<p><strong>ಶಿರಹಟ್ಟಿ:</strong> ಆರ್ಥಿಕವಾಗಿ ಪ್ರಗತಿ ಹೊಂದಲು ಬ್ಯಾಂಕ್ಗಳ ಸಹಾಯ ಅತ್ಯಗತ್ಯ. ಬಡತನವನ್ನು ನಿರ್ಮೂಲನೆ ಮಾಡುವಲ್ಲಿ ಬ್ಯಾಂಕ್ಗಳ ಸಹಕಾರ ಅನನ್ಯವಾದದು ಎಂದು ಗದಗ ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವ ಸ್ಥಾಪಕ ಕೆ. ನರಸಿಂಹಲು ಹೇಳಿದರು.<br /> <br /> ತಾಲೂಕಿನ ಶ್ರೀಮಂತಗಡ ಗ್ರಾಮದ ಶ್ರೀಕ್ಷೇತ್ರ ಹೂಳಲಮ್ಮ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಕೆಸಿಸಿ ಬ್ಯಾಂಕ್, ನಬಾರ್ಡ್ ಹಾಗೂ ರೂರಲ್ ಎಜ್ಯುಕೇಷನ್ ಲಿಬರ್ಟಿ ರಿಯಲ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜಂಟಿ ಬಾಧ್ಯತಾ ಗುಂಪಿನ ಸದಸ್ಯರಿಗೆ ಒಂದು ದಿನ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಬಡ ವರ್ಗದ ಜನರು ಬ್ಯಾಂಕ್ಗಳಲ್ಲಿ ಸಾಲವನ್ನು ತೆಗೆದುಕೊಂಡು ಕುಟುಂಬದ ಆರ್ಥಿಕ ಅಭಿವೃದ್ಧಿ ಪಡಿಸಿಕೊಳ್ಳಬೇಕು. ಸಾಲ ಮರು ಪಾವತಿಸುವ ಮೂಲಕ ಬ್ಯಾಂಕ್ಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು. ಎಸ್ಎಚ್ಎಜಿ ನೋಡಲ್ ಅಧಿಕಾರಿ ಎಸ್.ವಿ. ನಾಯ್ಕರ ಮಾತನಾಡಿ, ಕೆಸಿಸಿ ಬ್ಯಾಂಕ್ ಅಡಿಯಲ್ಲಿ 9 ಸಾವಿರ ಸ್ವ ಸಹಾಯ ಗುಂಪುಗಳನ್ನು ರಚಿಸಿದ್ದು, 11 ಕೋಟಿ ಹಣಕಾಸಿನ ವ್ಯವಹಾರವನ್ನು ಮಾಡುತ್ತಿದೆ ಎಂದು ಹೇಳಿದರು.<br /> <br /> ಅಧ್ಯಕ್ಷತೆಯನ್ನು ಹೂಳಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ನಿಂಗಪ್ಪ ಮಕರಂಬಿ ವಹಿಸಿದ್ದರು. ಕೆಸಿಸಿ ಬ್ಯಾಂಕ್ ಜಿಲ್ಲಾ ಉಸ್ತುವಾರಿ ಅಧಿಕಾರಿ ವಿ.ಬಿ. ಪಾಟೀಲ, ಎಸ್.ಜಿ.ಚೋಟಗಲ್, ಎಸ್.ವಿ.ಪಾಟೀಲ, ಟಿ.ಎಸ್. ಹೊಸ ರಿತ್ತಿ ಹಾಗೂ 60 ಗುಂಪುಗಳ ಸದ ಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ:</strong> ಆರ್ಥಿಕವಾಗಿ ಪ್ರಗತಿ ಹೊಂದಲು ಬ್ಯಾಂಕ್ಗಳ ಸಹಾಯ ಅತ್ಯಗತ್ಯ. ಬಡತನವನ್ನು ನಿರ್ಮೂಲನೆ ಮಾಡುವಲ್ಲಿ ಬ್ಯಾಂಕ್ಗಳ ಸಹಕಾರ ಅನನ್ಯವಾದದು ಎಂದು ಗದಗ ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವ ಸ್ಥಾಪಕ ಕೆ. ನರಸಿಂಹಲು ಹೇಳಿದರು.<br /> <br /> ತಾಲೂಕಿನ ಶ್ರೀಮಂತಗಡ ಗ್ರಾಮದ ಶ್ರೀಕ್ಷೇತ್ರ ಹೂಳಲಮ್ಮ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಕೆಸಿಸಿ ಬ್ಯಾಂಕ್, ನಬಾರ್ಡ್ ಹಾಗೂ ರೂರಲ್ ಎಜ್ಯುಕೇಷನ್ ಲಿಬರ್ಟಿ ರಿಯಲ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜಂಟಿ ಬಾಧ್ಯತಾ ಗುಂಪಿನ ಸದಸ್ಯರಿಗೆ ಒಂದು ದಿನ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಬಡ ವರ್ಗದ ಜನರು ಬ್ಯಾಂಕ್ಗಳಲ್ಲಿ ಸಾಲವನ್ನು ತೆಗೆದುಕೊಂಡು ಕುಟುಂಬದ ಆರ್ಥಿಕ ಅಭಿವೃದ್ಧಿ ಪಡಿಸಿಕೊಳ್ಳಬೇಕು. ಸಾಲ ಮರು ಪಾವತಿಸುವ ಮೂಲಕ ಬ್ಯಾಂಕ್ಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು. ಎಸ್ಎಚ್ಎಜಿ ನೋಡಲ್ ಅಧಿಕಾರಿ ಎಸ್.ವಿ. ನಾಯ್ಕರ ಮಾತನಾಡಿ, ಕೆಸಿಸಿ ಬ್ಯಾಂಕ್ ಅಡಿಯಲ್ಲಿ 9 ಸಾವಿರ ಸ್ವ ಸಹಾಯ ಗುಂಪುಗಳನ್ನು ರಚಿಸಿದ್ದು, 11 ಕೋಟಿ ಹಣಕಾಸಿನ ವ್ಯವಹಾರವನ್ನು ಮಾಡುತ್ತಿದೆ ಎಂದು ಹೇಳಿದರು.<br /> <br /> ಅಧ್ಯಕ್ಷತೆಯನ್ನು ಹೂಳಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ನಿಂಗಪ್ಪ ಮಕರಂಬಿ ವಹಿಸಿದ್ದರು. ಕೆಸಿಸಿ ಬ್ಯಾಂಕ್ ಜಿಲ್ಲಾ ಉಸ್ತುವಾರಿ ಅಧಿಕಾರಿ ವಿ.ಬಿ. ಪಾಟೀಲ, ಎಸ್.ಜಿ.ಚೋಟಗಲ್, ಎಸ್.ವಿ.ಪಾಟೀಲ, ಟಿ.ಎಸ್. ಹೊಸ ರಿತ್ತಿ ಹಾಗೂ 60 ಗುಂಪುಗಳ ಸದ ಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>