<p><strong>ಇಸ್ಲಾಮಾಬಾದ್:</strong> ಈ ತಿಂಗಳ ಅಂತ್ಯಕ್ಕೆ ನಡೆಯಲಿರುವ ಸಾರ್ಕ್ ದೇಶಗಳ ಹಣಕಾಸು ಸಚಿವರ ಸಮಾವೇಶದಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಭಾಗವಹಿಸುವುದಿಲ್ಲ.</p>.<p>ಸರಕಾರದ ಮೂಲಗಳ ಪ್ರಕಾರ ಆಗಸ್ಟ್ 25-26 ರಂದು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಅವರು ಭಾರತವನ್ನು ಪ್ರತಿನಿಧಿಕರಿಸಲಿದ್ದಾರೆ.<br /> <br /> ಸಮಾವೇಶದಲ್ಲಿ ಭಾಗವಹಿಸಲಿರುವ ಸಚಿವ ಅರುಣ್ ಜೇಟ್ಲಿ ಅವರಿಗೆ ಉತ್ತಮ ಆತಿಥ್ಯ ನೀಡಲು ಪಾಕಿಸ್ತಾನ ನಿರ್ಧರಿಸಿದೆ ಎಂದು ಎರಡು ದಿನಗಳ ಹಿಂದೆಯಷ್ಟೇ ಪಾಕ್ ಸರಕಾರದ ಮೂಲಗಳು ಹೇಳಿದ್ದವು.<br /> <br /> ಈ ಹಿಂದೆ ರಾಜ್ನಾಥ್ ಸಿಂಗ್ ಪಾಕಿಸ್ತಾನ ಪ್ರವಾಸದ ವೇಳೆ ಪ್ರತಿಭಟನೆಯ ಮುಜುಗರ ಅನುಭವಿಸಿದ್ದರು. ಆದರೆ ಅವರಿಗೆ ಎದುರಾದಂತೆ ಪ್ರತಿಭಟನೆಯ ಮುಜುಗರ ಪುನರಾವರ್ತನೆಯಾಗುವುದನ್ನು ತಪ್ಪಿಸಲು ಪಾಕಿಸ್ತಾನ ಉದ್ದೇಶಿಸಿದೆ ಎಂದು ಪಾಕ್ ಹೇಳಿಕೆ ನೀಡಿತ್ತು.</p>.<p><br /> <strong>ಏನಿದು ಘಟನೆ?: </strong> ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರು ಪಾಕಿಸ್ತಾನ ಪ್ರವಾಸದ ವೇಳೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಭಾಷಣ ಮಾಡಿದ್ದರು. ಈ ಭಾಷಣದಲ್ಲಿ ಸಿಂಗ್, ಉಗ್ರರನ್ನು ಹುತಾತ್ಮರೆಂದು ವೈಭವೀಕರಿಸಬೇಡಿ ಎಂದು ಹೇಳಿದ್ದರು. ಈ ವಿಷಯದಿಂದ ಕುಪಿತಗೊಂಡ ಪಾಕ್, ಸಿಂಗ್ ಭಾಷಣವನ್ನು ಪ್ರಸಾರ ಮಾಡಬೇಡಿ ಎಂದು ಸುದ್ದಿ ಮಾಧ್ಯಮಗಳಿಗೆ ತಾಕೀತು ನೀಡಿತ್ತು.<br /> <br /> ನನ್ನ ಭಾಷಣವನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದವೋ ಇಲ್ಲವೋ ಎಂದು ಗೊತ್ತಿಲ್ಲ. ಭಾರತದಿಂದ ಡಿಡಿ, ಎಎನ್ಐ ಮತ್ತು ಪಿಟಿಐ ವರದಿಗಾರರು ಅಲ್ಲಿಗೆ ಬಂದಿದ್ದರೂ ಅವರನ್ನು ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶಿಸಲು ಬಿಡಲಿಲ್ಲ ಎಂದು ಸಿಂಗ್ ಸಂಸತ್ನಲ್ಲಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಈ ತಿಂಗಳ ಅಂತ್ಯಕ್ಕೆ ನಡೆಯಲಿರುವ ಸಾರ್ಕ್ ದೇಶಗಳ ಹಣಕಾಸು ಸಚಿವರ ಸಮಾವೇಶದಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಭಾಗವಹಿಸುವುದಿಲ್ಲ.