<p><span style="font-size: 26px;"><strong>ಶಿಡ್ಲಘಟ್ಟ:</strong> ದ್ವಿಭಾಷಾ ಪ್ರಾಂತ್ಯವೆಂದೇ ಹೆಸರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಭಾಷೆಯನ್ನು ಕೆಲವರು ಕಂದೆಲುಗು ಎನ್ನುತ್ತಾರೆ. ಇಲ್ಲಿನವರು ಇಬ್ಬರು ತಾಯಂದಿರ ಮುದ್ದು ಕಂದಮ್ಮಗಳು. ಇಲ್ಲಿನ ಭಾಷಾ ಸೊಗಡು ವಿಶಿಷ್ಟವಾದದ್ದು. ಸಾಹಿತ್ಯ ಅನನ್ಯವಾದದ್ದು. ಇಲ್ಲಿ ನಡೆದಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೃಷಿ ಸಮೃದ್ಧವಾದದ್ದು. ಇಲ್ಲಿನ ಜನ ಉರ್ದು, ತೆಲುಗನ್ನು ವ್ಯವಹಾರಿಕ ಭಾಷೆಯಾಗಿ ಬಳಸಿದರೂ ಕನ್ನಡ ನುಡಿಯನ್ನು ಉಳಿಸಿ ಬೆಳೆಸಿದ್ದಾರೆ.</span><br /> <br /> ಜಿಲ್ಲೆಯಲ್ಲಿ ಜನಪದ ಸಾಹಿತ್ಯ, ಮಹಿಳಾ ಸಾಹಿತ್ಯ, ಇಂಗ್ಲಿಷ್ ಸಾಹಿತ್ಯ, ಚಲನಚಿತ್ರ ಸಾಹಿತ್ಯ, ರಂಗಭೂಮಿ ಕಲೆ, ಕಲಾವಿದರು, ವಾಸ್ತುಶಿಲ್ಪ, ಚಿತ್ರಕಲೆ, ಛಾಯಾಚಿತ್ರ, ಸಂಗೀತ, ನೃತ್ಯ ಮುಂತಾದ ವಿವಿಧ ಕ್ಷೇತ್ರಗಳ ಸಾಹಿತಿ ಕಲಾವಿದರು ಜಿಲ್ಲೆಯಲ್ಲಿದ್ದಾರೆ.<br /> <br /> ಇಲ್ಲಿ ಜನಪದ ಕಲೆಗಳು ಹೇರಳವಾಗಿವೆ. ಶಿಲ್ಪ ಸೌಂದರ್ಯದ ದೇಗುಲ, ಚರ್ಚ್, ಮಸೀದಿಗಳಿವೆ. ಜಿಲ್ಲೆಯ ಹಲವು ಪ್ರಾಚೀನ ಶಾಸನಗಳಲ್ಲಿ ಕವಿಗಳ ಉಲ್ಲೇಖವಿದೆ. ಪ್ರಾಚೀನ ಕವಿ ಚಿಂತಾಮಣಿಯ ಕಬ್ಜದ ನಾಗಮಯ್ಯ ಬರೆದ ಶಾಸನ, ಗೌರಿಬಿದನೂರಿನ ಮಲ್ಲಣಾರಾಧ್ಯ ಬರೆದಿರುವ ತಾಮ್ರ ಶಾಸನ, ಚಿಂತಾಮಣಿಯ ನೀಲಪ್ಪರ್, ಗೌರಿಬಿದನೂರು ನರಸಿಂಹಾಚಾರ್ಯ, ಚಿಂತಾಮಣಿ ಸ್ವಯಂಭೂ ಮತ್ತಿತರರ ಶಾಸನ ರಚನೆಗಳು ಇತಿಹಾಸದಲ್ಲಿ ದಾಖಲಾಗಿವೆ. ಜೈನ ಸಾಹಿತ್ಯಕ್ಕೆ ಸಂಬಂಧಿಸಿದ `ಸಿರಿಭೂವಲಯ' ಕೃತಿಯ ಕರ್ತೃ ಕುಮುದೇಂದು ನಂದಿ ಬಳಿಯ ಯಲುವಹಳ್ಳಿಯವರು.