<p>ಬೆಂಗಳೂರು: ಈ ಹಿಂದಿನ ಸಾಹಿತಿಗಳಲ್ಲಿ ಸೈದ್ಧಾಂತಿಕ ಸಂಘರ್ಷವಿದ್ದರೂ ವ್ಯಕ್ತಿ ಭೇದವಿರಲಿಲ್ಲ ಎಂದು ಕವಿ ಡಾ.ಎಸ್.ಜಿ. ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು.<br /> <br /> ಕನ್ನಡ ಸಾಹಿತ್ಯ ಪರಿಷತ್ತು ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕುರಿತು ವಿಚಾರ ಸಂಕಿರಣ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ಈ ಹೊತ್ತು ಬರಹಗಾರರ ನಡುವೆ ವೈಮನಸ್ಸಿದ್ದು ಸಮನ್ವಯದ ಅಗತ್ಯವಿದೆ. ಪ್ರಭುತ್ವ ಮತ್ತು ಪ್ರತಿಭೆಯ ನಡುವಿನ ಸಂಘರ್ಷ ಯಾವತ್ತಿಗೂ ಜೀವಂತವಾಗಿರುತ್ತದೆ. ಸಾಂಸ್ಕೃತಿಕ ಮತ್ತು ಸಾಮಾಜಿಕ ಪ್ರತಿನಿಧಿಗಳಾದ ಸಾಹಿತಿಗಳಿಗೆ ರಾಜಕೀಯ ಪ್ರಜ್ಞೆ ಇರಬೇಕು’ ಎಂದರು.<br /> <br /> ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ, ‘ಸಾಹಿತ್ಯ ಪರಿಷತ್ತಿನ ಶತಮಾನೋತ್ಸವದ ಅಂಗವಾಗಿ ನವೋದಯದಿಂದ ಈವರೆಗಿನ ಕನ್ನಡ ಸಾಹಿತ್ಯದ ಬೆಳವಣಿಗೆಯನ್ನು ಕುರಿತ 17 ಸಂಪುಟಗಳನ್ನು ಹೊರತರಲಾಗುತ್ತಿದೆ. ಶತಮಾನೋತ್ಸವ ಭವನ ನಿರ್ಮಾಣಕ್ಕೆ ಈ ಹಿಂದೆ ಘೋಷಿಸಿದ್ದಂತೆ ₨ 5 ಕೋಟಿ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ’ ಎಂದು ಹೇಳಿದರು.<br /> <br /> ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮಾತನಾಡಿ ‘ಕನ್ನಡಕ್ಕೆ ಮತ್ತಷ್ಟು ಜ್ಞಾನಪೀಠಗಳು ಲಭಿಸಬೇಕಿತ್ತು. ಪರಿಷತ್ತಿನ ಶತಮಾನೋತ್ಸವ ಭವನ ನಿರ್ಮಾಣ ಮತ್ತು ಆಚರಣೆಗೆ ಸರ್ಕಾರ ಮತ್ತು ಬಿಬಿಎಂಪಿ ವತಿಯಿಂದ ಹಣಕಾಸನ್ನು ಒದಗಿಸಲಾಗುವುದು’ ಎಂದರು.<br /> <br /> ಕಸಾಪ ಸದಸ್ಯರಾದ ಸಿ.ಕೆ.ರಾಮೇಗೌಡ ಮತ್ತು ಎಚ್.ಬಿ.ಎಲ್.ರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಈ ಹಿಂದಿನ ಸಾಹಿತಿಗಳಲ್ಲಿ ಸೈದ್ಧಾಂತಿಕ ಸಂಘರ್ಷವಿದ್ದರೂ ವ್ಯಕ್ತಿ ಭೇದವಿರಲಿಲ್ಲ ಎಂದು ಕವಿ ಡಾ.ಎಸ್.ಜಿ. ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು.<br /> <br /> ಕನ್ನಡ ಸಾಹಿತ್ಯ ಪರಿಷತ್ತು ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕುರಿತು ವಿಚಾರ ಸಂಕಿರಣ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ಈ ಹೊತ್ತು ಬರಹಗಾರರ ನಡುವೆ ವೈಮನಸ್ಸಿದ್ದು ಸಮನ್ವಯದ ಅಗತ್ಯವಿದೆ. ಪ್ರಭುತ್ವ ಮತ್ತು ಪ್ರತಿಭೆಯ ನಡುವಿನ ಸಂಘರ್ಷ ಯಾವತ್ತಿಗೂ ಜೀವಂತವಾಗಿರುತ್ತದೆ. ಸಾಂಸ್ಕೃತಿಕ ಮತ್ತು ಸಾಮಾಜಿಕ ಪ್ರತಿನಿಧಿಗಳಾದ ಸಾಹಿತಿಗಳಿಗೆ ರಾಜಕೀಯ ಪ್ರಜ್ಞೆ ಇರಬೇಕು’ ಎಂದರು.<br /> <br /> ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ, ‘ಸಾಹಿತ್ಯ ಪರಿಷತ್ತಿನ ಶತಮಾನೋತ್ಸವದ ಅಂಗವಾಗಿ ನವೋದಯದಿಂದ ಈವರೆಗಿನ ಕನ್ನಡ ಸಾಹಿತ್ಯದ ಬೆಳವಣಿಗೆಯನ್ನು ಕುರಿತ 17 ಸಂಪುಟಗಳನ್ನು ಹೊರತರಲಾಗುತ್ತಿದೆ. ಶತಮಾನೋತ್ಸವ ಭವನ ನಿರ್ಮಾಣಕ್ಕೆ ಈ ಹಿಂದೆ ಘೋಷಿಸಿದ್ದಂತೆ ₨ 5 ಕೋಟಿ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ’ ಎಂದು ಹೇಳಿದರು.<br /> <br /> ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮಾತನಾಡಿ ‘ಕನ್ನಡಕ್ಕೆ ಮತ್ತಷ್ಟು ಜ್ಞಾನಪೀಠಗಳು ಲಭಿಸಬೇಕಿತ್ತು. ಪರಿಷತ್ತಿನ ಶತಮಾನೋತ್ಸವ ಭವನ ನಿರ್ಮಾಣ ಮತ್ತು ಆಚರಣೆಗೆ ಸರ್ಕಾರ ಮತ್ತು ಬಿಬಿಎಂಪಿ ವತಿಯಿಂದ ಹಣಕಾಸನ್ನು ಒದಗಿಸಲಾಗುವುದು’ ಎಂದರು.<br /> <br /> ಕಸಾಪ ಸದಸ್ಯರಾದ ಸಿ.ಕೆ.ರಾಮೇಗೌಡ ಮತ್ತು ಎಚ್.ಬಿ.ಎಲ್.ರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>