಿವಾರ ಮಧ್ಯಾಹ್ನ 12.15ಕ್ಕೆ ಬೆಂಕಿ ನಂದಿಸುವ ಕಾರ್ಯ ಪೂರ್ಣಗೊಂಡಿತು’ ಎಂದು ಜಿಲ್ಲಾ ಅಗ್ನಿಶಾಮಕಾಧಿಕಾರಿ ಎಂ.ಬಿ.ಪುಟ್ಟಸುಬ್ಬಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ‘ಘಟನಾ ಸಂದರ್ಭದಲ್ಲಿ ಕಟ್ಟಡದಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಡದಿಂದ ದಟ್ಟ ಹೊಗೆ ಬರುತ್ತಿದ್ದನ್ನು ಕಂಡ ಸೆಕ್ಯುರಿಟಿ ಗಾರ್ಡ್ ನರೇಂದ್ರ, ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.<br /> <br /> ನಂತರ ಪೊಲೀಸರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಸಿಬ್ಬಂದಿ ಸ್ಥಳಕ್ಕೆ ತೆರಳುವ ವೇಳೆಗಾಗಲೇ ಬೆಂಕಿಯ ತೀವ್ರತೆ ಹೆಚ್ಚಾಗಿತ್ತು.<br /> <br /> ಮುಂಜಾಗ್ರತಾ ಕ್ರಮವಾಗಿ ಅಕ್ಕಪಕ್ಕದ ಮನೆಗಳಲ್ಲಿದ್ದ ಅಡುಗೆ ಅನಿಲದ ಸಿಲಿಂಡರ್ಗಳನ್ನು ಬೇರೆಡೆ ವರ್ಗಾಯಿಸಲಾಯಿತು’ ಎಂದು ಮಾಹಿತಿ ನೀಡಿದರು.<br /> <br /> ‘ಕೆಲ ಸಿಬ್ಬಂದಿ ಮಳಿಗೆಯ ಬಾಗಿಲನ್ನು ಮೀಟಿ ಒಳನುಗ್ಗಿದರು. ಮತ್ತೆ ಕೆಲವರು ಪಕ್ಕದ ಕಟ್ಟಡಗಳನ್ನೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಮಳಿಗೆ ಒಳಭಾಗದಿಂದ ದಟ್ಟ ಹೊಗೆ ಬರುತ್ತಿದ್ದರಿಂದ ಕಾರ್ಯಾಚರಣೆ ಕಷ್ಟವಾಯಿತು.<br /> <br /> ಅವಘಡದಲ್ಲಿ ಈ ಕಟ್ಟಡಕ್ಕೆ ಹೊಂದಿಕೊಂಡಂತೆ ಇದ್ದ ಎಲೆಕ್ಟ್ರಾನಿಕ್ ಉಪಕರಣಗಳ ಮಳಿಗೆ ಕೂಡ ಸುಟ್ಟು ಹೋಗಿದೆ’ ಎಂದರು.<br /> ‘ಹೊನ್ನೆ, ಮತ್ತಿ, ಬೀಟೆ ಸೇರಿದಂತೆ ವಿವಿಧ ಜಾತಿಯ ಮರದ ದಿಮ್ಮಿಗಳು ಬೆಂಕಿಗೆ ಆಹುತಿಯಾಗಿದ್ದು, ಸುಮಾರು ₨ 1 ಕೋಟಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ಸಾಮಿಲ್ ಮಾಲೀಕ ಮಂಜುನಾಥ್ ಹೇಳಿಕೆ ಕೊಟ್ಟಿದ್ದಾರೆ.<br /> <br /> ಈ ಬಗ್ಗೆ ತಪಾಸಣೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ನಿಖರವಾಗಿ ತಿಳಿದಿಲ್ಲ’ ಎಂದು ಪುಟ್ಟಸುಬ್ಬಪ್ಪ ಮಾಹಿತಿ ನೀಡಿದರು.