<p><strong>ನವದೆಹಲಿ:</strong> ಗಣಿ ಗುತ್ತಿಗೆ ನೀಡುವಾಗ ಕೆಲ ಖಾಸಗಿ ಕಂಪೆನಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ ಎಂಬ ತಮ್ಮ ವಿರುದ್ಧದ ಲೋಕಾಯುಕ್ತ ವರದಿಯ ಕೆಲ ಭಾಗಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇಂದ್ರ ಉನ್ನತಾಧಿಕಾರ ಸಮಿತಿಗೆ (ಸಿಇಸಿ) ತಿಳಿಸಿದ್ದಾರೆ.<br /> <br /> `ಸಿಇಸಿ~ ಮುಂದೆ ಸೋಮವಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಯಡಿಯೂರಪ್ಪ ತಮ್ಮ ವಾದ ಮುಂದಿಟ್ಟಿದ್ದಾರೆ.<br /> ಲೋಕಾಯುಕ್ತ ಸಲ್ಲಿಸಿರುವ ಪ್ರಥಮ ಮಾಹಿತಿ ವರದಿಯನ್ನು (ಎಫ್.ಐ.ಆರ್) ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತದಿಂದ ಸಿಬಿಐಗೆ ಪ್ರಕರಣ ವರ್ಗಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.<br /> <br /> ತನಿಖಾಧಿಕಾರಿಗಳು ತಮ್ಮ ವಿರುದ್ಧ ಮಾಡಿರುವ ಆರೋಪ ಸಮರ್ಥಿಸುವಂತಹ ದಾಖಲೆಗಳನ್ನು ಒದಗಿಸಿಲ್ಲ ಎಂದು ಎಫ್ಐಆರ್ ವಜಾಗೊಳಿಸುವಾಗ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದೂ ಬಿಎಸ್ವೈ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.<br /> <br /> ಗಣಿ ಗುತ್ತಿಗೆ ಪಡೆಯಲು ತಮ್ಮ ಕುಟುಂಬ ವರ್ಗಕ್ಕೆ ಸೇರಿದ ಟ್ರಸ್ಟ್ಗೆ ಗಣಿ ಕಂಪೆನಿಗಳು ಹಣ ಪಾವತಿಸಿವೆ ಎಂದು ಧಾರವಾಡ ಮೂಲದ ಸರ್ಕಾರೇತರ ಸಂಸ್ಥೆ `ಸಮಾಜ ಪರಿವರ್ತನ ಸಮುದಾಯ~ ಮಾಡಿದ ಆರೋಪವನ್ನು ಅಲ್ಲಗಳೆದಿರುವ ಅವರು, ತಮ್ಮ ವಿರುದ್ಧ ಸಿಬಿಐ ತನಿಖೆ ನಡೆಸಬೇಕು ಎಂಬ ಆಗ್ರಹದ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದಿದ್ದಾರೆ.<br /> <br /> ತಮ್ಮ ಕುಟುಂಬ ಸದಸ್ಯರು ನಡೆಸುತ್ತಿರುವ ಪ್ರೇರಣಾ ಎಜುಕೇಶನ್ ಟ್ರಸ್ಟ್ಗೆ `ಸೌತ್ ವೆಸ್ಟ್ ಮೈನಿಂಗ್ ಕಂಪೆನಿ~ (ಎಸ್ಡಬ್ಲುಎಂಎಲ್) 30 ಕೋಟಿ ರೂಪಾಯಿ ಪಾವತಿಸಿದೆ ಎಂಬ ಆರೋಪ ತಳ್ಳಿಹಾಕಿರುವ ಯಡಿಯೂರಪ್ಪ ಅದೊಂದು ಸಾರ್ವಜನಿಕ ಟ್ರಸ್ಟ್ ಆಗಿದ್ದು, ಹಣ ದೇಣಿಗೆಯ ರೂಪದಲ್ಲಿ ಬಂದಿದೆ. ತಮ್ಮ ಪುತ್ರರು ಆ ಟ್ರಸ್ಟ್ನ ಸದಸ್ಯರಾಗಿದ್ದಾರೆ ಅಷ್ಟೇ. <br /> <br /> ಇದರ ಹೊರತಾಗಿ ಆ ಸಂಸ್ಥೆಯ ವ್ಯವಹಾರಕ್ಕೂ ತಮಗೂ ಸಂಬಂಧವಿಲ್ಲ. ಅಲ್ಲದೇ ತಾವು ಮುಖ್ಯಮಂತ್ರಿಯಾಗಿದ್ದಾಗ `ಎಸ್ಡಬ್ಲುಎಂಎಲ್~ಗೆ ಯಾವುದೇ ಗಣಿ ಗುತ್ತಿಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.