<p><strong>ದಾವಣಗೆರೆ:</strong> ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸಾಲ ಮಂಜೂರಾತಿ ನೀಡುವ ವಿಚಾರದಲ್ಲಿ ಜಿಲ್ಲೆಯ ಬ್ಯಾಂಕುಗಳು ವಿಳಂಬ ಮಾಡಬಾರದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುತ್ತಿ ಜಂಬುನಾಥ್ ಸೂಚಿಸಿದರು.<br /> <br /> ಜಿ.ಪಂ. ಸಭಾಂಗಣದಲ್ಲಿ ಸೋಮವಾರ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಮ್ಮಿಕೊಂಡಿದ್ದ ಬ್ಯಾಂಕುಗಳ ವ್ಯವಹಾರದ ಜಿಲ್ಲಾಮಟ್ಟದ ಪುನರಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.ಶಿಕ್ಷಣ, ಕೃಷಿ, ವಸತಿ ಸೇರಿದಂತೆ ಸರ್ಕಾರದ ಯಾವುದೇ ಯೋಜನೆಯ ಫಲಾನುಭವಿಗಳು ಬಂದಾಗ ಬ್ಯಾಂಕ್ ಅಧಿಕಾರಿಗಳು ಸಹಕರಿಸಬೇಕು. ಇತರ ಯಾವುದೇ ನೆಪ ಹೇಳದೇ ಆದ್ಯತೆ ನೀಡಬೇಕು. <br /> <br /> ಫಲಾನುಭವಿಗಳಿಗೆ ತೊಂದರೆಯಾಗದಂತೆ ಶೀಘ್ರವಾಗಿ ಸಾಲ ಮಂಜೂರಾತಿ ಮಾಡಬೇಕು. ಯಾವುದೇ ಷರತ್ತುಗಳನ್ನು ವಿಧಿಸಬಾರದು. ಜನರನ್ನು ವಿಸ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.<br /> <br /> ವಿದ್ಯಾರ್ಥಿ ವೇತನ ಪಡೆಯುವುದಕ್ಕಾಗಿ ಬ್ಯಾಂಕ್ ಖಾತೆ ಮಾಡಿಸಲು ಬರುವ ಫಲಾನುಭವಿಗಳಿಗೆ ಕೆಲವು ಬ್ಯಾಂಕುಗಳು ಸಹಕಾರ ನೀಡುತ್ತಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಭೆಗೆ ತಿಳಿಸಿದರು.<br /> <br /> `ವಾಜಪೇಯಿ ವಸತಿ ಯೋಜನೆ~ಯ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡುವ ವಿಚಾರದಲ್ಲಿ ವಿಳಂಬ ಆಗುತ್ತಿರುವ ಬಗ್ಗೆಯೂ ದೂರು ಕೇಳಿ ಬಂತು. ಆಗ ಗುತ್ತಿ ಜಂಬುನಾಥ್ ಮಾತನಾಡಿ, ಇದೊಂದು ಮಹತ್ವದ ಯೋಜನೆಯಾಗಿದೆ. ಇಂಥ ವಿಚಾರಗಳಲ್ಲಿ ಬ್ಯಾಂಕಿನವರು ವಿಳಂಬ ಮಾಡಬಾರದು. ಈ ತಿಂಗಳೊಳಗೆ ಯೋಜನೆಯ ಸಾಲ ಮಂಜೂರಾತಿ ಮಾಡಬೇಕು ಎಂದು ತಾಕೀತು ಮಾಡಿದರು.