<p><strong>ವಿಜಾಪುರ: </strong>`ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಶೀಘ್ರವೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುವುದು~ ಎಂದು ಉತ್ತರ ವಲಯ ಐಜಿಪಿ ಕೆ.ಎಸ್.ಆರ್. ಚರಣ್ ರೆಡ್ಡಿ ಹೇಳಿದರು.<br /> <br /> ಜಿಲ್ಲೆಗೆ ಭೇಟಿ ನೀಡಿದ್ದ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. `ಐಪಿಸಿ ಕಲಂ 153 (ಎ) ಅಡಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲು ಸರ್ಕಾರದ ಪೂರ್ವಾನುಮತಿಯ ಅಗತ್ಯವಿದೆ. ಸರ್ಕಾರದಿಂದ ಅನುಮತಿ ಬರಬೇಕಿದೆ. <br /> <br /> ಘಟನೆ ನಡೆದು 90 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಬೇಕಿದ್ದು, ಅದಕ್ಕೆ ಇನ್ನೂ ಎರಡು ವಾರ ಕಾಲಾವಕಾಶವಿದೆ. ಒಂದೊಮ್ಮೆ ಸರ್ಕಾರದ ಅನುಮತಿ ತಕ್ಷಣಕ್ಕೆ ದೊರೆಯದಿದ್ದರೂ ಅದನ್ನು ಬಾಕಿ ಇಟ್ಟು ದೋಷಾರೋಪ ಪಟ್ಟಿ ಸಲ್ಲಿಸುತ್ತೇವೆ~ ಎಂದರು.<br /> <br /> `ವಿಜಾಪುರದ ಗೋಲಗುಮ್ಮಟ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭಗೊಂಡಿದೆ~ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ: </strong>`ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಶೀಘ್ರವೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುವುದು~ ಎಂದು ಉತ್ತರ ವಲಯ ಐಜಿಪಿ ಕೆ.ಎಸ್.ಆರ್. ಚರಣ್ ರೆಡ್ಡಿ ಹೇಳಿದರು.<br /> <br /> ಜಿಲ್ಲೆಗೆ ಭೇಟಿ ನೀಡಿದ್ದ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. `ಐಪಿಸಿ ಕಲಂ 153 (ಎ) ಅಡಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲು ಸರ್ಕಾರದ ಪೂರ್ವಾನುಮತಿಯ ಅಗತ್ಯವಿದೆ. ಸರ್ಕಾರದಿಂದ ಅನುಮತಿ ಬರಬೇಕಿದೆ. <br /> <br /> ಘಟನೆ ನಡೆದು 90 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಬೇಕಿದ್ದು, ಅದಕ್ಕೆ ಇನ್ನೂ ಎರಡು ವಾರ ಕಾಲಾವಕಾಶವಿದೆ. ಒಂದೊಮ್ಮೆ ಸರ್ಕಾರದ ಅನುಮತಿ ತಕ್ಷಣಕ್ಕೆ ದೊರೆಯದಿದ್ದರೂ ಅದನ್ನು ಬಾಕಿ ಇಟ್ಟು ದೋಷಾರೋಪ ಪಟ್ಟಿ ಸಲ್ಲಿಸುತ್ತೇವೆ~ ಎಂದರು.<br /> <br /> `ವಿಜಾಪುರದ ಗೋಲಗುಮ್ಮಟ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭಗೊಂಡಿದೆ~ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>