<p><strong>ಬೆಳಗಾವಿ: </strong>ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದರು. <br /> <br /> ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಬೆಳಗಾವಿ ತಾಲ್ಲೂಕು ಘಟಕದ ಅಧ್ಯಕ್ಷ ಅಪ್ಪಾಸಾಬ ದೇಸಾಯಿ, ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಸತತ ನಾಲ್ಕು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಸಚಿವರು ಸೇರಿದಂತೆ ಹಲವರಿಗೆ ಈ ಬಗ್ಗೆ ಸುಮಾರು 300ಕ್ಕೂ ಹೆಚ್ಚು ಮನವಿ ಸಲ್ಲಿಸಿದ್ದೇವೆ. <br /> <br /> ಆದರೆ, ಇದುವರೆಗೂ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದಿರುವುದನ್ನು ನೋಡಿದರೆ, ನಾವೆಲ್ಲ ಅಸ್ಪೃಶ್ಯ- ಬಹಿಷ್ಕೃತರೇ ಎಂಬ ಸಂದೇಹ ಮೂಡುತ್ತಿದೆ. ನಮ್ಮ ಸಾಲ ಮನ್ನಾ ಮಾಡಬೇಕು ಇಲ್ಲವೇ, ಸಾಲಗಾರ ರೈತರನ್ನು ಸರ್ಕಾರ ಮಾರಾಟ ಮಾಡಬೇಕು ಎಂದು ಒತ್ತಾಯಿಸಿದರು. <br /> <br /> ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಲ ಮನ್ನಾ ಸೌಲಭ್ಯ ಸಣ್ಣ ರೈತರಿಗೆ ದೊರಕಿಲ್ಲ. 1994- 95ರಲ್ಲಿ ಕಬ್ಬು ಕಾರ್ಖಾನೆಗಳಿಗೆ ಹೋಗದೇ ಇರುವುದರಿಂದ ರೈತರು ಕಬ್ಬಿಗೆ ಬೆಂಕಿ ಹಚ್ಚಿರುವುದರಿಂದ ಸಾಲ ಮಾಡುವಂತಾಗಿದೆ. <br /> <br /> 1997ರಲ್ಲಿ ರೈತರು ಬೆಳೆದ ಆಲುಗಡ್ಡೆಗೆ ಬೆಲೆ ಸಿಗದೇ ಸುಮಾರು ಒಂದು ನೂರು ಕೋಟಿ ರೂಪಾಯಿ ಹಾನಿ ಅನುಭವಿಸುವಂತಾಗಿದೆ. ಕ್ಯಾಬೀಜಕ್ಕೂ ಬೆಲೆ ಸಿಗದಿರುವದರಿಂದ ಹೊಲದಲ್ಲೇ ಬೆಳೆ ಕೊಳೆತು ಸುಮಾರು 25 ಕೋಟಿ ರೂಪಾಯಿ ನಷ್ಟವಾಗಿದೆ. <br /> <br /> 2001ರಲ್ಲಿ ಬರಗಾಲ ಹಾಗೂ 2005-06ರಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಸಾಲಗಾರರಾಗುವಂತಾಗಿದೆ. ಇದೀಗ ಸಾಲ ಮನ್ನಾ ಮಾಡದಿದ್ದರೆ, ಜಿಲ್ಲೆಯ ರೈತರು ಸಾಲದ ಸುಳಿಗೆ ಸಿಲುಕಿ ಮಣ್ಣಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು. <br /> <br /> ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸು ಜಾರಿಗೊಳ್ಳುತ್ತಿದೆ. ಜನಪ್ರತಿನಿಧಿಗಳ ವೇತನವೂ ದುಪ್ಪಟ್ಟಾಗಿದೆ. ಇಂಥ ಸಂದರ್ಭದಲ್ಲಿ ಬ್ರಿಟಿಷರ ಕಾಲದದಿಂದ ರೈತರ ಬೆಳೆ ಹಾನಿಗೆ ನೀಡುವ ರೂ. 400 ಪರಿಹಾರವನ್ನೇ ಇಂದಿಗೂ ನೀಡುತ್ತಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.<br /> <br /> ಈ ತಾರತಮ್ಯವನ್ನು ಕೂಡಲೇ ಕೈಬಿಟ್ಟು, ರೈತರ ಖಾಸಗಿ ಸಂಸ್ಥೆಗಳ ಸಾಲಗಳನ್ನೂ ಕೃಷಿ ಸಾಲವೆಂದು ಪರಿಗಣಿಸಿ ಮನ್ನಾ ಮಾಡಬೇಕು. ರೈತರಿಗೆ ಅಗತ್ಯವಿರುವ ಸಾಲವನ್ನು ಶೇ. 