<br /> <br /> ಚಿಕ್ಕಬಳ್ಳಾಪುರದ ಬಾಡಾಲ ಸುಬ್ರಮಣ್ಯ `ತಾರಾಶಶಾಂಕ' ನಾಟಕದ ಕರ್ತೃವಾದರೆ, ಗೌರಿಬಿದನೂರು ಇಡಗೂರು ರುದ್ರಕವಿ ಕನ್ನಡದಲ್ಲಿ ಶಿವನಾಟಕ, ಮಾರ್ಕಂಡೇಯ ವಿಜಯ, ಹೊನ್ನಾವರದ ಹೊನ್ನೇಗೌಡನ ವಂಶಾವಳಿಯನ್ನು ರಚಿಸಿದ್ದಾರೆ. ಗುಡಿಬಂಡೆ ಸೋಮೇನಹಳ್ಳಿಯ ವೇದಾಂತಂ ರಾಘವಾಚಾರ್ಯಸ್ವಾಮಿ ಪಂಚವಿಂಶಧಿ ಪದ್ಧತಿಗೆ ವ್ಯಾಖ್ಯೆ ಬರೆದಿದ್ದಾರೆ.<br /> <br /> ಗೌರಿಬಿದನೂರಿನ ಎಂ.ರಾಮರಾವ್ ಋಗ್ವೇದದ ಕೆಲವು ಭಾಗಗಳನ್ನು ಅನುವಾದಿಸಿ ಪ್ರಕಟಿಸಿದ್ದಾರೆ. ಚಿಕ್ಕಬಳ್ಳಾಪುರದ ಮಂಡಿಕಲ್ನ ರಾಮಾಶಾಸ್ತ್ರಿ, ವರದಾಚಾರ್ಯ, ಶ್ರೀರಂಗಾಚಾರ್ಯ, ರಾಜಗೋಪಾಲಾಚಾರ್ಯ, ಎ.ಕೇಶವಯ್ಯ, ಪಡತಲ ಗಂಗಾಧರಶಾಸ್ತ್ರಿ, ಗೌರಿಬಿದನೂರಿನ ಎಂ.ನಂಜುಂಡಾರಾಧ್ಯ, ಹೊಸಹುಡ್ಯದ ನಾಗೇಶಚಾರ್ಯ, ವೆಂಕಟರಮಣಯ್ಯ ಜಿಲ್ಲೆಯ ಪ್ರಮುಖ ಸಂಸ್ಕೃತ ಸಾಹಿತಿಗಳು.<br /> <br /> ನಂದಿಗ್ರಾಮದ ನಂದಿಮಲ್ಲಯ್ಯ `ಪ್ರಭೋದ ಚಂದ್ರೋದಯಂ' ಎಂಬ ತೆಲುಗು ನಾಟಕದ ಕರ್ತೃ. 1800ರಲ್ಲಿದ್ದ ಪುಲ್ಲಕವಿ ಗೌರಿಬಿದನೂರಿನ ಹೊಸೂರಿನವರು. 1830ರಲ್ಲಿದ್ದ ಶಿಡ್ಲಘಟ್ಟದ ಕುಂದಲಗುರ್ಕಿ ಚಂದ್ರಕವಿ `ಶ್ರೀಕೃಷ್ಣ ಭೂವಲಯಮು' ಕೃತಿಯ ಕರ್ತೃ. ಕೈವಾರ ತಾತಯ್ಯನೆಂದೇ ಹೆಸರುವಾಸಿಯಾದ ಚಿಂತಾಮಣಿಯ ಕೈವಾರದ ನಾರಣಪ್ಪ ತೆಲುಗನ್ನಡದ ಕವಿ. ಚಿಂತಾಮಣಿಯ ಹೊಸಹುಡ್ಯದ ವೇದಾಂತಂ ವೆಂಕಟರೆಡ್ಡಿ ವೇದಾಂತ ಪ್ರಕಾಶ, ವಿವೇಕ ರತ್ನಮಾಲ ಮುಂತಾದ ಕೃತಿಗಳ ಕರ್ತೃ. ಆಂಧ್ರದ ಜನಪ್ರಿಯ ಆಯುರ್ವೇದದ ಆಕರ ಗ್ರಂಥ ಬಸವರಾಜೀಯಂ ಕೃತಿಯನ್ನು ರಚಿಸಿರುವವರು ಗೌರಿಬಿದನೂರು ಹೊಸೂರಿನ ಕೊಟ್ಟೂರು ಬಸವರಾಜು. ಚಿಂತಾಮಣಿ ತಾಲ್ಲೂಕಿನ ಕೊಮಾರ್ಲು ರಾಮಚಂದ್ರಯ್ಯ, ಚಿಲಕಲನೇರ್ಪು ರಾಜಯೋಗಿ ವಸಂತಯ್ಯ ಮುಂತಾದವರು ತೆಲುಗನ್ನಡ ಸಾಹಿತಿಗಳು.