<p><strong>ಬೆಂಗಳೂರು:</strong> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಉಪ ಆಯುಕ್ತರಾಗಿದ್ದ ಸಿ. ತ್ಯಾಗರಾಜ್ ಅವರನ್ನು ಪಾಲಿಕೆಯ ಆಯುಕ್ತರ ಸಲಹೆಗಾರ ಸ್ಥಾನಕ್ಕೆ ನೇಮಕ ಮಾಡಿದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.<br /> <br /> ತ್ಯಾಗರಾಜ್ ಅವರು ಕರ್ತವ್ಯದಿಂದ ನಿವೃತ್ತರಾದ ಮಾರನೆಯ ದಿನವೇ ಅವರನ್ನು ಸಲಹೆಗಾರ ಹುದ್ದೆಗೆ ನೇಮಕ ಮಾಡಲಾಗಿದೆ. ಇದು ಕರ್ನಾಟಕ ಪೌರಾಡಳಿತ ಸಂಸ್ಥೆಗಳ ಕಾಯ್ದೆ ನಿಯಮ 20(ಬಿ)ಯ ಉಲ್ಲಂಘನೆ ಎಂದು ಅರ್ಜಿಯಲ್ಲಿ ದೂರಲಾಗಿದೆ.<br /> <br /> ಇದರ ವಿಚಾರಣೆಯನ್ನು ಮಂಗಳವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ, `ಇಂಥ ಅಕ್ರಮ ನೇಮಕಾತಿ ಮೂಲಕ ಸಾರ್ವಜನಿಕರ ಹಣ ಹಾಳು ಮಾಡುವುದು ತಪ್ಪು. ಈ ನೇಮಕಾತಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೂ ಒಪ್ಪಿಗೆ ನೀಡಿದ್ದಾರಾ? ಹಾಗಾದರೆ ಅವರ ವಿರುದ್ಧವೂ ಕಟು ಶಬ್ದಗಳನ್ನು ಬಳಸಿ ಆದೇಶ ಬರೆಯಬೇಕಾಗುತ್ತದೆ' ಎಂದು ಸರ್ಕಾರವನ್ನು ಮೌಖಿಕವಾಗಿ ತರಾಟೆಗೆ ತೆಗೆದುಕೊಂಡಿತು. ನಗರಾಭಿವೃದ್ಧಿ ಇಲಾಖೆ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿರುವ ಪೀಠ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಉಪ ಆಯುಕ್ತರಾಗಿದ್ದ ಸಿ. ತ್ಯಾಗರಾಜ್ ಅವರನ್ನು ಪಾಲಿಕೆಯ ಆಯುಕ್ತರ ಸಲಹೆಗಾರ ಸ್ಥಾನಕ್ಕೆ ನೇಮಕ ಮಾಡಿದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.<br /> <br /> ತ್ಯಾಗರಾಜ್ ಅವರು ಕರ್ತವ್ಯದಿಂದ ನಿವೃತ್ತರಾದ ಮಾರನೆಯ ದಿನವೇ ಅವರನ್ನು ಸಲಹೆಗಾರ ಹುದ್ದೆಗೆ ನೇಮಕ ಮಾಡಲಾಗಿದೆ. ಇದು ಕರ್ನಾಟಕ ಪೌರಾಡಳಿತ ಸಂಸ್ಥೆಗಳ ಕಾಯ್ದೆ ನಿಯಮ 20(ಬಿ)ಯ ಉಲ್ಲಂಘನೆ ಎಂದು ಅರ್ಜಿಯಲ್ಲಿ ದೂರಲಾಗಿದೆ.<br /> <br /> ಇದರ ವಿಚಾರಣೆಯನ್ನು ಮಂಗಳವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ, `ಇಂಥ ಅಕ್ರಮ ನೇಮಕಾತಿ ಮೂಲಕ ಸಾರ್ವಜನಿಕರ ಹಣ ಹಾಳು ಮಾಡುವುದು ತಪ್ಪು. ಈ ನೇಮಕಾತಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೂ ಒಪ್ಪಿಗೆ ನೀಡಿದ್ದಾರಾ? ಹಾಗಾದರೆ ಅವರ ವಿರುದ್ಧವೂ ಕಟು ಶಬ್ದಗಳನ್ನು ಬಳಸಿ ಆದೇಶ ಬರೆಯಬೇಕಾಗುತ್ತದೆ' ಎಂದು ಸರ್ಕಾರವನ್ನು ಮೌಖಿಕವಾಗಿ ತರಾಟೆಗೆ ತೆಗೆದುಕೊಂಡಿತು. ನಗರಾಭಿವೃದ್ಧಿ ಇಲಾಖೆ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿರುವ ಪೀಠ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>