<p><strong>ಶಿವಮೊಗ್ಗ:</strong> ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಮುಂದೂಡಿಕೆಗೆ ಲೆಕ್ಕವೇ ಇಲ್ಲ! ಪದೇ ಪದೇ ಮುಂದೂಡಲಾಗುತ್ತಿರುವ ಸಾರಿಗೆ ಪ್ರಾಧಿಕಾರದ ಸಭೆ ಈಗ ಮತ್ತೊಮ್ಮೆ ಮುಂದಕ್ಕೆ ಹೋಗಿದೆ. ಜೂನ್ 18ರಿಂದ ನಿಗದಿಯಾಗಿದ್ದ ಸಭೆ ಈಗ ಮತ್ತೆ 19ಕ್ಕೆ ಮುಂದೂಡಲ್ಪಟ್ಟಿದೆ.<br /> <br /> ಸಾರಿಗೆ ಪ್ರಾಧಿಕಾರದ ಸಭೆಗೆ ಜಿಲ್ಲಾಧಿಕಾರಿಗಳೇ ಅಧ್ಯಕ್ಷರಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸದಸ್ಯರಾಗಿರುತ್ತಾರೆ.<br /> <br /> ಕಾರ್ಯದರ್ಶಿಯಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಇರುತ್ತಾರೆ. ಈ ಮೂವರ ಸಮಯ ಹೊಂದಾಣಿಕೆ ಕಷ್ಟವಾಗುತ್ತಿರುವುದರಿಂದ ಸಭೆಗೆ ಒಂದು ದಿವಸ ನಿಗದಿಪಡಿಸಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ.<br /> ಸಭೆ ನಡೆಸುವ ಬಗ್ಗೆ ಅಧಿಕಾರಿಗಳಿಗೆ ಇಚ್ಛಾಶಕ್ತಿ ಇಲ್ಲ. ಸಾರಿಗೆ ಇಲಾಖೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಸಭೆ ಪ್ರೇರಕವಾಗುತ್ತಿತ್ತು. ಆದರೆ, ಸಭೆ ನಡೆಸುವ ಆಸಕ್ತಿ ಅಧಿಕಾರಿಗಳಿಗೆ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.<br /> <br /> `ಸಾರಿಗೆ ಪ್ರಾಧಿಕಾರದ ಸಭೆಗೆ ಜಿಲ್ಲಾಧಿಕಾರಿ-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುದ್ದು ಹಾಜರಿರಬೇಕು. ಅವರ ಬದಲಿಗೆ ಬೇರೆಯವರೂ ಸಭೆ ನಡೆಸಲು ಬರುವುದಿಲ್ಲ. ಜೂನ್ 18ರಂದು ಸಭೆ ನಿಗದಿ ಯಾಗಿತ್ತು. ಅಂದು ಗೃಹ ಸಚಿವರು ಉಡುಪಿಯಲ್ಲಿ ನಕ್ಸಲ್ ಪೀಡಿತ ಪ್ರದೇಶ ವ್ಯಾಪ್ತಿಗಳ ಅಧಿಕಾರಿಗಳ ಸಭೆ ಕರೆದಿದ್ದಾರೆ.<br /> <br /> ಅದರಲ್ಲಿ ಜಿಲ್ಲಾಧಿಕಾರಿ-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಬ್ಬರೂ ಭಾಗವಹಿಸಬೇಕಾಗಿದೆ. ಆದ್ದರಿಂದ, 19ರಂದು ಹಳೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಧಿಕಾರದ ಸಭೆ ನಡೆಯಲಿದೆ' ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಬಿ.ಕುಬೇರಪ್ಪ `ಪ್ರಜಾವಾಣಿ'ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಮುಂದೂಡಿಕೆಗೆ ಲೆಕ್ಕವೇ ಇಲ್ಲ! ಪದೇ ಪದೇ ಮುಂದೂಡಲಾಗುತ್ತಿರುವ ಸಾರಿಗೆ ಪ್ರಾಧಿಕಾರದ ಸಭೆ ಈಗ ಮತ್ತೊಮ್ಮೆ ಮುಂದಕ್ಕೆ ಹೋಗಿದೆ. ಜೂನ್ 18ರಿಂದ ನಿಗದಿಯಾಗಿದ್ದ ಸಭೆ ಈಗ ಮತ್ತೆ 19ಕ್ಕೆ ಮುಂದೂಡಲ್ಪಟ್ಟಿದೆ.<br /> <br /> ಸಾರಿಗೆ ಪ್ರಾಧಿಕಾರದ ಸಭೆಗೆ ಜಿಲ್ಲಾಧಿಕಾರಿಗಳೇ ಅಧ್ಯಕ್ಷರಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸದಸ್ಯರಾಗಿರುತ್ತಾರೆ.<br /> <br /> ಕಾರ್ಯದರ್ಶಿಯಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಇರುತ್ತಾರೆ. ಈ ಮೂವರ ಸಮಯ ಹೊಂದಾಣಿಕೆ ಕಷ್ಟವಾಗುತ್ತಿರುವುದರಿಂದ ಸಭೆಗೆ ಒಂದು ದಿವಸ ನಿಗದಿಪಡಿಸಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ.<br /> ಸಭೆ ನಡೆಸುವ ಬಗ್ಗೆ ಅಧಿಕಾರಿಗಳಿಗೆ ಇಚ್ಛಾಶಕ್ತಿ ಇಲ್ಲ. ಸಾರಿಗೆ ಇಲಾಖೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಸಭೆ ಪ್ರೇರಕವಾಗುತ್ತಿತ್ತು. ಆದರೆ, ಸಭೆ ನಡೆಸುವ ಆಸಕ್ತಿ ಅಧಿಕಾರಿಗಳಿಗೆ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.<br /> <br /> `ಸಾರಿಗೆ ಪ್ರಾಧಿಕಾರದ ಸಭೆಗೆ ಜಿಲ್ಲಾಧಿಕಾರಿ-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುದ್ದು ಹಾಜರಿರಬೇಕು. ಅವರ ಬದಲಿಗೆ ಬೇರೆಯವರೂ ಸಭೆ ನಡೆಸಲು ಬರುವುದಿಲ್ಲ. ಜೂನ್ 18ರಂದು ಸಭೆ ನಿಗದಿ ಯಾಗಿತ್ತು. ಅಂದು ಗೃಹ ಸಚಿವರು ಉಡುಪಿಯಲ್ಲಿ ನಕ್ಸಲ್ ಪೀಡಿತ ಪ್ರದೇಶ ವ್ಯಾಪ್ತಿಗಳ ಅಧಿಕಾರಿಗಳ ಸಭೆ ಕರೆದಿದ್ದಾರೆ.<br /> <br /> ಅದರಲ್ಲಿ ಜಿಲ್ಲಾಧಿಕಾರಿ-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಬ್ಬರೂ ಭಾಗವಹಿಸಬೇಕಾಗಿದೆ. ಆದ್ದರಿಂದ, 19ರಂದು ಹಳೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಧಿಕಾರದ ಸಭೆ ನಡೆಯಲಿದೆ' ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಬಿ.ಕುಬೇರಪ್ಪ `ಪ್ರಜಾವಾಣಿ'ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>