<p><strong>ರಾಯಚೂರು:</strong> ಕಾರ್ಮಿಕರ ಬೇಡಿಕೆಗಳನ್ನು ರಾಜ್ಯ ಮಟ್ಟದಲ್ಲಿ ಈಡೇರಿಸಬೇಕು ಎಂದು ಒತ್ತಾಯಿಸಿ ಸಿ.ಐ.ಟಿ.ಯು. ಸಂಘಟನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.<br /> <br /> ರಾಜ್ಯ ಸರ್ಕಾರವು ಕಾರ್ಮಿಕರನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದೆ. ಶ್ರೀಮಂತ ಬಂಡವಾಳಗಾರರ ಸೇವೆಯಲ್ಲಿ ತೊಡಗಿದೆ. ಸರ್ಕಾರವು ತನ್ನ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. <br /> <br /> ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಾಮಾನ್ಯ ಕನಿಷ್ಠ ಕೂಲಿ ಕಾರ್ಮಿಕರಿಗೆ ರೂ. 10 ಸಾವಿರವನ್ನು ಕೂಲಿಯಾಗಿ ಕೊಡಬೇಕು. ತಜ್ಞರ ಸಮಿತಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಬೇಕು.ಅಲ್ಲದೆ ರಾಜ್ಯ ಸರ್ಕಾರ ಅದನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.<br /> <br /> ಎಲ್ಲ ಗುತ್ತಿಗೆ, ದಿನಗೂಲಿ ನೌಕರರಿಗೆ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು, ಸುಪ್ರೀಂ ಕೋರ್ಟ್ ಆದೇಶದಂತೆ ಸರ್ಕಾರಿ ಇಲಾಖೆ ಹಾಗೂ ಸಂಸ್ಥೆಗಳಲ್ಲಿ 10 ವರ್ಷ ಸೇವೆ ಸಲ್ಲಿಸಿದ ನೌಕರರನ್ನು ಕಾಯಂ ಮಾಡಬೇಕು, ಹೋರಾಟ ನಿರತರ ಮೇಲಿನ ಪ್ರಕರಣಗಳನ್ನು ವಾಪಸು ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.<br /> <br /> ರಾಜ್ಯ ಸರ್ಕಾರ ಈಗಾಗಲೇ ಪ್ರಕಟಿಸಿದ ಕನಿಷ್ಠ ವೇತನವನ್ನು ಗ್ರಾಮ ಪಂಚಾಯಿತಿ ನೌಕರರಿಗೆ ನೀಡಬೇಕು, ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಬೇಕು, ಕಾರ್ಯದರ್ಶಿ ಹುದ್ದೆಗಳ ಬಡ್ತಿಯನ್ನು ಕೂಡಲೇ ಜಾರಿಗೊಳಿಸಬೇಕು, ಎಲ್ಲ ಕಾರ್ಮಿಕರಿಗೆ ನಿವೇಶನ ಹಾಗೂ ಪಡಿತರ ಚೀಟಿ ವಿತರಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.<br /> <br /> ಮುಖಂಡರಾದ ಎಚ್.ಪದ್ಮಾ, ಶೇಕ್ಷಾಖಾದ್ರಿ, ವೈ.ಈರಣ್ಣ, ವೀರಭದ್ರ, ಪಿ.ಗಿರಿಯಪ್ಪ, ಜಿಲಾನಿ, ಚೆನ್ನಬಸಯ್ಯ, ಶಂಶುದ್ದೀನ್, ಡಿ.ಎಸ್. ಶರಣಬಸವ, ಕೆ.ಜಿ. ವೀರೇಶ, ಸಿದ್ಧಲಿಂಗಯ್ಯ, ವರಲಕ್ಷ್ಮಿ, ಪಾರ್ವತಿ, ಮರಿಯಮ್ಮ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕಾರ್ಮಿಕರ ಬೇಡಿಕೆಗಳನ್ನು ರಾಜ್ಯ ಮಟ್ಟದಲ್ಲಿ ಈಡೇರಿಸಬೇಕು ಎಂದು ಒತ್ತಾಯಿಸಿ ಸಿ.ಐ.ಟಿ.ಯು. ಸಂಘಟನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.<br /> <br /> ರಾಜ್ಯ ಸರ್ಕಾರವು ಕಾರ್ಮಿಕರನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದೆ. ಶ್ರೀಮಂತ ಬಂಡವಾಳಗಾರರ ಸೇವೆಯಲ್ಲಿ ತೊಡಗಿದೆ. ಸರ್ಕಾರವು ತನ್ನ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. <br /> <br /> ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಾಮಾನ್ಯ ಕನಿಷ್ಠ ಕೂಲಿ ಕಾರ್ಮಿಕರಿಗೆ ರೂ. 10 ಸಾವಿರವನ್ನು ಕೂಲಿಯಾಗಿ ಕೊಡಬೇಕು. ತಜ್ಞರ ಸಮಿತಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಬೇಕು.ಅಲ್ಲದೆ ರಾಜ್ಯ ಸರ್ಕಾರ ಅದನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.<br /> <br /> ಎಲ್ಲ ಗುತ್ತಿಗೆ, ದಿನಗೂಲಿ ನೌಕರರಿಗೆ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು, ಸುಪ್ರೀಂ ಕೋರ್ಟ್ ಆದೇಶದಂತೆ ಸರ್ಕಾರಿ ಇಲಾಖೆ ಹಾಗೂ ಸಂಸ್ಥೆಗಳಲ್ಲಿ 10 ವರ್ಷ ಸೇವೆ ಸಲ್ಲಿಸಿದ ನೌಕರರನ್ನು ಕಾಯಂ ಮಾಡಬೇಕು, ಹೋರಾಟ ನಿರತರ ಮೇಲಿನ ಪ್ರಕರಣಗಳನ್ನು ವಾಪಸು ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.<br /> <br /> ರಾಜ್ಯ ಸರ್ಕಾರ ಈಗಾಗಲೇ ಪ್ರಕಟಿಸಿದ ಕನಿಷ್ಠ ವೇತನವನ್ನು ಗ್ರಾಮ ಪಂಚಾಯಿತಿ ನೌಕರರಿಗೆ ನೀಡಬೇಕು, ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಬೇಕು, ಕಾರ್ಯದರ್ಶಿ ಹುದ್ದೆಗಳ ಬಡ್ತಿಯನ್ನು ಕೂಡಲೇ ಜಾರಿಗೊಳಿಸಬೇಕು, ಎಲ್ಲ ಕಾರ್ಮಿಕರಿಗೆ ನಿವೇಶನ ಹಾಗೂ ಪಡಿತರ ಚೀಟಿ ವಿತರಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.<br /> <br /> ಮುಖಂಡರಾದ ಎಚ್.ಪದ್ಮಾ, ಶೇಕ್ಷಾಖಾದ್ರಿ, ವೈ.ಈರಣ್ಣ, ವೀರಭದ್ರ, ಪಿ.ಗಿರಿಯಪ್ಪ, ಜಿಲಾನಿ, ಚೆನ್ನಬಸಯ್ಯ, ಶಂಶುದ್ದೀನ್, ಡಿ.ಎಸ್. ಶರಣಬಸವ, ಕೆ.ಜಿ. ವೀರೇಶ, ಸಿದ್ಧಲಿಂಗಯ್ಯ, ವರಲಕ್ಷ್ಮಿ, ಪಾರ್ವತಿ, ಮರಿಯಮ್ಮ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>