<p>ಬೀದರ್: ಸಾಹಿತ್ಯ ಮತ್ತು ಅಧ್ಯಾತ್ಮವನ್ನು ಸಮೀಕರಿಸಿದವರು ಕುವೆಂಪು ಎಂದು ಸಾಹಿತಿ ಡಾ. ಪ್ರೇಮಾ ಸಿರ್ಸೆ ನುಡಿದರು.<br /> <br /> ಕುವೆಂಪು ಕನ್ನಡ ಸಂಘವು ನಗರದ ಬಿ.ವಿ. ಭೂಮರೆಡ್ಡಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕುವೆಂಪು ಕವಿತೆಗಳಲ್ಲಿ ಬದುಕಿನ ಪರಿಪೂರ್ಣ ದರ್ಶನವನ್ನು ಕಾಣಬಹುದಾಗಿದೆ ಎಂದು ಹೇಳಿದರು.<br /> <br /> ಕುವೆಂಪು ನಾಡು ಕಂಡ ಮಹಾನ್ ಚೇತನ. ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಗಾಧವಾಗಿದೆ ಎಂದರು.<br /> <br /> ಕುವೆಂಪು ಬಹುದೊಡ್ಡ ವಿಚಾರವಾದಿ ಆಗಿದ್ದರು ಎಂದು ಡಾ. ಬಸವರಾಜ ಬಲ್ಲೂರು ತಿಳಿಸಿದರು.<br /> <br /> `ಗುಡಿ, ಚರ್ಚ್, ಮಸೀದಿಗಳನ್ನು ಬಿಟ್ಟು ಹೊರಬನ್ನಿ, ಬಡತನವ ಕೀಳಬನ್ನಿ, ಮೌಢ್ಯತೆಯ ಮಾರಿಯನ್ನು ಹೊರದೂಡಲೈತನ್ನಿ, ವಿಜ್ಞಾನ ದೀವಿಗೆಯ ಹಿಡಿದು ಬನ್ನಿ~ ಎಂದು ಸಾರುವ ಮೂಲಕ ಸಾತ್ವಿಕ ಬದುಕು ಕಟ್ಟಿಕೊಳ್ಳಲು ಸಲಹೆ ನೀಡಿದ್ದರು ಎಂದರು. <br /> <br /> ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಭ್ರಾತೃತ್ವ, ವಿಶ್ವಮಾನವ ಪ್ರಜ್ಞೆಯನ್ನು ಅವರು ಹೊಂದಿದ್ದರು. ಮನುಷ್ಯರ ಬಹುದೊಡ್ಡ ಸಂಪತ್ತು `ಮತಿ~. ಆದ್ದರಿಂದ ವಿದ್ಯಾರ್ಥಿಗಳು ನಿರಂಕುಶ ಮತಿಗಳಾಗಬೇಕು. ಯಾವುದನ್ನೂ ಪ್ರಶ್ನಿಸದೇ ಒಪ್ಪಿಕೊಳ್ಳಬಾರದು ಎಂಬ ನಿಲುವು ಅವರದ್ದಾಗಿತ್ತು ಎಂದು ಹೇಳಿದರು.<br /> <br /> ಸಾಹಿತ್ಯ ಬದುಕನ್ನು ಕಟ್ಟಿಕೊಡುತ್ತದೆ ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಬಿ.ಎಸ್. ಸಜ್ಜನ್ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ, ಸಂಸ್ಕೃತಿ ಸಮೃದ್ಧವಾಗಿರುವುದು ಹೆಮ್ಮೆಯ ಸಂಗತಿ ಆಗಿದೆ ಎಂದರು.<br /> <br /> ಕುವೆಂಪು ಕನ್ನಡ ಸಂಘದ ಅಧ್ಯಕ್ಷ ಪಂಚಾಕ್ಷರಿ ಪುಣ್ಯಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಸಿ.ಎಸ್. ಪಾಟೀಲ್, ಪ್ರೊ. ಶಿವಶರಣಪ್ಪ ಚಿಟ್ಟಾ, ಹಣಮಂತಪ್ಪ ಪಾಟೀಲ್ ಉಪಸ್ಥಿತರಿದ್ದರು. ಮಾನಶೆಟ್ಟಿ ಬೆಳಕಿರೆ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಸಾಹಿತ್ಯ ಮತ್ತು ಅಧ್ಯಾತ್ಮವನ್ನು ಸಮೀಕರಿಸಿದವರು ಕುವೆಂಪು ಎಂದು ಸಾಹಿತಿ ಡಾ. ಪ್ರೇಮಾ ಸಿರ್ಸೆ ನುಡಿದರು.