<p>ರಾಯಚೂರು: ಬರಗಾಲ ಪರಿಸ್ಥಿತಿ ರೈತರ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಬೇಡಿಕೆ ಮುಂದಿಟ್ಟು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರ ನೇತೃತ್ವದಲ್ಲಿ ಸಂಘಟನೆ ಪದಾಧಿಕಾರಿಗಳು ಮತ್ತು ರೈತರು ಪ್ರತಿಭಟನಾ ರ್ಯಾಲಿ ನಡೆಸಿದರು.<br /> <br /> ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗೋಶಾಲೆ ಆರಂಭಿಸಬೇಕು, ಮೇವು ಸಂಗ್ರಹಣೆ ಮಾಡಬೇಕು, ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಎಪಿಎಂಸಿ ಗಂಜ್ನಿಂದ ಪ್ರತಿಭಟನಾ ರ್ಯಾಲಿ ಆರಂಭಿಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.<br /> <br /> ಬರಗಾಲ ಪರಿಸ್ಥಿತಿ ಇರುವುದರಿಂದ ಮೇವು ಉಚಿತವಾಗಿ ದೊರಕಿಸಬೇಕು, ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರಕಿಸುವ ವ್ಯವಸ್ಥೆ ಮಾಡಬೇಕು, ಬತ್ತ, ಅರಿಷಿಣ, ತೆಂಗು, ಅಡಿಕೆ ಸೇರಿದಂತೆ ಮತ್ತಿತರ ಬೆಳೆಗಳಿಗೆ ಮಾರುಕಟ್ಟೆ ದೊರಕಿಸಬೇಕು ಎಂದು ಆಗ್ರಹಿಸಿದರು.<br /> <br /> ಗ್ರಾಮೀಣ ಪ್ರದೇಶಕ್ಕೆ 24 ತಾಸು ವಿದ್ಯುತ್ ಒದಗಿಸಬೇಕು, ಕೃಷಿ ಪಂಪ್ಸೆಟ್ಗಳಿಗೆ ಗುಣಮಟ್ಟದ ವಿದ್ಯುತ್ ಕಲ್ಪಿಸಬೇಕು, ರೈತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಒದಗಿಸಬೇಕು ಎಂದು ಆಗ್ರಹಿಸಿದರು.<br /> <br /> ಬರಗಾಲ ಸ್ಥಿತಿ, ಮಳೆ ಆಗದೇ ಇರುವುದರಿಂದ ರೈತರು ಹೆಚ್ಚಿನ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಟ್ರ್ಯಾಕ್ಟರ್ ಸಾಲ ಪಡೆದ ರೈತರಿಗೆ ಬ್ಯಾಂಕ್ಗಳು ನೋಟಿಸ್ ಕಳುಹಿಸುತ್ತಿದ್ದು, ಕೂಡಲೇ ಈ ಬಗ್ಗೆ ಸರ್ಕಾರ ಗಮನಹರಿಸಿ ಬ್ಯಾಂಕ್ಗಳಿಗೆ ನೋಟಿಸ್ ಕಳುಹಿಸದೇ ಇರಲು ಸೂಚಿಸಬೇಕು ಎಂದು ಒತ್ತಾಯಿಸಿದರು.<br /> <br /> ಸಂಘಟನೆ ಜಿಲ್ಲಾಧ್ಯಕ್ಷ ಅಮೀನ್ ಪಾಷಾ ದಿದ್ದಿಗಿ, ವೆಂಕಟರೆಡ್ಡಿ, ಬಸವರಾಜ ಮಾಲಿಪಾಟೀಲ್, ವೀರಭದ್ರಪ್ಪ, ಬಸವರಾಜ ಪೂಜಾರಿ, ಜಂಬನಗೌಡ, ಜಾನೇಕಲ್ ಅಮರೇಶ, ಆಲ್ದಾಳ ಬಸವರಾಜ, ದುರುಗಪ್ಪ ಮತ್ತಿತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಬರಗಾಲ ಪರಿಸ್ಥಿತಿ ರೈತರ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಬೇಡಿಕೆ ಮುಂದಿಟ್ಟು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರ ನೇತೃತ್ವದಲ್ಲಿ ಸಂಘಟನೆ ಪದಾಧಿಕಾರಿಗಳು ಮತ್ತು ರೈತರು ಪ್ರತಿಭಟನಾ ರ್ಯಾಲಿ ನಡೆಸಿದರು.<br /> <br /> ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗೋಶಾಲೆ ಆರಂಭಿಸಬೇಕು, ಮೇವು ಸಂಗ್ರಹಣೆ ಮಾಡಬೇಕು, ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಎಪಿಎಂಸಿ ಗಂಜ್ನಿಂದ ಪ್ರತಿಭಟನಾ ರ್ಯಾಲಿ ಆರಂಭಿಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.<br /> <br /> ಬರಗಾಲ ಪರಿಸ್ಥಿತಿ ಇರುವುದರಿಂದ ಮೇವು ಉಚಿತವಾಗಿ ದೊರಕಿಸಬೇಕು, ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರಕಿಸುವ ವ್ಯವಸ್ಥೆ ಮಾಡಬೇಕು, ಬತ್ತ, ಅರಿಷಿಣ, ತೆಂಗು, ಅಡಿಕೆ ಸೇರಿದಂತೆ ಮತ್ತಿತರ ಬೆಳೆಗಳಿಗೆ ಮಾರುಕಟ್ಟೆ ದೊರಕಿಸಬೇಕು ಎಂದು ಆಗ್ರಹಿಸಿದರು.<br /> <br /> ಗ್ರಾಮೀಣ ಪ್ರದೇಶಕ್ಕೆ 24 ತಾಸು ವಿದ್ಯುತ್ ಒದಗಿಸಬೇಕು, ಕೃಷಿ ಪಂಪ್ಸೆಟ್ಗಳಿಗೆ ಗುಣಮಟ್ಟದ ವಿದ್ಯುತ್ ಕಲ್ಪಿಸಬೇಕು, ರೈತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಒದಗಿಸಬೇಕು ಎಂದು ಆಗ್ರಹಿಸಿದರು.<br /> <br /> ಬರಗಾಲ ಸ್ಥಿತಿ, ಮಳೆ ಆಗದೇ ಇರುವುದರಿಂದ ರೈತರು ಹೆಚ್ಚಿನ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಟ್ರ್ಯಾಕ್ಟರ್ ಸಾಲ ಪಡೆದ ರೈತರಿಗೆ ಬ್ಯಾಂಕ್ಗಳು ನೋಟಿಸ್ ಕಳುಹಿಸುತ್ತಿದ್ದು, ಕೂಡಲೇ ಈ ಬಗ್ಗೆ ಸರ್ಕಾರ ಗಮನಹರಿಸಿ ಬ್ಯಾಂಕ್ಗಳಿಗೆ ನೋಟಿಸ್ ಕಳುಹಿಸದೇ ಇರಲು ಸೂಚಿಸಬೇಕು ಎಂದು ಒತ್ತಾಯಿಸಿದರು.<br /> <br /> ಸಂಘಟನೆ ಜಿಲ್ಲಾಧ್ಯಕ್ಷ ಅಮೀನ್ ಪಾಷಾ ದಿದ್ದಿಗಿ, ವೆಂಕಟರೆಡ್ಡಿ, ಬಸವರಾಜ ಮಾಲಿಪಾಟೀಲ್, ವೀರಭದ್ರಪ್ಪ, ಬಸವರಾಜ ಪೂಜಾರಿ, ಜಂಬನಗೌಡ, ಜಾನೇಕಲ್ ಅಮರೇಶ, ಆಲ್ದಾಳ ಬಸವರಾಜ, ದುರುಗಪ್ಪ ಮತ್ತಿತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>