<br /> <br /> ಶಿಡ್ಲಘಟ್ಟದ ಅಬ್ದುಲ್ ಹಸನ್ ಅದೀಬ್ ಕವಿ, ಸಾಹಿತಿ, ವಿಮರ್ಶಕ ಮತ್ತು ಇತಿಹಾಸಕಾರ. ಜವಹರುಲ್ ಬಾಲಘತ್ (ಛಂದೋಗ್ರಂಥ), ಜವಾಹಿರ್-ಎ-ಉರ್ದು (ವ್ಯಾಕರಣ ಗ್ರಂಥ), ಫಾಜಿ-ಎ-ಅಜಮ್ (ಹೈದರ್ ಅಲಿ ಕುರಿತ ಚಾರಿತ್ರಿಕ ಗ್ರಂಥ), ರಾಜ್ನಾಮ (ಮೈಸೂರು ಒಡೆಯರ ಚರಿತ್ರೆ) ಬರೆದಿದ್ದಾರೆ.<br /> ಚಿಂತಾಮಣಿ ತಾಲ್ಲೂಕಿನ ಸಂತೇಕಲ್ಲಹಳ್ಳಿಯ ಲಕ್ಷ್ಮೀನರಸಿಂಹಶಾಸ್ತ್ರಿ, ಗೌರಿಬಿದನೂರು ಶ್ರಾವಂಡನಹಳ್ಳಿಯ ಓ.ಎನ್.ಲಿಂಗಯ್ಯ, ಎಂ.ಜಿ.ನಂಜುಂಡಾರಾಧ್ಯ, ಶಿಕ್ಷಣತಜ್ಞ ಡಾ.ಎಚ್.ನರಸಿಂಹಯ್ಯ, ಡಾ.ಎಲ್.ಬಸವರಾಜು, ಪ್ರೊ.ಎನ್.ಬಸವಾರಾಧ್ಯ, ಬಾ.ರಾ.ಗೋಪಾಲ್, ವೈ.ಎಸ್.ಗುಂಡಪ್ಪ, ಹಂ.ಪ.ನಾಗರಾಜಯ್ಯ, ಡಾ. ಪ್ರಧಾನ ಗುರುದತ್ತ, `ಕೈಪು' ಲಕ್ಷ್ಮಿನರಸಿಂಹಶಾಸ್ತ್ರಿ, ಬಿ.ಜಿ.ಸತ್ಯಮೂರ್ತಿ, ಡಿ.ಪಾಳ್ಯದ ವಿ.ಗೋಪಾಲಕೃಷ್ಣ, ಜಿ.ಜ್ಞಾನಾನಂದ, ಚಿ.ಶ್ರೀನಿವಾಸರಾಜು, ಶಿಡ್ಲಘಟ್ಟದ ಚಾಗೆ ಕೃಷ್ಣಮೂರ್ತಿ, ಗೌರಿಬಿದನೂರು ಅನಂತಪದ್ಮನಾಭರಾವ್, ಕೆ.ನಾರಾಯಣಸ್ವಾಮಿ, ಪ್ರೊ.ಬಿ.ಗಂಗಾಧರಮೂರ್ತಿ, ಶಾಸನತಜ್ಞ ಚಿಂತಾಮಣಿಯ ಸಂತೇಕಲ್ಲಹಳ್ಳಿಯ ಡಾ.ಆರ್.ಶೇಷಶಾಸ್ತ್ರಿ, ಚಿಂತಾಮಣಿಯ ವೆಲ್ಲಾಸತ್ಯಂ, ಬಿ.ಆರ್.ಲಕ್ಷ್ಮಣರಾವ್, ಜಾನಪದ ತಜ್ಞ ಶಿಡ್ಲಘಟ್ಟದ ಜಿ.