<br /> <br /> ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವೀಣ್ಚಂದ್ರ ಎಂಬುವವರಿಗೆ ಗಣಿ ಗುತ್ತಿಗೆಗೆ ಅನುಮತಿ ನೀಡಿರುವ ಕುರಿತು ಪ್ರಮಾಣಪತ್ರದಲ್ಲಿ ಹೇಳಿರುವ ಅವರು, ಈ ವಿಚಾರ ಈಗಾಗಲೇ ಬೆಂಗಳೂರು ನ್ಯಾಯಾಲಯದ ಮುಂದೆ ಇದೆ. ಸಂಬಂಧಿಸಿದ ವ್ಯಕ್ತಿಗಳಿಗೆ ಸಮನ್ಸ್ ಕಳುಹಿಸಲಾಗಿದೆ. ಕೋರ್ಟ್ ವಿಚಾರಣೆ ನಡೆಸುತ್ತಿರುವಾಗ ಸಿಬಿಐ ತನಿಖೆಗೆ ಒತ್ತಾಯಿಸುವುದರಲ್ಲಿ ಅರ್ಥವಿಲ್ಲ ಎಂದೂ ಹೇಳಿದ್ದಾರೆ.<br /> <br /> ಗಣಿ ಗುತ್ತಿಗೆ ಪಡೆದಿದ್ದ ಪ್ರವೀಣ್ ಚಂದ್ರ, ಮೆಸರ್ಸ್ ಭಗತ್ ಹೋಮ್ಸ ಪ್ರೈವೇಟ್ ಲಿಮಿಟೆಡ್ಗೆ 2.5 ಕೋಟಿ ಹಾಗೂ ಧವಳಗಿರಿ ಪ್ರಾಪರ್ಟಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ಗೆ 3.5 ಕೋಟಿ ರೂಪಾಯಿ ಪಾವತಿಸಿದ್ದರು. ಈ ಎರಡೂ ಕಂಪೆನಿಗಳ ನಿರ್ದೇಶಕರು ಯಡಿಯೂರಪ್ಪ ಅವರ ಹತ್ತಿರದ ಸಂಬಂಧಿಗಳು. ಈ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಸಮಾಜ ಪರಿವರ್ತನ ಸಮುದಾಯ ಒತ್ತಾಯಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗಣಿ ಗುತ್ತಿಗೆ ನೀಡುವಾಗ ಕೆಲ ಖಾಸಗಿ ಕಂಪೆನಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ ಎಂಬ ತಮ್ಮ ವಿರುದ್ಧದ ಲೋಕಾಯುಕ್ತ ವರದಿಯ ಕೆಲ ಭಾಗಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇಂದ್ರ ಉನ್ನತಾಧಿಕಾರ ಸಮಿತಿಗೆ (ಸಿಇಸಿ) ತಿಳಿಸಿದ್ದಾರೆ.<br /> <br /> `ಸಿಇಸಿ~ ಮುಂದೆ ಸೋಮವಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಯಡಿಯೂರಪ್ಪ ತಮ್ಮ ವಾದ ಮುಂದಿಟ್ಟಿದ್ದಾರೆ.<br /> ಲೋಕಾಯುಕ್ತ ಸಲ್ಲಿಸಿರುವ ಪ್ರಥಮ ಮಾಹಿತಿ ವರದಿಯನ್ನು (ಎಫ್.ಐ.ಆರ್) ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತದಿಂದ ಸಿಬಿಐಗೆ ಪ್ರಕರಣ ವರ್ಗಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.<br /> <br /> ತನಿಖಾಧಿಕಾರಿಗಳು ತಮ್ಮ ವಿರುದ್ಧ ಮಾಡಿರುವ ಆರೋಪ ಸಮರ್ಥಿಸುವಂತಹ ದಾಖಲೆಗಳನ್ನು ಒದಗಿಸಿಲ್ಲ ಎಂದು ಎಫ್ಐಆರ್ ವಜಾಗೊಳಿಸುವಾಗ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದೂ ಬಿಎಸ್ವೈ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.