<p><strong>ಬೆಂಗಳೂರು: </strong>ಸಿಗರೇಟ್ ಪ್ಯಾಕ್ಗಳ ಮೇಲೆ ಶೇ 85ರಷ್ಟು ಚಿತ್ರಸಹಿತ ಎಚ್ಚರಿಕೆ ಸಂದೇಶ ಇರಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆ ಹೊರಡಿಸಿರುವ ಆದೇಶದಿಂದ ಹಿಂದೆ ಸರಿಯಬಾರದು ಎಂದು ರಾಜ್ಯ ಸರ್ಕಾರದ ತಂಬಾಕು ನಿಯಂತ್ರಣ ಉನ್ನತ ಮಟ್ಟದ ಸಮಿತಿ ಸದಸ್ಯ ಡಾ. ಯು.ಎಸ್. ವಿಶಾಲ್ ರಾವ್ ಒತ್ತಾಯಿಸಿದರು.<br /> <br /> ಈ ಸಂಬಂಧ ಕೇಂದ್ರ ಸರ್ಕಾರ 2014ರ ಅಕ್ಟೋಬರ್ 15ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ ಇತ್ತೀಚೆಗೆ ಸಂಸದೀಯ ಸಮಿತಿಯೊಂದು ಸಿಗರೇಟ್ ಪ್ಯಾಕ್ಗಳ ಎರಡೂ ಬದಿ ಶೇ.50ರಷ್ಟು ಎಚ್ಚರಿಕೆ ಸಂದೇಶ ಚಿತ್ರಸಹಿತ ಮುದ್ರಿಸಬಹುದು ಎಂದು ಹೇಳಿದೆ. ಈ ನಿರ್ಧಾರ ಸರಿಯಲ್ಲ ಎಂದು ಅವರು ಶನಿವಾರ ಭಾರತೀಯ ವಿದ್ಯಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ‘ಸಂಸದೀಯ ಸಮಿತಿ ಸಭೆಯಲ್ಲಿ ನಾನೂ ಪಾಲ್ಗೊಂಡು ಆರೋಗ್ಯ ಹಕ್ಕಿನ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದು ಹೇಳಿದ್ದೆ. ತಂಬಾಕು ಉತ್ಪನ್ನ ಕಂಪನಿಗಳು ಜಾಹೀರಾತು ಪ್ರಮಾಣ ಗಣನೀಯವಾಗಿ ಕಡಿಮೆ ಮಾಡಬೇಕು ಎಂದು ಸರ್ಕಾರಕ್ಕೆ ಹೇಳಿದ್ದೆ’ ಎಂದರು.<br /> <br /> ಲೋಕಸತ್ತಾ ಪಕ್ಷದ ಸದಸ್ಯ ಡಾ. ಭಾನುಪ್ರಕಾಶ್, ‘ಸಮಿತಿ ನೀಡಿರುವ ವರದಿ ತಂಬಾಕು ಉತ್ಪನ್ನ ಕಂಪನಿಗಳೊಂದಿಗೆ ರಾಜಿ ಮಾಡಿಕೊಂಡಂತಿದೆ. ಇದು ಬಡ ವರ್ಗದ ಜನರ ಸಾವಿಗೆ ಸಬ್ಸಿಡಿ ನೀಡಿದಂತಿದೆ’ ಎಂದರು.<br /> <br /> ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ನ ಡಾ.ಉಪೇಂದ್ರ ಭೋಜಾನಿ, ‘ಬೀಡಿ ಉದ್ಯಮದ ದೊರೆ ಮತ್ತು ಸಂಸದ ಶ್ಯಾಂಚರಣ್ ಗುಪ್ತಾ ಅವರೇ ಸಂಸದೀಯ ಸಮಿತಿ ಸದಸ್ಯರಾಗಿರುವುದು ವಿವಾದಕ್ಕೆ ಎಡೆಮಾಡಿದೆ. ರಾಜಿ ಸೂತ್ರದ ಹಿಂದೆ ಉದ್ಯಮದ ಪ್ರಭಾವ ಇದ್ದೇ ಇರುತ್ತದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಿಗರೇಟ್ ಪ್ಯಾಕ್ಗಳ ಮೇಲೆ ಶೇ 85ರಷ್ಟು ಚಿತ್ರಸಹಿತ ಎಚ್ಚರಿಕೆ ಸಂದೇಶ ಇರಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆ ಹೊರಡಿಸಿರುವ ಆದೇಶದಿಂದ ಹಿಂದೆ ಸರಿಯಬಾರದು ಎಂದು ರಾಜ್ಯ ಸರ್ಕಾರದ ತಂಬಾಕು ನಿಯಂತ್ರಣ ಉನ್ನತ ಮಟ್ಟದ ಸಮಿತಿ ಸದಸ್ಯ ಡಾ. ಯು.ಎಸ್. ವಿಶಾಲ್ ರಾವ್ ಒತ್ತಾಯಿಸಿದರು.<br /> <br /> ಈ ಸಂಬಂಧ ಕೇಂದ್ರ ಸರ್ಕಾರ 2014ರ ಅಕ್ಟೋಬರ್ 15ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ ಇತ್ತೀಚೆಗೆ ಸಂಸದೀಯ ಸಮಿತಿಯೊಂದು ಸಿಗರೇಟ್ ಪ್ಯಾಕ್ಗಳ ಎರಡೂ ಬದಿ ಶೇ.50ರಷ್ಟು ಎಚ್ಚರಿಕೆ ಸಂದೇಶ ಚಿತ್ರಸಹಿತ ಮುದ್ರಿಸಬಹುದು ಎಂದು ಹೇಳಿದೆ. ಈ ನಿರ್ಧಾರ ಸರಿಯಲ್ಲ ಎಂದು ಅವರು ಶನಿವಾರ ಭಾರತೀಯ ವಿದ್ಯಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ‘ಸಂಸದೀಯ ಸಮಿತಿ ಸಭೆಯಲ್ಲಿ ನಾನೂ ಪಾಲ್ಗೊಂಡು ಆರೋಗ್ಯ ಹಕ್ಕಿನ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದು ಹೇಳಿದ್ದೆ. ತಂಬಾಕು ಉತ್ಪನ್ನ ಕಂಪನಿಗಳು ಜಾಹೀರಾತು ಪ್ರಮಾಣ ಗಣನೀಯವಾಗಿ ಕಡಿಮೆ ಮಾಡಬೇಕು ಎಂದು ಸರ್ಕಾರಕ್ಕೆ ಹೇಳಿದ್ದೆ’ ಎಂದರು.<br /> <br /> ಲೋಕಸತ್ತಾ ಪಕ್ಷದ ಸದಸ್ಯ ಡಾ. ಭಾನುಪ್ರಕಾಶ್, ‘ಸಮಿತಿ ನೀಡಿರುವ ವರದಿ ತಂಬಾಕು ಉತ್ಪನ್ನ ಕಂಪನಿಗಳೊಂದಿಗೆ ರಾಜಿ ಮಾಡಿಕೊಂಡಂತಿದೆ. ಇದು ಬಡ ವರ್ಗದ ಜನರ ಸಾವಿಗೆ ಸಬ್ಸಿಡಿ ನೀಡಿದಂತಿದೆ’ ಎಂದರು.<br /> <br /> ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ನ ಡಾ.ಉಪೇಂದ್ರ ಭೋಜಾನಿ, ‘ಬೀಡಿ ಉದ್ಯಮದ ದೊರೆ ಮತ್ತು ಸಂಸದ ಶ್ಯಾಂಚರಣ್ ಗುಪ್ತಾ ಅವರೇ ಸಂಸದೀಯ ಸಮಿತಿ ಸದಸ್ಯರಾಗಿರುವುದು ವಿವಾದಕ್ಕೆ ಎಡೆಮಾಡಿದೆ. ರಾಜಿ ಸೂತ್ರದ ಹಿಂದೆ ಉದ್ಯಮದ ಪ್ರಭಾವ ಇದ್ದೇ ಇರುತ್ತದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>