ಶ್ರೀನಿವಾಸಯ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕವಿ ಸಾಹಿತಿಗಳನ್ನು ಜಿಲ್ಲೆ ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಶಿಡ್ಲಘಟ್ಟ:</strong> ದ್ವಿಭಾಷಾ ಪ್ರಾಂತ್ಯವೆಂದೇ ಹೆಸರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಭಾಷೆಯನ್ನು ಕೆಲವರು ಕಂದೆಲುಗು ಎನ್ನುತ್ತಾರೆ. ಇಲ್ಲಿನವರು ಇಬ್ಬರು ತಾಯಂದಿರ ಮುದ್ದು ಕಂದಮ್ಮಗಳು. ಇಲ್ಲಿನ ಭಾಷಾ ಸೊಗಡು ವಿಶಿಷ್ಟವಾದದ್ದು. ಸಾಹಿತ್ಯ ಅನನ್ಯವಾದದ್ದು. ಇಲ್ಲಿ ನಡೆದಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೃಷಿ ಸಮೃದ್ಧವಾದದ್ದು. ಇಲ್ಲಿನ ಜನ ಉರ್ದು, ತೆಲುಗನ್ನು ವ್ಯವಹಾರಿಕ ಭಾಷೆಯಾಗಿ ಬಳಸಿದರೂ ಕನ್ನಡ ನುಡಿಯನ್ನು ಉಳಿಸಿ ಬೆಳೆಸಿದ್ದಾರೆ.</span><br /> <br /> ಜಿಲ್ಲೆಯಲ್ಲಿ ಜನಪದ ಸಾಹಿತ್ಯ, ಮಹಿಳಾ ಸಾಹಿತ್ಯ, ಇಂಗ್ಲಿಷ್ ಸಾಹಿತ್ಯ, ಚಲನಚಿತ್ರ ಸಾಹಿತ್ಯ, ರಂಗಭೂಮಿ ಕಲೆ, ಕಲಾವಿದರು, ವಾಸ್ತುಶಿಲ್ಪ, ಚಿತ್ರಕಲೆ, ಛಾಯಾಚಿತ್ರ, ಸಂಗೀತ, ನೃತ್ಯ ಮುಂತಾದ ವಿವಿಧ ಕ್ಷೇತ್ರಗಳ ಸಾಹಿತಿ ಕಲಾವಿದರು ಜಿಲ್ಲೆಯಲ್ಲಿದ್ದಾರೆ.<br /> <br /> ಇಲ್ಲಿ ಜನಪದ ಕಲೆಗಳು ಹೇರಳವಾಗಿವೆ. ಶಿಲ್ಪ ಸೌಂದರ್ಯದ ದೇಗುಲ, ಚರ್ಚ್, ಮಸೀದಿಗಳಿವೆ. ಜಿಲ್ಲೆಯ ಹಲವು ಪ್ರಾಚೀನ ಶಾಸನಗಳಲ್ಲಿ ಕವಿಗಳ ಉಲ್ಲೇಖವಿದೆ. ಪ್ರಾಚೀನ ಕವಿ ಚಿಂತಾಮಣಿಯ ಕಬ್ಜದ ನಾಗಮಯ್ಯ ಬರೆದ ಶಾಸನ, ಗೌರಿಬಿದನೂರಿನ ಮಲ್ಲಣಾರಾಧ್ಯ ಬರೆದಿರುವ ತಾಮ್ರ ಶಾಸನ, ಚಿಂತಾಮಣಿಯ ನೀಲಪ್ಪರ್, ಗೌರಿಬಿದನೂರು ನರಸಿಂಹಾಚಾರ್ಯ, ಚಿಂತಾಮಣಿ ಸ್ವಯಂಭೂ ಮತ್ತಿತರರ ಶಾಸನ ರಚನೆಗಳು ಇತಿಹಾಸದಲ್ಲಿ ದಾಖಲಾಗಿವೆ. ಜೈನ ಸಾಹಿತ್ಯಕ್ಕೆ ಸಂಬಂಧಿಸಿದ `ಸಿರಿಭೂವಲಯ' ಕೃತಿಯ ಕರ್ತೃ ಕುಮುದೇಂದು ನಂದಿ ಬಳಿಯ ಯಲುವಹಳ್ಳಿಯವರು.