<p>ನಾಗಮಂಗಲ: ವಿದ್ಯಾರ್ಥಿಗಳನ್ನು ವೃತ್ತಿ ಶಿಕ್ಷಣಕ್ಕೆ ಸಜ್ಜುಗೊಳಿಸಲು ನಾಗಮಂಗಲ ತಾಲ್ಲೂಕು ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯ ಉಚಿತ ಸಿಇಟಿ ತರಬೇತಿ ಶಿಬಿರ ಏರ್ಪಡಿಸಿದ್ದು, ಇದರ ನೆರವು ಪಡೆಯಬೇಕು ಎಂದು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎನ್.ಎಸ್. ರಾಮೇಗೌಡ ಸಲಹೆ ಮಾಡಿದರು.<br /> <br /> ಬಿಜಿಎಸ್ ಉಚಿತ ಸಿ.ಇ.ಟಿ. ತರ ಬೇತಿ ಶಿಬಿರವನ್ನು ಶನಿವಾರ ಉದ್ಘಾಟಿ ಸಿದ ಅವರು, ಬದಲಾಗುತ್ತಿರುವ ಶಿಕ್ಷಣದ ಸವಾಲಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಸಿದ್ಧತೆ ನಡೆಸಬೇಕಾದ ಕ್ರಮವನ್ನು ವಿವರಿಸಿದರು. <br /> <br /> ಬಿಜಿಎಸ್ ಶಿಕ್ಷಣ ಮಹಾವಿದ್ಯಾ ಲಯ ಪ್ರಾಚಾರ್ಯ ಡಾ. ಎ.ಟಿ. ಶಿವರಾಮು ಅವರು, ಪ್ರಾಸ್ತಾವಿಕ ನುಡಿಯಲ್ಲಿ ಸಿ.ಇ.ಟಿ. ಉಚಿತ ತರಬೇತಿ ಶಿಬಿರದ ಉದ್ದೇಶಗಳನ್ನು ವಿವರಿಸಿದರು.<br /> <br /> ಮುಖ್ಯ ಅತಿಥಿ, ಬಿಜಿಎಸ್ ಔಷಧ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಮೇಶ್, ವಿದ್ಯಾರ್ಥಿಗಳಿಗೆ ತರಬೇತಿ ಕೇವಲ ಪ್ರವೇಶ ಪರೀಕ್ಷೆಯ ಉದ್ದೇಶವನ್ನಷ್ಟೇ ಹೊಂದಿಲ್ಲ. ಭವಿಷ್ಯದಲ್ಲಿ ಉನ್ನತ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಪಡೆಯಲು ಸಹಕಾರಿಯಾಗಲಿದೆ ಎಂದರು.<br /> <br /> ಮುಖ್ಯ ಅತಿಥಿ ಬಿಜಿಎಸ್ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ ವಿಭಾಗದ ಮುಖ್ಯಸ್ಥ ಆನಂದರಾಜು, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ, ಶಿಸ್ತಿನ ಅಗತ್ಯತೆ, ಮಹತ್ವವನ್ನು ವಿವರಿಸಿದರು.<br /> <br /> ನಾಗಮಂಗಲ, ಕೆ.ಆರ್. ಪೇಟೆ, ಪಾಂಡವಪುರ, ಕುಣಿಗಲ್, ಬಿ.ಜಿ.ನಗರ ಇಲ್ಲಿಯ ಬಿ.ಜಿ.ಎಸ್. ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಜರಿದ್ದರು. ಕುಣಿಗಲ್ನ ರಾಜಣ್ಣ ನಿರೂಪಿಸಿದರು. ಕೆ.ಆರ್. ಪೇಟೆಯ ಸಿ.ಎಂ.