</p>.<p>ಸರಕಾರದ ಮೂಲಗಳ ಪ್ರಕಾರ ಆಗಸ್ಟ್ 25-26 ರಂದು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಅವರು ಭಾರತವನ್ನು ಪ್ರತಿನಿಧಿಕರಿಸಲಿದ್ದಾರೆ.<br /> <br /> ಸಮಾವೇಶದಲ್ಲಿ ಭಾಗವಹಿಸಲಿರುವ ಸಚಿವ ಅರುಣ್ ಜೇಟ್ಲಿ ಅವರಿಗೆ ಉತ್ತಮ ಆತಿಥ್ಯ ನೀಡಲು ಪಾಕಿಸ್ತಾನ ನಿರ್ಧರಿಸಿದೆ ಎಂದು ಎರಡು ದಿನಗಳ ಹಿಂದೆಯಷ್ಟೇ ಪಾಕ್ ಸರಕಾರದ ಮೂಲಗಳು ಹೇಳಿದ್ದವು.<br /> <br /> ಈ ಹಿಂದೆ ರಾಜ್ನಾಥ್ ಸಿಂಗ್ ಪಾಕಿಸ್ತಾನ ಪ್ರವಾಸದ ವೇಳೆ ಪ್ರತಿಭಟನೆಯ ಮುಜುಗರ ಅನುಭವಿಸಿದ್ದರು. ಆದರೆ ಅವರಿಗೆ ಎದುರಾದಂತೆ ಪ್ರತಿಭಟನೆಯ ಮುಜುಗರ ಪುನರಾವರ್ತನೆಯಾಗುವುದನ್ನು ತಪ್ಪಿಸಲು ಪಾಕಿಸ್ತಾನ ಉದ್ದೇಶಿಸಿದೆ ಎಂದು ಪಾಕ್ ಹೇಳಿಕೆ ನೀಡಿತ್ತು.</p>.<p><br /> <strong>ಏನಿದು ಘಟನೆ?: </strong> ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರು ಪಾಕಿಸ್ತಾನ ಪ್ರವಾಸದ ವೇಳೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಭಾಷಣ ಮಾಡಿದ್ದರು. ಈ ಭಾಷಣದಲ್ಲಿ ಸಿಂಗ್, ಉಗ್ರರನ್ನು ಹುತಾತ್ಮರೆಂದು ವೈಭವೀಕರಿಸಬೇಡಿ ಎಂದು ಹೇಳಿದ್ದರು. ಈ ವಿಷಯದಿಂದ ಕುಪಿತಗೊಂಡ ಪಾಕ್, ಸಿಂಗ್ ಭಾಷಣವನ್ನು ಪ್ರಸಾರ ಮಾಡಬೇಡಿ ಎಂದು ಸುದ್ದಿ ಮಾಧ್ಯಮಗಳಿಗೆ ತಾಕೀತು ನೀಡಿತ್ತು.<br /> <br /> ನನ್ನ ಭಾಷಣವನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದವೋ ಇಲ್ಲವೋ ಎಂದು ಗೊತ್ತಿಲ್ಲ. ಭಾರತದಿಂದ ಡಿಡಿ, ಎಎನ್ಐ ಮತ್ತು ಪಿಟಿಐ ವರದಿಗಾರರು ಅಲ್ಲಿಗೆ ಬಂದಿದ್ದರೂ ಅವರನ್ನು ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶಿಸಲು ಬಿಡಲಿಲ್ಲ ಎಂದು ಸಿಂಗ್ ಸಂಸತ್ನಲ್ಲಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>