<br /> <br /> ಚಿಕ್ಕಬಳ್ಳಾಪುರದ ಬಾಡಾಲ ಸುಬ್ರಮಣ್ಯ `ತಾರಾಶಶಾಂಕ' ನಾಟಕದ ಕರ್ತೃವಾದರೆ, ಗೌರಿಬಿದನೂರು ಇಡಗೂರು ರುದ್ರಕವಿ ಕನ್ನಡದಲ್ಲಿ ಶಿವನಾಟಕ, ಮಾರ್ಕಂಡೇಯ ವಿಜಯ, ಹೊನ್ನಾವರದ ಹೊನ್ನೇಗೌಡನ ವಂಶಾವಳಿಯನ್ನು ರಚಿಸಿದ್ದಾರೆ. ಗುಡಿಬಂಡೆ ಸೋಮೇನಹಳ್ಳಿಯ ವೇದಾಂತಂ ರಾಘವಾಚಾರ್ಯಸ್ವಾಮಿ ಪಂಚವಿಂಶಧಿ ಪದ್ಧತಿಗೆ ವ್ಯಾಖ್ಯೆ ಬರೆದಿದ್ದಾರೆ.<br /> <br /> ಗೌರಿಬಿದನೂರಿನ ಎಂ.ರಾಮರಾವ್ ಋಗ್ವೇದದ ಕೆಲವು ಭಾಗಗಳನ್ನು ಅನುವಾದಿಸಿ ಪ್ರಕಟಿಸಿದ್ದಾರೆ. ಚಿಕ್ಕಬಳ್ಳಾಪುರದ ಮಂಡಿಕಲ್ನ ರಾಮಾಶಾಸ್ತ್ರಿ, ವರದಾಚಾರ್ಯ, ಶ್ರೀರಂಗಾಚಾರ್ಯ, ರಾಜಗೋಪಾಲಾಚಾರ್ಯ, ಎ.ಕೇಶವಯ್ಯ, ಪಡತಲ ಗಂಗಾಧರಶಾಸ್ತ್ರಿ, ಗೌರಿಬಿದನೂರಿನ ಎಂ.ನಂಜುಂಡಾರಾಧ್ಯ, ಹೊಸಹುಡ್ಯದ ನಾಗೇಶಚಾರ್ಯ, ವೆಂಕಟರಮಣಯ್ಯ ಜಿಲ್ಲೆಯ ಪ್ರಮುಖ ಸಂಸ್ಕೃತ ಸಾಹಿತಿಗಳು.<br /> <br /> ನಂದಿಗ್ರಾಮದ ನಂದಿಮಲ್ಲಯ್ಯ `ಪ್ರಭೋದ ಚಂದ್ರೋದಯಂ' ಎಂಬ ತೆಲುಗು ನಾಟಕದ ಕರ್ತೃ. 1800ರಲ್ಲಿದ್ದ ಪುಲ್ಲಕವಿ ಗೌರಿಬಿದನೂರಿನ ಹೊಸೂರಿನವರು. 1830ರಲ್ಲಿದ್ದ ಶಿಡ್ಲಘಟ್ಟದ ಕುಂದಲಗುರ್ಕಿ ಚಂದ್ರಕವಿ `ಶ್ರೀಕೃಷ್ಣ ಭೂವಲಯಮು' ಕೃತಿಯ ಕರ್ತೃ. ಕೈವಾರ ತಾತಯ್ಯನೆಂದೇ ಹೆಸರುವಾಸಿಯಾದ ಚಿಂತಾಮಣಿಯ ಕೈವಾರದ ನಾರಣಪ್ಪ ತೆಲುಗನ್ನಡದ ಕವಿ. ಚಿಂತಾಮಣಿಯ ಹೊಸಹುಡ್ಯದ ವೇದಾಂತಂ ವೆಂಕಟರೆಡ್ಡಿ ವೇದಾಂತ ಪ್ರಕಾಶ, ವಿವೇಕ ರತ್ನಮಾಲ ಮುಂತಾದ ಕೃತಿಗಳ ಕರ್ತೃ. ಆಂಧ್ರದ ಜನಪ್ರಿಯ ಆಯುರ್ವೇದದ ಆಕರ ಗ್ರಂಥ ಬಸವರಾಜೀಯಂ ಕೃತಿಯನ್ನು ರಚಿಸಿರುವವರು ಗೌರಿಬಿದನೂರು ಹೊಸೂರಿನ ಕೊಟ್ಟೂರು ಬಸವರಾಜು. ಚಿಂತಾಮಣಿ ತಾಲ್ಲೂಕಿನ ಕೊಮಾರ್ಲು ರಾಮಚಂದ್ರಯ್ಯ, ಚಿಲಕಲನೇರ್ಪು ರಾಜಯೋಗಿ ವಸಂತಯ್ಯ ಮುಂತಾದವರು ತೆಲುಗನ್ನಡ ಸಾಹಿತಿಗಳು.