ರಘು ವಂದಿಸಿದರು. ಲಕ್ಷ್ಮಿನಾರಾಯಣನಾಥ ಸ್ವಾಮೀಜಿ ಅವರು ಸಮಾರಂಭದ ಸಾನ್ನಿಧ್ಯ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಗಮಂಗಲ: ವಿದ್ಯಾರ್ಥಿಗಳನ್ನು ವೃತ್ತಿ ಶಿಕ್ಷಣಕ್ಕೆ ಸಜ್ಜುಗೊಳಿಸಲು ನಾಗಮಂಗಲ ತಾಲ್ಲೂಕು ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯ ಉಚಿತ ಸಿಇಟಿ ತರಬೇತಿ ಶಿಬಿರ ಏರ್ಪಡಿಸಿದ್ದು, ಇದರ ನೆರವು ಪಡೆಯಬೇಕು ಎಂದು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎನ್.ಎಸ್. ರಾಮೇಗೌಡ ಸಲಹೆ ಮಾಡಿದರು.<br /> <br /> ಬಿಜಿಎಸ್ ಉಚಿತ ಸಿ.ಇ.ಟಿ. ತರ ಬೇತಿ ಶಿಬಿರವನ್ನು ಶನಿವಾರ ಉದ್ಘಾಟಿ ಸಿದ ಅವರು, ಬದಲಾಗುತ್ತಿರುವ ಶಿಕ್ಷಣದ ಸವಾಲಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಸಿದ್ಧತೆ ನಡೆಸಬೇಕಾದ ಕ್ರಮವನ್ನು ವಿವರಿಸಿದರು. <br /> <br /> ಬಿಜಿಎಸ್ ಶಿಕ್ಷಣ ಮಹಾವಿದ್ಯಾ ಲಯ ಪ್ರಾಚಾರ್ಯ ಡಾ. ಎ.ಟಿ. ಶಿವರಾಮು ಅವರು, ಪ್ರಾಸ್ತಾವಿಕ ನುಡಿಯಲ್ಲಿ ಸಿ.ಇ.ಟಿ. ಉಚಿತ ತರಬೇತಿ ಶಿಬಿರದ ಉದ್ದೇಶಗಳನ್ನು ವಿವರಿಸಿದರು.<br /> <br /> ಮುಖ್ಯ ಅತಿಥಿ, ಬಿಜಿಎಸ್ ಔಷಧ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಮೇಶ್, ವಿದ್ಯಾರ್ಥಿಗಳಿಗೆ ತರಬೇತಿ ಕೇವಲ ಪ್ರವೇಶ ಪರೀಕ್ಷೆಯ ಉದ್ದೇಶವನ್ನಷ್ಟೇ ಹೊಂದಿಲ್ಲ. ಭವಿಷ್ಯದಲ್ಲಿ ಉನ್ನತ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಪಡೆಯಲು ಸಹಕಾರಿಯಾಗಲಿದೆ ಎಂದರು.<br /> <br /> ಮುಖ್ಯ ಅತಿಥಿ ಬಿಜಿಎಸ್ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ ವಿಭಾಗದ ಮುಖ್ಯಸ್ಥ ಆನಂದರಾಜು, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ, ಶಿಸ್ತಿನ ಅಗತ್ಯತೆ, ಮಹತ್ವವನ್ನು ವಿವರಿಸಿದರು.<br /> <br /> ನಾಗಮಂಗಲ, ಕೆ.ಆರ್. ಪೇಟೆ, ಪಾಂಡವಪುರ, ಕುಣಿಗಲ್, ಬಿ.ಜಿ.ನಗರ ಇಲ್ಲಿಯ ಬಿ.ಜಿ.ಎಸ್. ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಜರಿದ್ದರು. ಕುಣಿಗಲ್ನ ರಾಜಣ್ಣ ನಿರೂಪಿಸಿದರು. ಕೆ.ಆರ್. ಪೇಟೆಯ ಸಿ.ಎಂ.ರಘು ವಂದಿಸಿದರು. ಲಕ್ಷ್ಮಿನಾರಾಯಣನಾಥ ಸ್ವಾಮೀಜಿ ಅವರು ಸಮಾರಂಭದ ಸಾನ್ನಿಧ್ಯ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>