<p><strong>ದಾವಣಗೆರೆ: </strong>ಮದ್ಯಪಾನ ನಿಷೇಧದ ಬದಲಿಗೆ ಅಗ್ಗದ ಮದ್ಯ ತಯಾರಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರಕ್ಕಿಂತ ಜನಪ್ರಿಯ ಯೋಜನೆಗಳಿಗೆ ಒತ್ತು ನೀಡಿದ್ದಾರೆ. ಅವರಿಗೆ ಸಮಾಜದ ಆರೋಗ್ಯ ಕಾಪಾಡುವ ಚಿಂತೆ ಇಲ್ಲ ಎಂದು ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಟೀಕಿಸಿದರು.<br /> <br /> ಕರುಣ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಶುಕ್ರವಾರ ನಗರದಲ್ಲಿ `ಗುಟ್ಕಾ ನಿಷೇಧ ಸ್ವಾಗತಾರ್ಹ. ಆದರೆ, ಮದ್ಯಪಾನ ಅಗತ್ಯವೇ? ಅನಿವಾರ್ಯವೇ?' ವಿಷಯ ಕುರಿತು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಸರ್ಕಾರ, ಸಂಪೂರ್ಣ ಪಾನ ನಿಷೇಧ ಮಾಡುವ ಮನೋಸ್ಥೈರ್ಯವನ್ನು ಸರ್ಕಾರ ತೋರಬೇಕು. ಕುಡಿತದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ ಎಂದೇನಿಲ್ಲ. ಆದರೂ ಅವರು, ಜನಪ್ರಿಯ ಕಾರ್ಯಕ್ರಮಗಳ ಹಿಂದೆ ಬಿದ್ದಿದ್ದಾರೆ. ಕುಡಿತ ಎಂತಹ ಸಾತ್ವಿಕನನ್ನೂ ದುಷ್ಟನನ್ನಾಗಿ ಮಾಡುತ್ತದೆ. ಈ ಹಿನ್ನೆಲೆಯಲ್ಲಿ, ಕ್ರಮ ಕೈಗೊಳ್ಳಬೇಕು ಎಂದರು.<br /> <br /> `ಮದ್ಯಪಾನ ನಿಷೇಧಕ್ಕೆ ಒತ್ತಾಯಿಸಿ, ಅಗ್ಗದ ಮದ್ಯ ನೀಡುವುದನ್ನು ವಿರೋಧಿಸಿ ಮೊದಲು ತಮ್ಮ ತಮ್ಮ ಕ್ಷೇತ್ರದ ಶಾಸಕರಿಗೆ ದಿಗ್ಬಂಧನ ಹಾಕಬೇಕು. ಸರ್ಕಾರದ ವಿರುದ್ಧ ದನಿ ಎತ್ತುವಂತೆ ಜನಪ್ರತಿನಿಧಿಗಳನ್ನು ಆಗ್ರಹಿಸಬೇಕು.</p>.<p>ನಾವು ನಮ್ಮ ಕ್ಷೇತ್ರದ ಪ್ರತಿನಿಧಿ ಸಮಾಜ ಕಲ್ಯಾಣ ಸಚಿವರಾಗಿರುವ ಎಚ್.ಆಂಜನೇಯ ಅವರಿಗೆ ಎಚ್ಚರಿಕೆ ಕೊಡುತ್ತೇವೆ. ಭಾಷಣಕ್ಕಿಂತ ವಿಧಾನಸೌಧದಲ್ಲಿ ಹೋರಾಟ ಮಾಡಬೇಕು' ಎಂದು ವೇದಿಕೆಯಲ್ಲಿದ್ದ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ ಅವರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಮದ್ಯಪಾನ ನಿಷೇಧದ ಬದಲಿಗೆ ಅಗ್ಗದ ಮದ್ಯ ತಯಾರಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರಕ್ಕಿಂತ ಜನಪ್ರಿಯ ಯೋಜನೆಗಳಿಗೆ ಒತ್ತು ನೀಡಿದ್ದಾರೆ. ಅವರಿಗೆ ಸಮಾಜದ ಆರೋಗ್ಯ ಕಾಪಾಡುವ ಚಿಂತೆ ಇಲ್ಲ ಎಂದು ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಟೀಕಿಸಿದರು.<br /> <br /> ಕರುಣ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಶುಕ್ರವಾರ ನಗರದಲ್ಲಿ `ಗುಟ್ಕಾ ನಿಷೇಧ ಸ್ವಾಗತಾರ್ಹ. ಆದರೆ, ಮದ್ಯಪಾನ ಅಗತ್ಯವೇ? ಅನಿವಾರ್ಯವೇ?' ವಿಷಯ ಕುರಿತು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಸರ್ಕಾರ, ಸಂಪೂರ್ಣ ಪಾನ ನಿಷೇಧ ಮಾಡುವ ಮನೋಸ್ಥೈರ್ಯವನ್ನು ಸರ್ಕಾರ ತೋರಬೇಕು. ಕುಡಿತದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ ಎಂದೇನಿಲ್ಲ. ಆದರೂ ಅವರು, ಜನಪ್ರಿಯ ಕಾರ್ಯಕ್ರಮಗಳ ಹಿಂದೆ ಬಿದ್ದಿದ್ದಾರೆ. ಕುಡಿತ ಎಂತಹ ಸಾತ್ವಿಕನನ್ನೂ ದುಷ್ಟನನ್ನಾಗಿ ಮಾಡುತ್ತದೆ. ಈ ಹಿನ್ನೆಲೆಯಲ್ಲಿ, ಕ್ರಮ ಕೈಗೊಳ್ಳಬೇಕು ಎಂದರು.<br /> <br /> `ಮದ್ಯಪಾನ ನಿಷೇಧಕ್ಕೆ ಒತ್ತಾಯಿಸಿ, ಅಗ್ಗದ ಮದ್ಯ ನೀಡುವುದನ್ನು ವಿರೋಧಿಸಿ ಮೊದಲು ತಮ್ಮ ತಮ್ಮ ಕ್ಷೇತ್ರದ ಶಾಸಕರಿಗೆ ದಿಗ್ಬಂಧನ ಹಾಕಬೇಕು. ಸರ್ಕಾರದ ವಿರುದ್ಧ ದನಿ ಎತ್ತುವಂತೆ ಜನಪ್ರತಿನಿಧಿಗಳನ್ನು ಆಗ್ರಹಿಸಬೇಕು.</p>.<p>ನಾವು ನಮ್ಮ ಕ್ಷೇತ್ರದ ಪ್ರತಿನಿಧಿ ಸಮಾಜ ಕಲ್ಯಾಣ ಸಚಿವರಾಗಿರುವ ಎಚ್.ಆಂಜನೇಯ ಅವರಿಗೆ ಎಚ್ಚರಿಕೆ ಕೊಡುತ್ತೇವೆ. ಭಾಷಣಕ್ಕಿಂತ ವಿಧಾನಸೌಧದಲ್ಲಿ ಹೋರಾಟ ಮಾಡಬೇಕು' ಎಂದು ವೇದಿಕೆಯಲ್ಲಿದ್ದ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ ಅವರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>