<br /> <br /> ವಿಶೇಷವಾಗಿ ಆಕ್ಸಿಸ್ ಬ್ಯಾಂಕ್ನಂಥ ಖಾಸಗಿ ವಲಯದ ಬ್ಯಾಂಕುಗಳು ಸಹಕಾರ ನೀಡುತ್ತಿಲ್ಲ ಎಂಬ ವಿಷಯ ಸಭೆಯಲ್ಲಿ ಚರ್ಚೆಗೆ ಬಂದಿತು. ಸಾಲ ಮಂಜೂರಾತಿಗೆ ಸಂಬಂಧಿಸಿದಂತೆ, ಆಕ್ಸಿಸ್ ಬ್ಯಾಂಕ್ನವರು ಪ್ರಧಾನ ಕಚೇರಿಯಿಂದ ಒಪ್ಪಿಗೆ ಪಡೆಯಲು ಮೂರು ತಿಂಗಳು ವಿಳಂಬ ಮಾಡಿರುವ ಬಗ್ಗೆ ಆ ಬ್ಯಾಂಕಿನ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳಲಾಯಿತು. ಬ್ಯಾಂಕುಗಳು ಸಾಲ ಮರುಪಾವತಿ ಬಗ್ಗೆ ಚಿಂತೆ ಮಾಡದೇ ಸಾಲ ನೀಡುವುದಕ್ಕೆ ಆದ್ಯತೆ ಕೊಡುವಂತೆ ಸೂಚಿಸಲಾಯಿತು.<br /> <br /> `ನಬಾರ್ಡ್~ನ ಹಿರಿಯ ಅಧಿಕಾರಿ ಬಿ. ಕಲ್ಯಾಣರಾಮನ್ ಮಾತನಾಡಿ, ಪಶುಸಂಗೋಪನೆ ಇಲಾಖೆಗೆ ಸಂಬಂಧಿಸಿದ ಯೋಜನೆಗಳಿಗೆ ಸಾಲ ಮಂಜೂರಾತಿಯ ಅರ್ಜಿಗಳನ್ನು ಬ್ಯಾಂಕಿನವರು ಫಲಾನುಭವಿಗಳಿಂದ ಸ್ವೀಕರಿಸುತ್ತಿಲ್ಲ ಎಂದು ದೂರಿದರು.<br /> <br /> ಕೆನರಾ ಬ್ಯಾಂಕ್ ಹುಬ್ಬಳ್ಳಿ ವೃತ್ತದ ಸಹಾಯಕ ಜನರಲ್ ಮ್ಯಾನೇಜರ್ ಎ.ಆರ್. ಮೊಕಾಶಿ, ಭಾರತೀಯ ರಿಸರ್ವ್ ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್ ಹಸನ್ ತಾಹೀರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ. ಮಲ್ಲಿಕಾರ್ಜುನಪ್ಪ ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸಾಲ ಮಂಜೂರಾತಿ ನೀಡುವ ವಿಚಾರದಲ್ಲಿ ಜಿಲ್ಲೆಯ ಬ್ಯಾಂಕುಗಳು ವಿಳಂಬ ಮಾಡಬಾರದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುತ್ತಿ ಜಂಬುನಾಥ್ ಸೂಚಿಸಿದರು.<br /> <br /> ಜಿ.ಪಂ. ಸಭಾಂಗಣದಲ್ಲಿ ಸೋಮವಾರ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಮ್ಮಿಕೊಂಡಿದ್ದ ಬ್ಯಾಂಕುಗಳ ವ್ಯವಹಾರದ ಜಿಲ್ಲಾಮಟ್ಟದ ಪುನರಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.ಶಿಕ್ಷಣ, ಕೃಷಿ, ವಸತಿ ಸೇರಿದಂತೆ ಸರ್ಕಾರದ ಯಾವುದೇ ಯೋಜನೆಯ ಫಲಾನುಭವಿಗಳು ಬಂದಾಗ ಬ್ಯಾಂಕ್ ಅಧಿಕಾರಿಗಳು ಸಹಕರಿಸಬೇಕು. ಇತರ ಯಾವುದೇ ನೆಪ ಹೇಳದೇ ಆದ್ಯತೆ ನೀಡಬೇಕು. <br /> <br /> ಫಲಾನುಭವಿಗಳಿಗೆ ತೊಂದರೆಯಾಗದಂತೆ ಶೀಘ್ರವಾಗಿ ಸಾಲ ಮಂಜೂರಾತಿ ಮಾಡಬೇಕು. ಯಾವುದೇ ಷರತ್ತುಗಳನ್ನು ವಿಧಿಸಬಾರದು. ಜನರನ್ನು ವಿಸ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.