<p>ಮೈಸೂರು: ಕವಿಗಳು, ವಿಮರ್ಶಕರು ಆಳುವ ವರ್ಗದ ಶಾಶ್ವತ ವಿರೋಧಿಗಳು ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ನಿರ್ದೇಶಕ ಪ್ರೊ.ಸಿ.ನಾಗಣ್ಣ ಅಭಿಪ್ರಾಯಪಟ್ಟರು.<br /> <br /> ದೇಸಿರಂಗ ಸಾಂಸ್ಕೃತಿಕ ಸಂಸ್ಥೆ ನಗರದ ರಂಗಾಯಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಡಾ. ಸಿದ್ದಲಿಂಗಯ್ಯ ಅವರ ಕಥೆ ಆಧಾರಿತ `ಮತಾಂತರ~ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.<br /> <br /> `ಸರ್ಕಾರವನ್ನು ವಿರೋಧಿಸುವ ಸಾಹಿತಿಗಳೇ ಆಳುವವರ ಅಡಿಯಾಳಾಗಿ ಕೆಲಸ ಮಾಡುತ್ತಾರೆ. ಲೋಕದ ನತದೃಷ್ಟರ ಪರ ದನಿ ಎತ್ತುವುದನ್ನು ಬಿಟ್ಟು ಸರ್ಕಾರಿ ಸೌಲಭ್ಯಗಳನ್ನು ಅನುಭವಿಸುತ್ತಾರೆ. ಹೀಗಾಗಿ ಅಂಥವ ರಿಂದ ಸಾಮಾಜಿಕ ಬದಲಾವಣೆಯನ್ನು ನಿರೀಕ್ಷೆ ಮಾಡುವುದು ಕಷ್ಟ. ಈ ಹಿನ್ನೆಲೆಯಲ್ಲಿ ಕವಿ ಡಾ.ಸಿದ್ದಲಿಂಗಯ್ಯ ಅವರು ಬರವಣಿಗೆಯನ್ನು ಮುಂದುವ ರಿಸಬೇಕು~ ಎಂದು ಸಲಹೆ ನೀಡಿದರು.<br /> <br /> `ಬಡವರು, ಕೆಳವರ್ಗದ ಜನತೆ ಸಮಾಜದಲ್ಲಿ ಘನತೆಯಿಂದ ಬಾಳಲು ಸಾಧ್ಯವಿಲ್ಲ ಎಂಬುದು ಹಲವು ಬಾರಿ ನಿರೂಪಿತವಾಗಿದೆ. ಹೀಗಾಗಿ ಸಮಾಜ ಈವರೆಗೂ ಬದಲಾವಣೆಯಾಗಿಲ್ಲ. ಸಾಮಾನ್ಯ ಜನರ ಮೇಲೆ ಮಹನೀಯರು ಪ್ರಭಾವ ಬೀರಿದಂತೆ ಕಾಣುತ್ತಿಲ್ಲ. ಇದರಿಂದ ಆರ್ಥಿಕ ಸಬಲೀಕರಣ, ಸಾಮಾಜಿಕ ಸದೃಢತೆಗೆ ಎಲ್ಲರೂ ಶ್ರಮಿಸಬೇಕು~ ಎಂದು ಹೇಳಿದರು.<br /> <br /> ಇದಕ್ಕೂ ಮುನ್ನ ರಂಗಕರ್ಮಿ ಡಾ.ನ.ರತ್ನ ಕಂಸಾಳೆ ನುಡಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ದರು. ಕೃಷ್ಣ ಜನಮನ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಬಳಿಕ ದೇಸಿರಂಗ ಸಾಂಸ್ಕೃತಿಕ ಸಂಸ್ಥೆಯ ಕಲಾವಿದರು ನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಕವಿಗಳು, ವಿಮರ್ಶಕರು ಆಳುವ ವರ್ಗದ ಶಾಶ್ವತ ವಿರೋಧಿಗಳು ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ನಿರ್ದೇಶಕ ಪ್ರೊ.ಸಿ.ನಾಗಣ್ಣ ಅಭಿಪ್ರಾಯಪಟ್ಟರು.<br /> <br /> ದೇಸಿರಂಗ ಸಾಂಸ್ಕೃತಿಕ ಸಂಸ್ಥೆ ನಗರದ ರಂಗಾಯಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಡಾ. ಸಿದ್ದಲಿಂಗಯ್ಯ ಅವರ ಕಥೆ ಆಧಾರಿತ `ಮತಾಂತರ~ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.<br /> <br /> `ಸರ್ಕಾರವನ್ನು ವಿರೋಧಿಸುವ ಸಾಹಿತಿಗಳೇ ಆಳುವವರ ಅಡಿಯಾಳಾಗಿ ಕೆಲಸ ಮಾಡುತ್ತಾರೆ. ಲೋಕದ ನತದೃಷ್ಟರ ಪರ ದನಿ ಎತ್ತುವುದನ್ನು ಬಿಟ್ಟು ಸರ್ಕಾರಿ ಸೌಲಭ್ಯಗಳನ್ನು ಅನುಭವಿಸುತ್ತಾರೆ. ಹೀಗಾಗಿ ಅಂಥವ ರಿಂದ ಸಾಮಾಜಿಕ ಬದಲಾವಣೆಯನ್ನು ನಿರೀಕ್ಷೆ ಮಾಡುವುದು ಕಷ್ಟ. ಈ ಹಿನ್ನೆಲೆಯಲ್ಲಿ ಕವಿ ಡಾ.ಸಿದ್ದಲಿಂಗಯ್ಯ ಅವರು ಬರವಣಿಗೆಯನ್ನು ಮುಂದುವ ರಿಸಬೇಕು~ ಎಂದು ಸಲಹೆ ನೀಡಿದರು.<br /> <br /> `ಬಡವರು, ಕೆಳವರ್ಗದ ಜನತೆ ಸಮಾಜದಲ್ಲಿ ಘನತೆಯಿಂದ ಬಾಳಲು ಸಾಧ್ಯವಿಲ್ಲ ಎಂಬುದು ಹಲವು ಬಾರಿ ನಿರೂಪಿತವಾಗಿದೆ. ಹೀಗಾಗಿ ಸಮಾಜ ಈವರೆಗೂ ಬದಲಾವಣೆಯಾಗಿಲ್ಲ. ಸಾಮಾನ್ಯ ಜನರ ಮೇಲೆ ಮಹನೀಯರು ಪ್ರಭಾವ ಬೀರಿದಂತೆ ಕಾಣುತ್ತಿಲ್ಲ. ಇದರಿಂದ ಆರ್ಥಿಕ ಸಬಲೀಕರಣ, ಸಾಮಾಜಿಕ ಸದೃಢತೆಗೆ ಎಲ್ಲರೂ ಶ್ರಮಿಸಬೇಕು~ ಎಂದು ಹೇಳಿದರು.<br /> <br /> ಇದಕ್ಕೂ ಮುನ್ನ ರಂಗಕರ್ಮಿ ಡಾ.ನ.ರತ್ನ ಕಂಸಾಳೆ ನುಡಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ದರು. ಕೃಷ್ಣ ಜನಮನ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಬಳಿಕ ದೇಸಿರಂಗ ಸಾಂಸ್ಕೃತಿಕ ಸಂಸ್ಥೆಯ ಕಲಾವಿದರು ನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>