<br /> <br /> ಗಣಿ ಗುತ್ತಿಗೆ ಪಡೆಯಲು ತಮ್ಮ ಕುಟುಂಬ ವರ್ಗಕ್ಕೆ ಸೇರಿದ ಟ್ರಸ್ಟ್ಗೆ ಗಣಿ ಕಂಪೆನಿಗಳು ಹಣ ಪಾವತಿಸಿವೆ ಎಂದು ಧಾರವಾಡ ಮೂಲದ ಸರ್ಕಾರೇತರ ಸಂಸ್ಥೆ `ಸಮಾಜ ಪರಿವರ್ತನ ಸಮುದಾಯ~ ಮಾಡಿದ ಆರೋಪವನ್ನು ಅಲ್ಲಗಳೆದಿರುವ ಅವರು, ತಮ್ಮ ವಿರುದ್ಧ ಸಿಬಿಐ ತನಿಖೆ ನಡೆಸಬೇಕು ಎಂಬ ಆಗ್ರಹದ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದಿದ್ದಾರೆ.<br /> <br /> ತಮ್ಮ ಕುಟುಂಬ ಸದಸ್ಯರು ನಡೆಸುತ್ತಿರುವ ಪ್ರೇರಣಾ ಎಜುಕೇಶನ್ ಟ್ರಸ್ಟ್ಗೆ `ಸೌತ್ ವೆಸ್ಟ್ ಮೈನಿಂಗ್ ಕಂಪೆನಿ~ (ಎಸ್ಡಬ್ಲುಎಂಎಲ್) 30 ಕೋಟಿ ರೂಪಾಯಿ ಪಾವತಿಸಿದೆ ಎಂಬ ಆರೋಪ ತಳ್ಳಿಹಾಕಿರುವ ಯಡಿಯೂರಪ್ಪ ಅದೊಂದು ಸಾರ್ವಜನಿಕ ಟ್ರಸ್ಟ್ ಆಗಿದ್ದು, ಹಣ ದೇಣಿಗೆಯ ರೂಪದಲ್ಲಿ ಬಂದಿದೆ. ತಮ್ಮ ಪುತ್ರರು ಆ ಟ್ರಸ್ಟ್ನ ಸದಸ್ಯರಾಗಿದ್ದಾರೆ ಅಷ್ಟೇ. <br /> <br /> ಇದರ ಹೊರತಾಗಿ ಆ ಸಂಸ್ಥೆಯ ವ್ಯವಹಾರಕ್ಕೂ ತಮಗೂ ಸಂಬಂಧವಿಲ್ಲ. ಅಲ್ಲದೇ ತಾವು ಮುಖ್ಯಮಂತ್ರಿಯಾಗಿದ್ದಾಗ `ಎಸ್ಡಬ್ಲುಎಂಎಲ್~ಗೆ ಯಾವುದೇ ಗಣಿ ಗುತ್ತಿಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.<br /> <br /> ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವೀಣ್ಚಂದ್ರ ಎಂಬುವವರಿಗೆ ಗಣಿ ಗುತ್ತಿಗೆಗೆ ಅನುಮತಿ ನೀಡಿರುವ ಕುರಿತು ಪ್ರಮಾಣಪತ್ರದಲ್ಲಿ ಹೇಳಿರುವ ಅವರು, ಈ ವಿಚಾರ ಈಗಾಗಲೇ ಬೆಂಗಳೂರು ನ್ಯಾಯಾಲಯದ ಮುಂದೆ ಇದೆ. ಸಂಬಂಧಿಸಿದ ವ್ಯಕ್ತಿಗಳಿಗೆ ಸಮನ್ಸ್ ಕಳುಹಿಸಲಾಗಿದೆ. ಕೋರ್ಟ್ ವಿಚಾರಣೆ ನಡೆಸುತ್ತಿರುವಾಗ ಸಿಬಿಐ ತನಿಖೆಗೆ ಒತ್ತಾಯಿಸುವುದರಲ್ಲಿ ಅರ್ಥವಿಲ್ಲ ಎಂದೂ ಹೇಳಿದ್ದಾರೆ.<br /> <br /> ಗಣಿ ಗುತ್ತಿಗೆ ಪಡೆದಿದ್ದ ಪ್ರವೀಣ್ ಚಂದ್ರ, ಮೆಸರ್ಸ್ ಭಗತ್ ಹೋಮ್ಸ ಪ್ರೈವೇಟ್ ಲಿಮಿಟೆಡ್ಗೆ 2.5 ಕೋಟಿ ಹಾಗೂ ಧವಳಗಿರಿ ಪ್ರಾಪರ್ಟಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ಗೆ 3.5 ಕೋಟಿ ರೂಪಾಯಿ ಪಾವತಿಸಿದ್ದರು. ಈ ಎರಡೂ ಕಂಪೆನಿಗಳ ನಿರ್ದೇಶಕರು ಯಡಿಯೂರಪ್ಪ ಅವರ ಹತ್ತಿರದ ಸಂಬಂಧಿಗಳು. ಈ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಸಮಾಜ ಪರಿವರ್ತನ ಸಮುದಾಯ ಒತ್ತಾಯಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>