<br /> <br /> <strong>ತಪ್ಪಿದ ಭಾರೀ ಅನಾಹುತ</strong><br /> <span style="font-size: 26px;">ಸಾಮಿಲ್ ಕಟ್ಟಡಕ್ಕೆ ಹೊಂದಿಕೊಂಡಿದ್ದ ಆದರ್ಶ ವರ್ಕ್ ಶಾಫ್ ಕೂಡ ಅವಘಡದಲ್ಲಿ ಸುಟ್ಟು ಹೋಗಿದೆ. ಈ ವರ್ಕ್ಶಾಪ್ನ ಮೇಲಿನ ಎರಡು ಮಹಡಿಗಳಲ್ಲಿ ನಾಲ್ಕು ಕುಟುಂಬಗಳು ವಾಸವಾಗಿವೆ.</span></p>.<p>ಬೆಂಕಿಯ ಶಾಖದಿಂದ ಎಚ್ಚರಗೊಂಡ ಆ ಕುಟುಂಬಗಳ ಒಟ್ಟು 20 ಮಂದಿ ಸದಸ್ಯರು, ತಕ್ಷಣ ಕೆಳಗಿಳಿದು ಬಂದು ತಮ್ಮನ್ನು ರಕ್ಷಿಸಿಕೊಂಡಿದ್ದಾರೆ. ನಂತರ ಬೆಂಕಿಯ ಜ್ವಾಲೆ ಅವರ ಮನೆಗಳಿಗೂ ವ್ಯಾಪಿಸಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಹೆಬ್ಬಗೋಡಿ ಸಮೀಪದ ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ಸಾಮಿಲ್ಗೆ ಶನಿವಾರ ನಸುಕಿನ ವೇಳೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಹೋಗಿವೆ.<br /> <br /> ‘ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ‘ಶ್ರೀ ಮಂಜುನಾಥ ಟಿಂಬರ್ ಅಂಡ್ ಸಾಮಿಲ್ಸ್’ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಬೆಳಗಿನ ಜಾವ 3.30ಕ್ಕೆ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಬಂತು.<br /> <br /> ಕೂಡಲೇ 14 ವಾಹನಗಳಲ್ಲಿ ಸ್ಥಳಕ್ಕೆ ತೆರಳಿದ 75 ಮಂದಿ ಸಿಬ್ಬಂದಿ, ಸತತ ಎಂಟೂವರೆ ತಾಸುಗಳ ಕಾಲ ಕಾರ್ಯಾಚರಣೆ ನಡೆಸಿದರು. ಅಂತಿಮವಾಗಿ ಶನಿವಾರ ಮಧ್ಯಾಹ್ನ 12.15ಕ್ಕೆ ಬೆಂಕಿ ನಂದಿಸುವ ಕಾರ್ಯ ಪೂರ್ಣಗೊಂಡಿತು’ ಎಂದು ಜಿಲ್ಲಾ ಅಗ್ನಿಶಾಮಕಾಧಿಕಾರಿ ಎಂ.ಬಿ.ಪುಟ್ಟಸುಬ್ಬಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ‘ಘಟನಾ ಸಂದರ್ಭದಲ್ಲಿ ಕಟ್ಟಡದಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಡದಿಂದ ದಟ್ಟ ಹೊಗೆ ಬರುತ್ತಿದ್ದನ್ನು ಕಂಡ ಸೆಕ್ಯುರಿಟಿ ಗಾರ್ಡ್ ನರೇಂದ್ರ, ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.