<br /> <br /> ಕುವೆಂಪು ಕನ್ನಡ ಸಂಘವು ನಗರದ ಬಿ.ವಿ. ಭೂಮರೆಡ್ಡಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕುವೆಂಪು ಕವಿತೆಗಳಲ್ಲಿ ಬದುಕಿನ ಪರಿಪೂರ್ಣ ದರ್ಶನವನ್ನು ಕಾಣಬಹುದಾಗಿದೆ ಎಂದು ಹೇಳಿದರು.<br /> <br /> ಕುವೆಂಪು ನಾಡು ಕಂಡ ಮಹಾನ್ ಚೇತನ. ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಗಾಧವಾಗಿದೆ ಎಂದರು.<br /> <br /> ಕುವೆಂಪು ಬಹುದೊಡ್ಡ ವಿಚಾರವಾದಿ ಆಗಿದ್ದರು ಎಂದು ಡಾ. ಬಸವರಾಜ ಬಲ್ಲೂರು ತಿಳಿಸಿದರು.<br /> <br /> `ಗುಡಿ, ಚರ್ಚ್, ಮಸೀದಿಗಳನ್ನು ಬಿಟ್ಟು ಹೊರಬನ್ನಿ, ಬಡತನವ ಕೀಳಬನ್ನಿ, ಮೌಢ್ಯತೆಯ ಮಾರಿಯನ್ನು ಹೊರದೂಡಲೈತನ್ನಿ, ವಿಜ್ಞಾನ ದೀವಿಗೆಯ ಹಿಡಿದು ಬನ್ನಿ~ ಎಂದು ಸಾರುವ ಮೂಲಕ ಸಾತ್ವಿಕ ಬದುಕು ಕಟ್ಟಿಕೊಳ್ಳಲು ಸಲಹೆ ನೀಡಿದ್ದರು ಎಂದರು. <br /> <br /> ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಭ್ರಾತೃತ್ವ, ವಿಶ್ವಮಾನವ ಪ್ರಜ್ಞೆಯನ್ನು ಅವರು ಹೊಂದಿದ್ದರು. ಮನುಷ್ಯರ ಬಹುದೊಡ್ಡ ಸಂಪತ್ತು `ಮತಿ~. ಆದ್ದರಿಂದ ವಿದ್ಯಾರ್ಥಿಗಳು ನಿರಂಕುಶ ಮತಿಗಳಾಗಬೇಕು. ಯಾವುದನ್ನೂ ಪ್ರಶ್ನಿಸದೇ ಒಪ್ಪಿಕೊಳ್ಳಬಾರದು ಎಂಬ ನಿಲುವು ಅವರದ್ದಾಗಿತ್ತು ಎಂದು ಹೇಳಿದರು.<br /> <br /> ಸಾಹಿತ್ಯ ಬದುಕನ್ನು ಕಟ್ಟಿಕೊಡುತ್ತದೆ ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಬಿ.ಎಸ್. ಸಜ್ಜನ್ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ, ಸಂಸ್ಕೃತಿ ಸಮೃದ್ಧವಾಗಿರುವುದು ಹೆಮ್ಮೆಯ ಸಂಗತಿ ಆಗಿದೆ ಎಂದರು.<br /> <br /> ಕುವೆಂಪು ಕನ್ನಡ ಸಂಘದ ಅಧ್ಯಕ್ಷ ಪಂಚಾಕ್ಷರಿ ಪುಣ್ಯಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಸಿ.ಎಸ್. ಪಾಟೀಲ್, ಪ್ರೊ. ಶಿವಶರಣಪ್ಪ ಚಿಟ್ಟಾ, ಹಣಮಂತಪ್ಪ ಪಾಟೀಲ್ ಉಪಸ್ಥಿತರಿದ್ದರು. ಮಾನಶೆಟ್ಟಿ ಬೆಳಕಿರೆ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>