1 ಬಡ್ಡಿ ದರದಲ್ಲಿ ನೀಡಬೇಕು. ಅಲ್ಲಿಯವರೆಗೂ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅಪ್ಪಾಸಾಬ ದೇಸಾಯಿ ತಿಳಿಸಿದರು. <br /> <br /> ಸತ್ಯಾಗ್ರಹದಲ್ಲಿ ಕಲಗೌಡ ಪಾಟೀಲ, ಶಿದಲಿಂಗ ಮುದ್ದಣ್ಣವರ, ಮಾರುತಿ ಕಡೇಮನಿ, ಕಲುನಿ ಕಣಬರಕರ, ಭೈರು ಡಂಗರಲೆ, ದುಂಡಪ್ಪ ಹೊಸಪೇಟ, ಯಲ್ಲಪ್ಪ ದುಡುಂ, ಬಸು ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದರು. <br /> <br /> ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಬೆಳಗಾವಿ ತಾಲ್ಲೂಕು ಘಟಕದ ಅಧ್ಯಕ್ಷ ಅಪ್ಪಾಸಾಬ ದೇಸಾಯಿ, ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಸತತ ನಾಲ್ಕು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಸಚಿವರು ಸೇರಿದಂತೆ ಹಲವರಿಗೆ ಈ ಬಗ್ಗೆ ಸುಮಾರು 300ಕ್ಕೂ ಹೆಚ್ಚು ಮನವಿ ಸಲ್ಲಿಸಿದ್ದೇವೆ. <br /> <br /> ಆದರೆ, ಇದುವರೆಗೂ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದಿರುವುದನ್ನು ನೋಡಿದರೆ, ನಾವೆಲ್ಲ ಅಸ್ಪೃಶ್ಯ- ಬಹಿಷ್ಕೃತರೇ ಎಂಬ ಸಂದೇಹ ಮೂಡುತ್ತಿದೆ. ನಮ್ಮ ಸಾಲ ಮನ್ನಾ ಮಾಡಬೇಕು ಇಲ್ಲವೇ, ಸಾಲಗಾರ ರೈತರನ್ನು ಸರ್ಕಾರ ಮಾರಾಟ ಮಾಡಬೇಕು ಎಂದು ಒತ್ತಾಯಿಸಿದರು. <br /> <br /> ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಲ ಮನ್ನಾ ಸೌಲಭ್ಯ ಸಣ್ಣ ರೈತರಿಗೆ ದೊರಕಿಲ್ಲ. 1994- 95ರಲ್ಲಿ ಕಬ್ಬು ಕಾರ್ಖಾನೆಗಳಿಗೆ ಹೋಗದೇ ಇರುವುದರಿಂದ ರೈತರು ಕಬ್ಬಿಗೆ ಬೆಂಕಿ ಹಚ್ಚಿರುವುದರಿಂದ ಸಾಲ ಮಾಡುವಂತಾಗಿದೆ. <br /> <br /> 1997ರಲ್ಲಿ ರೈತರು ಬೆಳೆದ ಆಲುಗಡ್ಡೆಗೆ ಬೆಲೆ ಸಿಗದೇ ಸುಮಾರು ಒಂದು ನೂರು ಕೋಟಿ ರೂಪಾಯಿ ಹಾನಿ ಅನುಭವಿಸುವಂತಾಗಿದೆ. ಕ್ಯಾಬೀಜಕ್ಕೂ ಬೆಲೆ ಸಿಗದಿರುವದರಿಂದ ಹೊಲದಲ್ಲೇ ಬೆಳೆ ಕೊಳೆತು ಸುಮಾರು 25 ಕೋಟಿ ರೂಪಾಯಿ ನಷ್ಟವಾಗಿದೆ. <br /> <br /> 2001ರಲ್ಲಿ ಬರಗಾಲ ಹಾಗೂ 2005-06ರಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಸಾಲಗಾರರಾಗುವಂತಾಗಿದೆ. ಇದೀಗ ಸಾಲ ಮನ್ನಾ ಮಾಡದಿದ್ದರೆ, ಜಿಲ್ಲೆಯ ರೈತರು ಸಾಲದ ಸುಳಿಗೆ ಸಿಲುಕಿ ಮಣ್ಣಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು. <br /> <br /> ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸು ಜಾರಿಗೊಳ್ಳುತ್ತಿದೆ. ಜನಪ್ರತಿನಿಧಿಗಳ ವೇತನವೂ ದುಪ್ಪಟ್ಟಾಗಿದೆ. ಇಂಥ ಸಂದರ್ಭದಲ್ಲಿ ಬ್ರಿಟಿಷರ ಕಾಲದದಿಂದ ರೈತರ ಬೆಳೆ ಹಾನಿಗೆ ನೀಡುವ ರೂ. 400 ಪರಿಹಾರವನ್ನೇ ಇಂದಿಗೂ ನೀಡುತ್ತಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.<br /> <br /> ಈ ತಾರತಮ್ಯವನ್ನು ಕೂಡಲೇ ಕೈಬಿಟ್ಟು, ರೈತರ ಖಾಸಗಿ ಸಂಸ್ಥೆಗಳ ಸಾಲಗಳನ್ನೂ ಕೃಷಿ ಸಾಲವೆಂದು ಪರಿಗಣಿಸಿ ಮನ್ನಾ ಮಾಡಬೇಕು. ರೈತರಿಗೆ ಅಗತ್ಯವಿರುವ ಸಾಲವನ್ನು ಶೇ. 1 ಬಡ್ಡಿ ದರದಲ್ಲಿ ನೀಡಬೇಕು. ಅಲ್ಲಿಯವರೆಗೂ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅಪ್ಪಾಸಾಬ ದೇಸಾಯಿ ತಿಳಿಸಿದರು. <br /> <br /> ಸತ್ಯಾಗ್ರಹದಲ್ಲಿ ಕಲಗೌಡ ಪಾಟೀಲ, ಶಿದಲಿಂಗ ಮುದ್ದಣ್ಣವರ, ಮಾರುತಿ ಕಡೇಮನಿ, ಕಲುನಿ ಕಣಬರಕರ, ಭೈರು ಡಂಗರಲೆ, ದುಂಡಪ್ಪ ಹೊಸಪೇಟ, ಯಲ್ಲಪ್ಪ ದುಡುಂ, ಬಸು ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>