<p><strong>ಕೊಲಂಬೊ (ಪಿಟಿಐ): </strong>ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಶ್ರೀಲಂಕಾದ ಜಾಫ್ನಾ ಭೇಟಿಯನ್ನು ಪ್ರಮುಖ ವಿರೋಧ ಪಕ್ಷವಾದ ಯುನೈಟೆಡ್ ನ್ಯಾಷನಲ್ ಪಾರ್ಟಿ (ಯುಎನ್ಪಿ) ವಿರೋಧಿಸಿದೆ.<br /> <br /> ಈ ಕುರಿತು ಸಂಸತ್ನಲ್ಲಿ ದನಿಯೆತ್ತಿದ ಯುಎನ್ಪಿ ಹಿರಿಯ ನಾಯಕ ಜಾನ್ ಅಮರತುಂಗ, ‘ಕಳೆದ ತಿಂಗಳು ರಾಜಧಾನಿಯಲ್ಲಿ ನಡೆದ ಕಾಮನ್ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರ ಶೃಂಗಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದ ಸಿಂಗ್ ಅವರು, ಜಾಫ್ನಾಕ್ಕೆ ಭೇಟಿ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ’ ಎಂದರು.<br /> ‘ದೇಶದ ಅಧ್ಯಕ್ಷರಾದ ಮಹಿಂದಾ ರಾಜಪಕ್ಸೆ ಅವರ ಆಹ್ವಾನ ಇಲ್ಲದೆ, ಭಾರತದ ಪ್ರಧಾನಿ ಹೇಗೆ ದೇಶಕ್ಕೆ ಭೇಟಿ ನೀಡುತ್ತಾರೆ?’ ಎಂದು ಅವರು ಪ್ರಶ್ನಿಸಿದರು.<br /> <br /> ‘ಎಲ್ಟಿಟಿಇ’ಯನ್ನು ಬಗ್ಗುಬಡಿದ ಪ್ರದೇಶವಾದ ಜಾಫ್ನಾಗೆ ಸಿಂಗ್ ಅವರು ಭೇಟಿ ನೀಡುವುದರಿಂದ ಅಲ್ಲಿ ಪ್ರತ್ಯೇಕ ದೇಶದ ಕೂಗು ಕೇಳಿ<br /> ಬರುವ ಆತಂಕವಿದೆ’ ಎಂದು ಅಮರತುಂಗ ಸಂಸತ್ಗೆ ತಿಳಿಸಿದರು. ತಮಿಳರ ಪ್ರಾಬಲ್ಯ ಹೆಚ್ಚಾಗಿರುವ ಜಾಫ್ನಾಗೆ ಭೇಟಿ ನೀಡುವಂತೆ ಅಲ್ಲಿನ ನೂತನ ಮುಖ್ಯಮಂತ್ರಿ ಸಿ.ವಿ. ವಿಘ್ನೇಶ್ವರನ್ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಇತ್ತೀಚೆಗೆ ಆಹ್ವಾನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ (ಪಿಟಿಐ): </strong>ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಶ್ರೀಲಂಕಾದ ಜಾಫ್ನಾ ಭೇಟಿಯನ್ನು ಪ್ರಮುಖ ವಿರೋಧ ಪಕ್ಷವಾದ ಯುನೈಟೆಡ್ ನ್ಯಾಷನಲ್ ಪಾರ್ಟಿ (ಯುಎನ್ಪಿ) ವಿರೋಧಿಸಿದೆ.<br /> <br /> ಈ ಕುರಿತು ಸಂಸತ್ನಲ್ಲಿ ದನಿಯೆತ್ತಿದ ಯುಎನ್ಪಿ ಹಿರಿಯ ನಾಯಕ ಜಾನ್ ಅಮರತುಂಗ, ‘ಕಳೆದ ತಿಂಗಳು ರಾಜಧಾನಿಯಲ್ಲಿ ನಡೆದ ಕಾಮನ್ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರ ಶೃಂಗಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದ ಸಿಂಗ್ ಅವರು, ಜಾಫ್ನಾಕ್ಕೆ ಭೇಟಿ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ’ ಎಂದರು.<br /> ‘ದೇಶದ ಅಧ್ಯಕ್ಷರಾದ ಮಹಿಂದಾ ರಾಜಪಕ್ಸೆ ಅವರ ಆಹ್ವಾನ ಇಲ್ಲದೆ, ಭಾರತದ ಪ್ರಧಾನಿ ಹೇಗೆ ದೇಶಕ್ಕೆ ಭೇಟಿ ನೀಡುತ್ತಾರೆ?’ ಎಂದು ಅವರು ಪ್ರಶ್ನಿಸಿದರು.<br /> <br /> ‘ಎಲ್ಟಿಟಿಇ’ಯನ್ನು ಬಗ್ಗುಬಡಿದ ಪ್ರದೇಶವಾದ ಜಾಫ್ನಾಗೆ ಸಿಂಗ್ ಅವರು ಭೇಟಿ ನೀಡುವುದರಿಂದ ಅಲ್ಲಿ ಪ್ರತ್ಯೇಕ ದೇಶದ ಕೂಗು ಕೇಳಿ<br /> ಬರುವ ಆತಂಕವಿದೆ’ ಎಂದು ಅಮರತುಂಗ ಸಂಸತ್ಗೆ ತಿಳಿಸಿದರು. ತಮಿಳರ ಪ್ರಾಬಲ್ಯ ಹೆಚ್ಚಾಗಿರುವ ಜಾಫ್ನಾಗೆ ಭೇಟಿ ನೀಡುವಂತೆ ಅಲ್ಲಿನ ನೂತನ ಮುಖ್ಯಮಂತ್ರಿ ಸಿ.ವಿ. ವಿಘ್ನೇಶ್ವರನ್ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಇತ್ತೀಚೆಗೆ ಆಹ್ವಾನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>