ಸಿಎಂಗೆ ಸಾಂತ್ವನ ಹೇಳಿದ ಖುಷ್ಬೂ

ಬೆಂಗಳೂರು: ಪುತ್ರನನ್ನು ಕಳೆದುಕೊಂಡು ದುಃಖದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಟಿ ಹಾಗೂ ಕಾಂಗ್ರೆಸ್ನ ವಕ್ತಾರೆ ಖುಷ್ಬೂ ಅವರು ಗುರುವಾರ ಸಾಂತ್ವನ ಹೇಳಿದರು.
ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಖುಷ್ಬೂ, ಸಿಎಂಗೆ ಸಮಾಧಾನ ಹೇಳಿದರು.
‘ಸಿಎಂ ಪುತ್ರ ರಾಕೇಶ್ ಅಕಾಲಿಕವಾಗಿ ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ. ಇದು ಅವರ ಕುಟುಂಬಕ್ಕೆ ತುಂಬಲಾರದ ನಷ್ಟ’ ಎಂದು ಖುಷ್ಬೂ ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.