<p><strong>ನವದೆಹಲಿ (ಪಿಟಿಐ):</strong> ಕಾಂಗ್ರೆಸ್ ಮುಖಂಡ ಮತ್ತು ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಭಾಗಿಯಾಗಿದ್ದಾರೆ ಎಂದು ಹೇಳಲಾದ ಸಿ.ಡಿ ವಿವಾದ ಪ್ರಕರಣದ ತನಿಖೆಯನ್ನು ದೆಹಲಿಯ ಬಾರ್ ಕೌನ್ಸಿಲ್ನಿಂದ ನಡೆಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾ ಮಾಡಿದೆ.</p>.<p>`ವಕೀಲರೊಬ್ಬರ ನೌಕರನ ವಿರುದ್ಧ ತನಿಖೆ ನಡೆಸುವಂತೆ ದೆಹಲಿ ಬಾರ್ ಕೌನ್ಸಿಲ್ ಮತ್ತು ದೆಹಲಿ ಹೈಕೋರ್ಟ್ನ ಬಾರ್ ಅಸೋಸಿಯೇಷನ್ಗೆ ನಿರ್ದೇಶನ ನೀಡುವಂತೆ ಕೋರಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ. ಆದರೆ ವಕೀಲರೊಬ್ಬರು ನೇಮಿಸಿಕೊಂಡಿರುವ ನೌಕರನ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ವಕೀಲರ ಸಂಘಕ್ಕೆ ನೀಡಲಾಗಿಲ್ಲ. ಹಾಗಾಗಿ ಈ ಅರ್ಜಿಯನ್ನು ವಜಾ ಮಾಡಲಾಗಿದೆ~ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ.ಕೆ.ಸಿಕ್ರಿ ನೇತೃತ್ವದ ನ್ಯಾಯಪೀಠ ಹೇಳಿತು.</p>.<p>ಸಾಮಾಜಿಕ ಕಾರ್ಯಕರ್ತ ಸಂಜಯ್ ಕುಮಾರ್ ಎಂಬುವವರು ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಕಾಂಗ್ರೆಸ್ ಮುಖಂಡ ಮತ್ತು ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಭಾಗಿಯಾಗಿದ್ದಾರೆ ಎಂದು ಹೇಳಲಾದ ಸಿ.ಡಿ ವಿವಾದ ಪ್ರಕರಣದ ತನಿಖೆಯನ್ನು ದೆಹಲಿಯ ಬಾರ್ ಕೌನ್ಸಿಲ್ನಿಂದ ನಡೆಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾ ಮಾಡಿದೆ.</p>.<p>`ವಕೀಲರೊಬ್ಬರ ನೌಕರನ ವಿರುದ್ಧ ತನಿಖೆ ನಡೆಸುವಂತೆ ದೆಹಲಿ ಬಾರ್ ಕೌನ್ಸಿಲ್ ಮತ್ತು ದೆಹಲಿ ಹೈಕೋರ್ಟ್ನ ಬಾರ್ ಅಸೋಸಿಯೇಷನ್ಗೆ ನಿರ್ದೇಶನ ನೀಡುವಂತೆ ಕೋರಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ. ಆದರೆ ವಕೀಲರೊಬ್ಬರು ನೇಮಿಸಿಕೊಂಡಿರುವ ನೌಕರನ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ವಕೀಲರ ಸಂಘಕ್ಕೆ ನೀಡಲಾಗಿಲ್ಲ. ಹಾಗಾಗಿ ಈ ಅರ್ಜಿಯನ್ನು ವಜಾ ಮಾಡಲಾಗಿದೆ~ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ.ಕೆ.ಸಿಕ್ರಿ ನೇತೃತ್ವದ ನ್ಯಾಯಪೀಠ ಹೇಳಿತು.</p>.<p>ಸಾಮಾಜಿಕ ಕಾರ್ಯಕರ್ತ ಸಂಜಯ್ ಕುಮಾರ್ ಎಂಬುವವರು ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>