<p><strong>ಕೊಪ್ಪಳ: </strong>ಸಾರಾಯಿ ಮಾರಾಟದ ವಿರುದ್ಧ ತಾಲ್ಲೂಕಿನ ಮಾದಿನೂರು ಗ್ರಾಮದ ಮಹಿಳೆಯರು ಹೋರಾಟಕ್ಕಿಳಿದಿದ್ದಾರೆ. ಗ್ರಾಮದಲ್ಲಿ ಸಾರಾಯಿ ಮಾರಾಟವನ್ನು ನಿಷೇಧಿಸುವಂತೆ ಹಲವಾರು ಬಾರಿ ಮಾಡಿದ ಮನವಿಗೆ ಅಬಕಾರಿ ಇಲಾಖೆ ಸ್ಪಂದಿಸದೇ ಇರುವ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿಗೆ ಆಗಮಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.<br /> <br /> ಜಿಲ್ಲಾಡಳಿತ ಭವನದಲ್ಲಿರುವ ಅಬಕಾರಿ ಇಲಾಖೆಯ ಉಪ ಆಯುಕ್ತರಿಗೆ ಮನವಿ ಸಲ್ಲಿಸಿದ ಗ್ರಾಮದ ಮಹಿಳೆಯರನ್ನು ಒಳಗೊಂಡ ನಿಯೋಗ, ಕೂಡಲೇ ಸಾರಾಯಿ ಮಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.<br /> <br /> ನಿತ್ಯವೂ ಸಾರಾಯಿ ಕುಡಿದು ಗಲಾಟೆ ಮಾಡುವ ಜನರಿಂದ ಗ್ರಾಮದ ಶಾಂತಿ ಕದಡಿದೆ. ಹೀಗಾಗಿ ಕೂಡಲೇ ಸಾರಾಯಿ ಮಾರಾಟ ನಿಷೇಧಿಸಲು ಕ್ರಮ ಕೈಗೊಂಡು ಗ್ರಾಮದಲ್ಲಿ ನೆಮ್ಮದಿಯಿಂದ ಬಾಳುವಂತಹ ವಾತಾವರಣ ನಿರ್ಮಿಸಬೇಕು ಎಂದು ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿ ಕ್ರಮ ಕೈಗೊಳ್ಳದಿದ್ದರೆ ಬರುವ ದಿನಗಳಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.<br /> <br /> ಗ್ರಾಮದ ನಾಗಮ್ಮ ಪತ್ರಿಗಿಡ, ಅಕ್ಕಮ್ಮ, ಹನಮವ್ವ, ನಿಂಗನಗೌಡ, ಪ್ರಕಾಶ, ಹನುಮಂತ, ಮಂಜುನಾಥ ಮತ್ತಿತರರು ನಿಯೋಗದಲ್ಲಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಸಾರಾಯಿ ಮಾರಾಟದ ವಿರುದ್ಧ ತಾಲ್ಲೂಕಿನ ಮಾದಿನೂರು ಗ್ರಾಮದ ಮಹಿಳೆಯರು ಹೋರಾಟಕ್ಕಿಳಿದಿದ್ದಾರೆ. ಗ್ರಾಮದಲ್ಲಿ ಸಾರಾಯಿ ಮಾರಾಟವನ್ನು ನಿಷೇಧಿಸುವಂತೆ ಹಲವಾರು ಬಾರಿ ಮಾಡಿದ ಮನವಿಗೆ ಅಬಕಾರಿ ಇಲಾಖೆ ಸ್ಪಂದಿಸದೇ ಇರುವ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿಗೆ ಆಗಮಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.<br /> <br /> ಜಿಲ್ಲಾಡಳಿತ ಭವನದಲ್ಲಿರುವ ಅಬಕಾರಿ ಇಲಾಖೆಯ ಉಪ ಆಯುಕ್ತರಿಗೆ ಮನವಿ ಸಲ್ಲಿಸಿದ ಗ್ರಾಮದ ಮಹಿಳೆಯರನ್ನು ಒಳಗೊಂಡ ನಿಯೋಗ, ಕೂಡಲೇ ಸಾರಾಯಿ ಮಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.<br /> <br /> ನಿತ್ಯವೂ ಸಾರಾಯಿ ಕುಡಿದು ಗಲಾಟೆ ಮಾಡುವ ಜನರಿಂದ ಗ್ರಾಮದ ಶಾಂತಿ ಕದಡಿದೆ. ಹೀಗಾಗಿ ಕೂಡಲೇ ಸಾರಾಯಿ ಮಾರಾಟ ನಿಷೇಧಿಸಲು ಕ್ರಮ ಕೈಗೊಂಡು ಗ್ರಾಮದಲ್ಲಿ ನೆಮ್ಮದಿಯಿಂದ ಬಾಳುವಂತಹ ವಾತಾವರಣ ನಿರ್ಮಿಸಬೇಕು ಎಂದು ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿ ಕ್ರಮ ಕೈಗೊಳ್ಳದಿದ್ದರೆ ಬರುವ ದಿನಗಳಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.<br /> <br /> ಗ್ರಾಮದ ನಾಗಮ್ಮ ಪತ್ರಿಗಿಡ, ಅಕ್ಕಮ್ಮ, ಹನಮವ್ವ, ನಿಂಗನಗೌಡ, ಪ್ರಕಾಶ, ಹನುಮಂತ, ಮಂಜುನಾಥ ಮತ್ತಿತರರು ನಿಯೋಗದಲ್ಲಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>