<p>ಮೈಸೂರು: ‘ಯಡಿಯೂರಪ್ಪ ಅವರು ಜೀವ ಬೆದರಿಕೆ ಇದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ವಿಧಾನಸೌಧಕ್ಕೆ ಹೋದರೆ ಮನೆಗೆ ವಾಪಸ್ ಬರುವ ಭರವಸೆ ಇಲ್ಲ ಎಂದು ನೋವು ತೋಡಿಕೊಂಡಿದ್ದಾರೆ. ಅವರು ಬಯಸಿದರೆ ಕಾಂಗ್ರೆಸ್ ಸೇವಾದಳವನ್ನು ರಕ್ಷಣೆಗೆ ಕಳುಹಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ವ್ಯಂಗ್ಯವಾಡಿದರು.<br /> <br /> ‘ರಾಜ್ಯದ ಮುಖ್ಯಮಂತ್ರಿ ಅವರೇ ತಮಗೆ ರಕ್ಷಣೆ ಇಲ್ಲವೆಂದು ಅವಲತ್ತುಕೊಂಡರೆ ಇನ್ನು ಸಾಮಾನ್ಯ ಜನರ ಪಾಡೇನು? ಪೊಲೀಸ್ ಇಲಾಖೆ, ಗುಪ್ತಚರ ವಿಭಾಗ ಅವರ ಬಳಿಯೇ ಇದೆ. ಈ ರೀತಿ ಅಸಹಾಯಕತೆ ವ್ಯಕ್ತಪಡಿಸುವುದು ಅವರಿಗೆ ಶೋಭೆ ತರುವುದಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಒಂದು ನಿಮಿಷವೂ ಅವರು ಇರಕೂಡದು. ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.<br /> <br /> ‘ಮುಖ್ಯಮಂತ್ರಿ ಅವರಿಗೆ ರಕ್ಷಣೆ ಇಲ್ಲದ ಮೇಲೆ ಅಂತಹವರ ಕೈಯಲ್ಲಿ ರಾಜ್ಯ ನಡೆಸಲು ಆಗುವುದಿಲ್ಲ. ರಾಜ್ಯದ ಜನತೆಯ ರಕ್ಷಣೆ ಯಾರ ಹೊಣೆ? ರಾಜಧಾನಿಯಲ್ಲಿ ಐಟಿ-ಬಿಟಿಯಲ್ಲಿ ಉದ್ಯೋಗ ಮಾಡುತ್ತಿರುವ ಮಂದಿ ನಿತ್ಯ ಕೊಲೆ ಆಗುತ್ತಿದೆ. ಇವರನ್ನೆಲ್ಲ ರಕ್ಷಣೆ ಮಾಡುವವರು ಯಾರು?’ ಎಂದು ಕೇಳಿದರು.<br /> <br /> ‘ಬಿಜೆಪಿ ಅವರ ಬಳಿ ಆರ್ಎಸ್ಎಸ್ ದಂಡ ಇರಬಹುದು. ಆದರೆ ಕಾಂಗ್ರೆಸ್ ಸೇವಾದಳದಲ್ಲಿ ಲಾಠಿ ಇದೆ. ಬ್ರಿಟಿಷರ ಕಾಲದಿಂದಲೂ ಇದೇ ಲಾಠಿಯನ್ನು ಬಳಸುತ್ತಿದ್ದೇವೆ’ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಯಡಿಯೂರಪ್ಪ ಅವರು ಜೀವ ಬೆದರಿಕೆ ಇದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ವಿಧಾನಸೌಧಕ್ಕೆ ಹೋದರೆ ಮನೆಗೆ ವಾಪಸ್ ಬರುವ ಭರವಸೆ ಇಲ್ಲ ಎಂದು ನೋವು ತೋಡಿಕೊಂಡಿದ್ದಾರೆ. ಅವರು ಬಯಸಿದರೆ ಕಾಂಗ್ರೆಸ್ ಸೇವಾದಳವನ್ನು ರಕ್ಷಣೆಗೆ ಕಳುಹಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ವ್ಯಂಗ್ಯವಾಡಿದರು.<br /> <br /> ‘ರಾಜ್ಯದ ಮುಖ್ಯಮಂತ್ರಿ ಅವರೇ ತಮಗೆ ರಕ್ಷಣೆ ಇಲ್ಲವೆಂದು ಅವಲತ್ತುಕೊಂಡರೆ ಇನ್ನು ಸಾಮಾನ್ಯ ಜನರ ಪಾಡೇನು? ಪೊಲೀಸ್ ಇಲಾಖೆ, ಗುಪ್ತಚರ ವಿಭಾಗ ಅವರ ಬಳಿಯೇ ಇದೆ. ಈ ರೀತಿ ಅಸಹಾಯಕತೆ ವ್ಯಕ್ತಪಡಿಸುವುದು ಅವರಿಗೆ ಶೋಭೆ ತರುವುದಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಒಂದು ನಿಮಿಷವೂ ಅವರು ಇರಕೂಡದು. ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.<br /> <br /> ‘ಮುಖ್ಯಮಂತ್ರಿ ಅವರಿಗೆ ರಕ್ಷಣೆ ಇಲ್ಲದ ಮೇಲೆ ಅಂತಹವರ ಕೈಯಲ್ಲಿ ರಾಜ್ಯ ನಡೆಸಲು ಆಗುವುದಿಲ್ಲ. ರಾಜ್ಯದ ಜನತೆಯ ರಕ್ಷಣೆ ಯಾರ ಹೊಣೆ? ರಾಜಧಾನಿಯಲ್ಲಿ ಐಟಿ-ಬಿಟಿಯಲ್ಲಿ ಉದ್ಯೋಗ ಮಾಡುತ್ತಿರುವ ಮಂದಿ ನಿತ್ಯ ಕೊಲೆ ಆಗುತ್ತಿದೆ. ಇವರನ್ನೆಲ್ಲ ರಕ್ಷಣೆ ಮಾಡುವವರು ಯಾರು?’ ಎಂದು ಕೇಳಿದರು.<br /> <br /> ‘ಬಿಜೆಪಿ ಅವರ ಬಳಿ ಆರ್ಎಸ್ಎಸ್ ದಂಡ ಇರಬಹುದು. ಆದರೆ ಕಾಂಗ್ರೆಸ್ ಸೇವಾದಳದಲ್ಲಿ ಲಾಠಿ ಇದೆ. ಬ್ರಿಟಿಷರ ಕಾಲದಿಂದಲೂ ಇದೇ ಲಾಠಿಯನ್ನು ಬಳಸುತ್ತಿದ್ದೇವೆ’ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>