<p>ನವದೆಹಲಿ: ದ್ರಾಕ್ಷಿ ಮತ್ತು ದಾಳಿಂಬೆ ಸೇರಿದಂತೆ ತೋಟಗಾರಿಕೆ ಬೆಳೆಗಳ ಸಾಲ ಮನ್ನಾ ಸಾಧ್ಯವಿಲ್ಲ ಆದರೆ, ಬಡ್ಡಿ ಮನ್ನಾ ಮಾಡಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಸರ್ಕಾರ ಶನಿವಾರ ಖಡಾಖಂಡಿತವಾಗಿ ಹೇಳಿದೆ.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಭೇಟಿ ಮಾಡಿ ದ್ರಾಕ್ಷಿ ಮತ್ತು ದಾಳಿಂಬೆ ಬೆಳೆ ಮೇಲಿನ ಸಾಲ ಮನ್ನಾ ಮಾಡುವಂತೆ ಮನವಿ ಮಾಡಿದ ಸಮಯದಲ್ಲಿ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.<br /> <br /> ತೋಟಗಾರಿಕೆ ಬೆಳೆಗಳ ಮೇಲಿನ ಸಾಲ ಮನ್ನಾ ಸಾಧ್ಯವಿಲ್ಲ. ಬಡ್ಡಿ ಮನ್ನಾ ಕುರಿತು ಪರಿಶೀಲಿಸಲಾಗುವುದು. ಆರ್ಬಿಐ ಮಾರ್ಗಸೂಚಿ ಚೌಕಟ್ಟಿ-ನೊಳಗೆ ರೈತರ ಸಾಲ ಮರು ಹೊಂದಾಣಿಕೆ ಮಾಡುವ ಬಗ್ಗೆ ಚಿಂತಿಸಬಹುದು ಎಂದು ಚಿದಂಬರಂ ತಿಳಿಸಿದರು.<br /> <br /> ಅಸಲು ಮತ್ತು ಬಡ್ಡಿ ಸೇರಿ ದ್ರಾಕ್ಷಿ ಮೇಲೆ ₨700 ಕೋಟಿ, ದಾಳಿಂಬೆ ಮೇಲೆ ₨170 ಕೋಟಿ ಸಾಲವನ್ನು ರೈತರು ಪಾವತಿಸಬೇಕಾಗಿದೆ.<br /> <br /> ಇದಲ್ಲದೆ, ಕೊಳೆ ರೋಗದಿಂದ ನಾಶವಾಗಿರುವ ಅಡಿಕೆಗೆ ₨500 ಕೋಟಿ ಹಾಗೂ ನುಸಿ ರೋಗದಿಂದ ಹಾಳಾಗಿರುವ ತೆಂಗಿಗೆ ₨580 ಕೋಟಿ ರೂಪಾಯಿ ನೆರವು ನೀಡುವಂತೆ ಕೃಷಿ ಸಚಿವ ಶರದ್ ಪವಾರ್ ಅವರಿಗೂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.<br /> <br /> ರಾಜ್ಯದ ಮನವಿಯನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪವಾರ್ ಮುಖ್ಯಮಂತ್ರಿಗೆ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ದ್ರಾಕ್ಷಿ ಮತ್ತು ದಾಳಿಂಬೆ ಸೇರಿದಂತೆ ತೋಟಗಾರಿಕೆ ಬೆಳೆಗಳ ಸಾಲ ಮನ್ನಾ ಸಾಧ್ಯವಿಲ್ಲ ಆದರೆ, ಬಡ್ಡಿ ಮನ್ನಾ ಮಾಡಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಸರ್ಕಾರ ಶನಿವಾರ ಖಡಾಖಂಡಿತವಾಗಿ ಹೇಳಿದೆ.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಭೇಟಿ ಮಾಡಿ ದ್ರಾಕ್ಷಿ ಮತ್ತು ದಾಳಿಂಬೆ ಬೆಳೆ ಮೇಲಿನ ಸಾಲ ಮನ್ನಾ ಮಾಡುವಂತೆ ಮನವಿ ಮಾಡಿದ ಸಮಯದಲ್ಲಿ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.<br /> <br /> ತೋಟಗಾರಿಕೆ ಬೆಳೆಗಳ ಮೇಲಿನ ಸಾಲ ಮನ್ನಾ ಸಾಧ್ಯವಿಲ್ಲ. ಬಡ್ಡಿ ಮನ್ನಾ ಕುರಿತು ಪರಿಶೀಲಿಸಲಾಗುವುದು. ಆರ್ಬಿಐ ಮಾರ್ಗಸೂಚಿ ಚೌಕಟ್ಟಿ-ನೊಳಗೆ ರೈತರ ಸಾಲ ಮರು ಹೊಂದಾಣಿಕೆ ಮಾಡುವ ಬಗ್ಗೆ ಚಿಂತಿಸಬಹುದು ಎಂದು ಚಿದಂಬರಂ ತಿಳಿಸಿದರು.<br /> <br /> ಅಸಲು ಮತ್ತು ಬಡ್ಡಿ ಸೇರಿ ದ್ರಾಕ್ಷಿ ಮೇಲೆ ₨700 ಕೋಟಿ, ದಾಳಿಂಬೆ ಮೇಲೆ ₨170 ಕೋಟಿ ಸಾಲವನ್ನು ರೈತರು ಪಾವತಿಸಬೇಕಾಗಿದೆ.<br /> <br /> ಇದಲ್ಲದೆ, ಕೊಳೆ ರೋಗದಿಂದ ನಾಶವಾಗಿರುವ ಅಡಿಕೆಗೆ ₨500 ಕೋಟಿ ಹಾಗೂ ನುಸಿ ರೋಗದಿಂದ ಹಾಳಾಗಿರುವ ತೆಂಗಿಗೆ ₨580 ಕೋಟಿ ರೂಪಾಯಿ ನೆರವು ನೀಡುವಂತೆ ಕೃಷಿ ಸಚಿವ ಶರದ್ ಪವಾರ್ ಅವರಿಗೂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.<br /> <br /> ರಾಜ್ಯದ ಮನವಿಯನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪವಾರ್ ಮುಖ್ಯಮಂತ್ರಿಗೆ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>