<br /> <br /> ಶಿಡ್ಲಘಟ್ಟದ ಅಬ್ದುಲ್ ಹಸನ್ ಅದೀಬ್ ಕವಿ, ಸಾಹಿತಿ, ವಿಮರ್ಶಕ ಮತ್ತು ಇತಿಹಾಸಕಾರ. ಜವಹರುಲ್ ಬಾಲಘತ್ (ಛಂದೋಗ್ರಂಥ), ಜವಾಹಿರ್-ಎ-ಉರ್ದು (ವ್ಯಾಕರಣ ಗ್ರಂಥ), ಫಾಜಿ-ಎ-ಅಜಮ್ (ಹೈದರ್ ಅಲಿ ಕುರಿತ ಚಾರಿತ್ರಿಕ ಗ್ರಂಥ), ರಾಜ್ನಾಮ (ಮೈಸೂರು ಒಡೆಯರ ಚರಿತ್ರೆ) ಬರೆದಿದ್ದಾರೆ.<br /> ಚಿಂತಾಮಣಿ ತಾಲ್ಲೂಕಿನ ಸಂತೇಕಲ್ಲಹಳ್ಳಿಯ ಲಕ್ಷ್ಮೀನರಸಿಂಹಶಾಸ್ತ್ರಿ, ಗೌರಿಬಿದನೂರು ಶ್ರಾವಂಡನಹಳ್ಳಿಯ ಓ.ಎನ್.ಲಿಂಗಯ್ಯ, ಎಂ.ಜಿ.ನಂಜುಂಡಾರಾಧ್ಯ, ಶಿಕ್ಷಣತಜ್ಞ ಡಾ.ಎಚ್.ನರಸಿಂಹಯ್ಯ, ಡಾ.ಎಲ್.ಬಸವರಾಜು, ಪ್ರೊ.ಎನ್.ಬಸವಾರಾಧ್ಯ, ಬಾ.ರಾ.ಗೋಪಾಲ್, ವೈ.ಎಸ್.ಗುಂಡಪ್ಪ, ಹಂ.ಪ.ನಾಗರಾಜಯ್ಯ, ಡಾ. ಪ್ರಧಾನ ಗುರುದತ್ತ, `ಕೈಪು' ಲಕ್ಷ್ಮಿನರಸಿಂಹಶಾಸ್ತ್ರಿ, ಬಿ.ಜಿ.ಸತ್ಯಮೂರ್ತಿ, ಡಿ.ಪಾಳ್ಯದ ವಿ.ಗೋಪಾಲಕೃಷ್ಣ, ಜಿ.ಜ್ಞಾನಾನಂದ, ಚಿ.ಶ್ರೀನಿವಾಸರಾಜು, ಶಿಡ್ಲಘಟ್ಟದ ಚಾಗೆ ಕೃಷ್ಣಮೂರ್ತಿ, ಗೌರಿಬಿದನೂರು ಅನಂತಪದ್ಮನಾಭರಾವ್, ಕೆ.ನಾರಾಯಣಸ್ವಾಮಿ, ಪ್ರೊ.ಬಿ.ಗಂಗಾಧರಮೂರ್ತಿ, ಶಾಸನತಜ್ಞ ಚಿಂತಾಮಣಿಯ ಸಂತೇಕಲ್ಲಹಳ್ಳಿಯ ಡಾ.ಆರ್.ಶೇಷಶಾಸ್ತ್ರಿ, ಚಿಂತಾಮಣಿಯ ವೆಲ್ಲಾಸತ್ಯಂ, ಬಿ.ಆರ್.ಲಕ್ಷ್ಮಣರಾವ್, ಜಾನಪದ ತಜ್ಞ ಶಿಡ್ಲಘಟ್ಟದ ಜಿ.ಶ್ರೀನಿವಾಸಯ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕವಿ ಸಾಹಿತಿಗಳನ್ನು ಜಿಲ್ಲೆ ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>