<p><strong>ಬೆಂಗಳೂರು:</strong> ಮಾಜಿ ಸಚಿವ ಎಚ್. ಹಾಲಪ್ಪನವರ ವಿರುದ್ಧ ಇರುವ ಅತ್ಯಾಚಾರ ಪ್ರಕರಣದ ಆರೋಪ ಪಟ್ಟಿಯನ್ನು ಸಂಬಂಧಿತ ಕೋರ್ಟ್ಗೆ ಇದೇ 31ರ ಒಳಗೆ ಸಲ್ಲಿಸುವಂತೆ ಹೈಕೋರ್ಟ್ ಸಿಐಡಿ ಪೊಲೀಸರಿಗೆ ಮಂಗಳವಾರ ನಿರ್ದೇಶಿಸಿದೆ.<br /> <br /> ಈ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡುವ ಸಂಬಂಧ ರಾಜ್ಯ ಮಾನವ ಹಕ್ಕುಗಳ ಆಯೋಗ ಹೊರಡಿಸಿರುವ ಆದೇಶದ ರದ್ದತಿಗೆ ಕೋರಿ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.<br /> <br /> ‘ಇದು ಅಪರೂಪದಲ್ಲಿ ಅಪರೂಪದ ಪ್ರಕರಣವೇನಲ್ಲ. ಸಿಬಿಐಗೆ ಇದನ್ನು ವಹಿಸಿಕೊಡುವಷ್ಟು ಗಂಭೀರ ಪ್ರಕರಣವಲ್ಲ’ ಎಂದು ಪೀಠ ಅಭಿಪ್ರಾಯ ಪಟ್ಟಿತು.<br /> <br /> ಚಂದ್ರಾವತಿ, ಹಾಲಪ್ಪನವರ ಸ್ನೇಹಿತ ವೆಂಕಟೇಶ ಮೂರ್ತಿ ಅವರ ಪತ್ನಿಯಾಗಿದ್ದು, ತಮ್ಮ ಮೇಲೆ ಹಾಲಪ್ಪ ಅತ್ಯಾಚಾರ ಎಸಗಿರುವುದಾಗಿ ಅವರು ಆಯೋಗದ ಮುಂದೆ ದೂರಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಿ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಸ್.ಆರ್.ನಾಯಕ್ 2010ರ ಮೇ 21ರಂದು ಆದೇಶಿಸಿದ್ದರು. <br /> <br /> ಈ ಆದೇಶದ ರದ್ದತಿಗೆ ಸರ್ಕಾರ ಕೋರಿದೆ. ಸಿವಿಲ್ ಪ್ರಕ್ರಿಯಾ ಸಂಹಿತೆಯ ಅಡಿ ಆಯೋಗಕ್ಕೆ ಸಿವಿಲ್ ಕೋರ್ಟ್ನ ಅಧಿಕಾರ ನೀಡಲಾಗಿದೆ ನಿಜ. ಆದರೆ ಈ ಅಧಿಕಾರ ಬಳಸುವಾಗ ಆಯೋಗವು ಆರೋಪಿಗೆ ಸಮನ್ಸ್ ಜಾರಿಗೆ ಆದೇಶಿಸಿ ಅವರ ಹೇಳಿಕೆ ಪಡೆಯಬೇಕು. <br /> <br /> ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಬೇಕು. ಆದರೆ ಇದಾವುದನ್ನೂ ಪರಿಗಣನೆಗೆ ತೆಗೆದುಕೊಳ್ಳದೇ ಆಯೋಗ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೇ ಆಯೋಗಕ್ಕೆ ಸಿಬಿಐ ತನಿಖೆಗೆ ವಹಿಸಲು ಶಿಫಾರಸು ಮಾಡಬಹುದೇ ವಿನಾ ನಿರ್ದೇಶನ ನೀಡುವ ಹಕ್ಕು ಇಲ್ಲ ಎಂದು ಅಡ್ವೊಕೇಟ್ ಜನರಲ್ ಅಶೋಕ ಹಾರ್ನಹಳ್ಳಿ ವಾದಿಸಿದರು.<br /> <br /> ತನಿಖೆಯ ನೇತೃತ್ವ ವಹಿಸಿರುವ ಡಿಐಜಿ (ಸಿಐಡಿ) ಚರಣ ರೆಡ್ಡಿ ಅವರು ಮಂಗಳವಾರ ವಿಚಾರಣೆ ವೇಳೆ ಹಾಜರು ಇದ್ದರು. ತನಿಖೆಯು ಅಂತಿಮ ಹಂತದಲ್ಲಿದೆ. ಇನ್ನೆರಡು ವಾರಗಳಲ್ಲಿ ಆರೋಪ ಪಟ್ಟಿಯನ್ನೂ ತಯಾರು ಮಾಡಲಾಗುವುದು ಎಂದರು. ಈ ಹಿನ್ನೆಲೆಯಲ್ಲಿ ತಿಂಗಳಾಂತ್ಯದ ಗಡುವನ್ನು ಪೀಠ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಜಿ ಸಚಿವ ಎಚ್. ಹಾಲಪ್ಪನವರ ವಿರುದ್ಧ ಇರುವ ಅತ್ಯಾಚಾರ ಪ್ರಕರಣದ ಆರೋಪ ಪಟ್ಟಿಯನ್ನು ಸಂಬಂಧಿತ ಕೋರ್ಟ್ಗೆ ಇದೇ 31ರ ಒಳಗೆ ಸಲ್ಲಿಸುವಂತೆ ಹೈಕೋರ್ಟ್ ಸಿಐಡಿ ಪೊಲೀಸರಿಗೆ ಮಂಗಳವಾರ ನಿರ್ದೇಶಿಸಿದೆ.