<p>ಕೋಲಾರ: ಮಾರ್ಚ್ 17ರ ಒಳಗೆ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕು. ಇದೇ ಬುಧವಾರದಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೂ ಸಿದ್ಧತೆ ನಡೆಸಬೇಕು. <br /> <br /> –ಇಂಥದೊಂದು ಸವಾಲು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಎದುರಾಗಿದೆ.<br /> <br /> ಸಿಇಟಿಗೆ ಅರ್ಜಿ ಸಲ್ಲಿಸಲು ಬ್ಯಾಂಕ್ನಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದೋ ಪರೀಕ್ಷೆಗೆ ಪೂರ್ವಸಿದ್ಧತೆ ನಡೆಸುವುದೋ ಎಂಬ ದ್ವಂದ್ವ ಸನ್ನಿವೇಶ ನಿರ್ಮಾಣವಾಗಿದೆ.<br /> <br /> ಮಾರ್ಚ್ 11ರಿಂದಲೇ ಸಿಇಟಿಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆದರೆ ನಗರದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯಲ್ಲಿ ಏಕಕಾಲಕ್ಕೆ ನೂರಾರು ವಿದ್ಯಾರ್ಥಿಗಳು ಧಾವಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ.<br /> <br /> 24 ಗಂಟೆ ನಂತರವಷ್ಟೇ ಅರ್ಜಿಗಳು ಬರಲಿವೆ. ನಂತರ ಬನ್ನಿ ಎಂದು ಹೇಳಿದ್ದಾರೆ. ನಾವು ದೂರದ ನೆರ್ನಹಳ್ಳಿಯಿಂದ ಬಂದಿದ್ದೇವೆ. ಮತ್ತೆ ನಾಳೆ ಬರಬೇಕು. ಓದಿಕೊಳ್ಳಲು ಪುರುಸೊತ್ತೇ ಇಲ್ಲ ಎಂದು ನೆರ್ನಹಳ್ಳಿಯ ವಿದ್ಯಾರ್ಥಿನಿ ಶ್ಯಾಮಲಾ, ಸುಜಾತಾ ತಮ್ಮ ಅಳಲು ವ್ಯಕ್ತಪಡಿಸಿದರು.<br /> <br /> ದೂರದ ಹಳ್ಳಿಗಳಿಂದ ಬಂದಿದ್ದವರು ಸರಿಯಾದ ಸಮಯಕ್ಕೆ ಊಟ, ನೀರು ಇಲ್ಲದೆ ಬ್ಯಾಂಕ್ನ ಆವರಣದಲ್ಲಿ ಕಾಯುತ್ತಿದ್ದ ದೃಶ್ಯ ಮಂಗಳವಾರ ಕಂಡು ಬಂತು. ಸ್ಟಡಿ ಹಾಲಿಡೇಸ್ ಅನ್ನು ಹೀಗೆ ಕಳೆಯಬೇಕಾಗಿದೆ ಎಂದು ಹಲವರು ವಿಷಾದ ವ್ಯಕ್ತಪಡಿಸಿದರು.<br /> <br /> ಗ್ರಾಹಕರ ಸಂಕಟ: ಸೋಮವಾರದಿಂದ ನೂರಾರು ವಿದ್ಯಾರ್ಥಿಗಳು ಏಕಕಾಲಕ್ಕೆ ಬ್ಯಾಂಕ್ಗೆ ಧಾವಿಸಿ ಬರುತ್ತಿರುವ ಪರಿಣಾಮ ನೂಕು– ನುಗ್ಗಲು ಏರ್ಪಡುತ್ತಿದೆ. ಇದರಿಂದ ದೈನಂದಿನ ಗ್ರಾಹಕರಿಗೆ ತೊಂದರೆ ಎದುರಾಗಿದೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಮಾರ್ಚ್ 17ರ ಒಳಗೆ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕು. ಇದೇ ಬುಧವಾರದಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೂ ಸಿದ್ಧತೆ ನಡೆಸಬೇಕು. <br /> <br /> –ಇಂಥದೊಂದು ಸವಾಲು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಎದುರಾಗಿದೆ.<br /> <br /> ಸಿಇಟಿಗೆ ಅರ್ಜಿ ಸಲ್ಲಿಸಲು ಬ್ಯಾಂಕ್ನಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದೋ ಪರೀಕ್ಷೆಗೆ ಪೂರ್ವಸಿದ್ಧತೆ ನಡೆಸುವುದೋ ಎಂಬ ದ್ವಂದ್ವ ಸನ್ನಿವೇಶ ನಿರ್ಮಾಣವಾಗಿದೆ.<br /> <br /> ಮಾರ್ಚ್ 11ರಿಂದಲೇ ಸಿಇಟಿಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆದರೆ ನಗರದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯಲ್ಲಿ ಏಕಕಾಲಕ್ಕೆ ನೂರಾರು ವಿದ್ಯಾರ್ಥಿಗಳು ಧಾವಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ.<br /> <br /> 24 ಗಂಟೆ ನಂತರವಷ್ಟೇ ಅರ್ಜಿಗಳು ಬರಲಿವೆ. ನಂತರ ಬನ್ನಿ ಎಂದು ಹೇಳಿದ್ದಾರೆ. ನಾವು ದೂರದ ನೆರ್ನಹಳ್ಳಿಯಿಂದ ಬಂದಿದ್ದೇವೆ. ಮತ್ತೆ ನಾಳೆ ಬರಬೇಕು. ಓದಿಕೊಳ್ಳಲು ಪುರುಸೊತ್ತೇ ಇಲ್ಲ ಎಂದು ನೆರ್ನಹಳ್ಳಿಯ ವಿದ್ಯಾರ್ಥಿನಿ ಶ್ಯಾಮಲಾ, ಸುಜಾತಾ ತಮ್ಮ ಅಳಲು ವ್ಯಕ್ತಪಡಿಸಿದರು.<br /> <br /> ದೂರದ ಹಳ್ಳಿಗಳಿಂದ ಬಂದಿದ್ದವರು ಸರಿಯಾದ ಸಮಯಕ್ಕೆ ಊಟ, ನೀರು ಇಲ್ಲದೆ ಬ್ಯಾಂಕ್ನ ಆವರಣದಲ್ಲಿ ಕಾಯುತ್ತಿದ್ದ ದೃಶ್ಯ ಮಂಗಳವಾರ ಕಂಡು ಬಂತು. ಸ್ಟಡಿ ಹಾಲಿಡೇಸ್ ಅನ್ನು ಹೀಗೆ ಕಳೆಯಬೇಕಾಗಿದೆ ಎಂದು ಹಲವರು ವಿಷಾದ ವ್ಯಕ್ತಪಡಿಸಿದರು.<br /> <br /> ಗ್ರಾಹಕರ ಸಂಕಟ: ಸೋಮವಾರದಿಂದ ನೂರಾರು ವಿದ್ಯಾರ್ಥಿಗಳು ಏಕಕಾಲಕ್ಕೆ ಬ್ಯಾಂಕ್ಗೆ ಧಾವಿಸಿ ಬರುತ್ತಿರುವ ಪರಿಣಾಮ ನೂಕು– ನುಗ್ಗಲು ಏರ್ಪಡುತ್ತಿದೆ. ಇದರಿಂದ ದೈನಂದಿನ ಗ್ರಾಹಕರಿಗೆ ತೊಂದರೆ ಎದುರಾಗಿದೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>