<br /> <br /> ವಿದ್ಯಾರ್ಥಿ ವೇತನ ಪಡೆಯುವುದಕ್ಕಾಗಿ ಬ್ಯಾಂಕ್ ಖಾತೆ ಮಾಡಿಸಲು ಬರುವ ಫಲಾನುಭವಿಗಳಿಗೆ ಕೆಲವು ಬ್ಯಾಂಕುಗಳು ಸಹಕಾರ ನೀಡುತ್ತಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಭೆಗೆ ತಿಳಿಸಿದರು.<br /> <br /> `ವಾಜಪೇಯಿ ವಸತಿ ಯೋಜನೆ~ಯ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡುವ ವಿಚಾರದಲ್ಲಿ ವಿಳಂಬ ಆಗುತ್ತಿರುವ ಬಗ್ಗೆಯೂ ದೂರು ಕೇಳಿ ಬಂತು. ಆಗ ಗುತ್ತಿ ಜಂಬುನಾಥ್ ಮಾತನಾಡಿ, ಇದೊಂದು ಮಹತ್ವದ ಯೋಜನೆಯಾಗಿದೆ. ಇಂಥ ವಿಚಾರಗಳಲ್ಲಿ ಬ್ಯಾಂಕಿನವರು ವಿಳಂಬ ಮಾಡಬಾರದು. ಈ ತಿಂಗಳೊಳಗೆ ಯೋಜನೆಯ ಸಾಲ ಮಂಜೂರಾತಿ ಮಾಡಬೇಕು ಎಂದು ತಾಕೀತು ಮಾಡಿದರು.<br /> <br /> ವಿಶೇಷವಾಗಿ ಆಕ್ಸಿಸ್ ಬ್ಯಾಂಕ್ನಂಥ ಖಾಸಗಿ ವಲಯದ ಬ್ಯಾಂಕುಗಳು ಸಹಕಾರ ನೀಡುತ್ತಿಲ್ಲ ಎಂಬ ವಿಷಯ ಸಭೆಯಲ್ಲಿ ಚರ್ಚೆಗೆ ಬಂದಿತು. ಸಾಲ ಮಂಜೂರಾತಿಗೆ ಸಂಬಂಧಿಸಿದಂತೆ, ಆಕ್ಸಿಸ್ ಬ್ಯಾಂಕ್ನವರು ಪ್ರಧಾನ ಕಚೇರಿಯಿಂದ ಒಪ್ಪಿಗೆ ಪಡೆಯಲು ಮೂರು ತಿಂಗಳು ವಿಳಂಬ ಮಾಡಿರುವ ಬಗ್ಗೆ ಆ ಬ್ಯಾಂಕಿನ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳಲಾಯಿತು. ಬ್ಯಾಂಕುಗಳು ಸಾಲ ಮರುಪಾವತಿ ಬಗ್ಗೆ ಚಿಂತೆ ಮಾಡದೇ ಸಾಲ ನೀಡುವುದಕ್ಕೆ ಆದ್ಯತೆ ಕೊಡುವಂತೆ ಸೂಚಿಸಲಾಯಿತು.<br /> <br /> `ನಬಾರ್ಡ್~ನ ಹಿರಿಯ ಅಧಿಕಾರಿ ಬಿ. ಕಲ್ಯಾಣರಾಮನ್ ಮಾತನಾಡಿ, ಪಶುಸಂಗೋಪನೆ ಇಲಾಖೆಗೆ ಸಂಬಂಧಿಸಿದ ಯೋಜನೆಗಳಿಗೆ ಸಾಲ ಮಂಜೂರಾತಿಯ ಅರ್ಜಿಗಳನ್ನು ಬ್ಯಾಂಕಿನವರು ಫಲಾನುಭವಿಗಳಿಂದ ಸ್ವೀಕರಿಸುತ್ತಿಲ್ಲ ಎಂದು ದೂರಿದರು.<br /> <br /> ಕೆನರಾ ಬ್ಯಾಂಕ್ ಹುಬ್ಬಳ್ಳಿ ವೃತ್ತದ ಸಹಾಯಕ ಜನರಲ್ ಮ್ಯಾನೇಜರ್ ಎ.ಆರ್. ಮೊಕಾಶಿ, ಭಾರತೀಯ ರಿಸರ್ವ್ ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್ ಹಸನ್ ತಾಹೀರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ. ಮಲ್ಲಿಕಾರ್ಜುನಪ್ಪ ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>