<br /> <br /> ಈ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡುವ ಸಂಬಂಧ ರಾಜ್ಯ ಮಾನವ ಹಕ್ಕುಗಳ ಆಯೋಗ ಹೊರಡಿಸಿರುವ ಆದೇಶದ ರದ್ದತಿಗೆ ಕೋರಿ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.<br /> <br /> ‘ಇದು ಅಪರೂಪದಲ್ಲಿ ಅಪರೂಪದ ಪ್ರಕರಣವೇನಲ್ಲ. ಸಿಬಿಐಗೆ ಇದನ್ನು ವಹಿಸಿಕೊಡುವಷ್ಟು ಗಂಭೀರ ಪ್ರಕರಣವಲ್ಲ’ ಎಂದು ಪೀಠ ಅಭಿಪ್ರಾಯ ಪಟ್ಟಿತು.<br /> <br /> ಚಂದ್ರಾವತಿ, ಹಾಲಪ್ಪನವರ ಸ್ನೇಹಿತ ವೆಂಕಟೇಶ ಮೂರ್ತಿ ಅವರ ಪತ್ನಿಯಾಗಿದ್ದು, ತಮ್ಮ ಮೇಲೆ ಹಾಲಪ್ಪ ಅತ್ಯಾಚಾರ ಎಸಗಿರುವುದಾಗಿ ಅವರು ಆಯೋಗದ ಮುಂದೆ ದೂರಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಿ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಸ್.ಆರ್.ನಾಯಕ್ 2010ರ ಮೇ 21ರಂದು ಆದೇಶಿಸಿದ್ದರು. <br /> <br /> ಈ ಆದೇಶದ ರದ್ದತಿಗೆ ಸರ್ಕಾರ ಕೋರಿದೆ. ಸಿವಿಲ್ ಪ್ರಕ್ರಿಯಾ ಸಂಹಿತೆಯ ಅಡಿ ಆಯೋಗಕ್ಕೆ ಸಿವಿಲ್ ಕೋರ್ಟ್ನ ಅಧಿಕಾರ ನೀಡಲಾಗಿದೆ ನಿಜ. ಆದರೆ ಈ ಅಧಿಕಾರ ಬಳಸುವಾಗ ಆಯೋಗವು ಆರೋಪಿಗೆ ಸಮನ್ಸ್ ಜಾರಿಗೆ ಆದೇಶಿಸಿ ಅವರ ಹೇಳಿಕೆ ಪಡೆಯಬೇಕು. <br /> <br /> ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಬೇಕು. ಆದರೆ ಇದಾವುದನ್ನೂ ಪರಿಗಣನೆಗೆ ತೆಗೆದುಕೊಳ್ಳದೇ ಆಯೋಗ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೇ ಆಯೋಗಕ್ಕೆ ಸಿಬಿಐ ತನಿಖೆಗೆ ವಹಿಸಲು ಶಿಫಾರಸು ಮಾಡಬಹುದೇ ವಿನಾ ನಿರ್ದೇಶನ ನೀಡುವ ಹಕ್ಕು ಇಲ್ಲ ಎಂದು ಅಡ್ವೊಕೇಟ್ ಜನರಲ್ ಅಶೋಕ ಹಾರ್ನಹಳ್ಳಿ ವಾದಿಸಿದರು.<br /> <br /> ತನಿಖೆಯ ನೇತೃತ್ವ ವಹಿಸಿರುವ ಡಿಐಜಿ (ಸಿಐಡಿ) ಚರಣ ರೆಡ್ಡಿ ಅವರು ಮಂಗಳವಾರ ವಿಚಾರಣೆ ವೇಳೆ ಹಾಜರು ಇದ್ದರು. ತನಿಖೆಯು ಅಂತಿಮ ಹಂತದಲ್ಲಿದೆ. ಇನ್ನೆರಡು ವಾರಗಳಲ್ಲಿ ಆರೋಪ ಪಟ್ಟಿಯನ್ನೂ ತಯಾರು ಮಾಡಲಾಗುವುದು ಎಂದರು. ಈ ಹಿನ್ನೆಲೆಯಲ್ಲಿ ತಿಂಗಳಾಂತ್ಯದ ಗಡುವನ್ನು ಪೀಠ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>