<br /> <br /> ನಂತರ ಪೊಲೀಸರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಸಿಬ್ಬಂದಿ ಸ್ಥಳಕ್ಕೆ ತೆರಳುವ ವೇಳೆಗಾಗಲೇ ಬೆಂಕಿಯ ತೀವ್ರತೆ ಹೆಚ್ಚಾಗಿತ್ತು.<br /> <br /> ಮುಂಜಾಗ್ರತಾ ಕ್ರಮವಾಗಿ ಅಕ್ಕಪಕ್ಕದ ಮನೆಗಳಲ್ಲಿದ್ದ ಅಡುಗೆ ಅನಿಲದ ಸಿಲಿಂಡರ್ಗಳನ್ನು ಬೇರೆಡೆ ವರ್ಗಾಯಿಸಲಾಯಿತು’ ಎಂದು ಮಾಹಿತಿ ನೀಡಿದರು.<br /> <br /> ‘ಕೆಲ ಸಿಬ್ಬಂದಿ ಮಳಿಗೆಯ ಬಾಗಿಲನ್ನು ಮೀಟಿ ಒಳನುಗ್ಗಿದರು. ಮತ್ತೆ ಕೆಲವರು ಪಕ್ಕದ ಕಟ್ಟಡಗಳನ್ನೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಮಳಿಗೆ ಒಳಭಾಗದಿಂದ ದಟ್ಟ ಹೊಗೆ ಬರುತ್ತಿದ್ದರಿಂದ ಕಾರ್ಯಾಚರಣೆ ಕಷ್ಟವಾಯಿತು.<br /> <br /> ಅವಘಡದಲ್ಲಿ ಈ ಕಟ್ಟಡಕ್ಕೆ ಹೊಂದಿಕೊಂಡಂತೆ ಇದ್ದ ಎಲೆಕ್ಟ್ರಾನಿಕ್ ಉಪಕರಣಗಳ ಮಳಿಗೆ ಕೂಡ ಸುಟ್ಟು ಹೋಗಿದೆ’ ಎಂದರು.<br /> ‘ಹೊನ್ನೆ, ಮತ್ತಿ, ಬೀಟೆ ಸೇರಿದಂತೆ ವಿವಿಧ ಜಾತಿಯ ಮರದ ದಿಮ್ಮಿಗಳು ಬೆಂಕಿಗೆ ಆಹುತಿಯಾಗಿದ್ದು, ಸುಮಾರು ₨ 1 ಕೋಟಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ಸಾಮಿಲ್ ಮಾಲೀಕ ಮಂಜುನಾಥ್ ಹೇಳಿಕೆ ಕೊಟ್ಟಿದ್ದಾರೆ.<br /> <br /> ಈ ಬಗ್ಗೆ ತಪಾಸಣೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ನಿಖರವಾಗಿ ತಿಳಿದಿಲ್ಲ’ ಎಂದು ಪುಟ್ಟಸುಬ್ಬಪ್ಪ ಮಾಹಿತಿ ನೀಡಿದರು.<br /> <br /> <strong>ತಪ್ಪಿದ ಭಾರೀ ಅನಾಹುತ</strong><br /> <span style="font-size: 26px;">ಸಾಮಿಲ್ ಕಟ್ಟಡಕ್ಕೆ ಹೊಂದಿಕೊಂಡಿದ್ದ ಆದರ್ಶ ವರ್ಕ್ ಶಾಫ್ ಕೂಡ ಅವಘಡದಲ್ಲಿ ಸುಟ್ಟು ಹೋಗಿದೆ. ಈ ವರ್ಕ್ಶಾಪ್ನ ಮೇಲಿನ ಎರಡು ಮಹಡಿಗಳಲ್ಲಿ ನಾಲ್ಕು ಕುಟುಂಬಗಳು ವಾಸವಾಗಿವೆ.</span></p>.<p>ಬೆಂಕಿಯ ಶಾಖದಿಂದ ಎಚ್ಚರಗೊಂಡ ಆ ಕುಟುಂಬಗಳ ಒಟ್ಟು 20 ಮಂದಿ ಸದಸ್ಯರು, ತಕ್ಷಣ ಕೆಳಗಿಳಿದು ಬಂದು ತಮ್ಮನ್ನು ರಕ್ಷಿಸಿಕೊಂಡಿದ್ದಾರೆ. ನಂತರ ಬೆಂಕಿಯ ಜ್ವಾಲೆ ಅವರ ಮನೆಗಳಿಗೂ ವ್ಯಾಪಿಸಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>