<p><strong>ಬೆಂಗಳೂರು: </strong>ನಗರದ ಮೇಖ್ರಿ ವೃತ್ತದಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವರೆಗೆ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಾಣದ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಹೆಬ್ಬಾಳ ಮೇಲ್ಸೇತುವೆಯಲ್ಲಿ ಮತ್ತೊಂದು ಪಥ (ಲೇನ್) ನಿರ್ಮಿಸಿ ವಿಸ್ತರಿಸಲು ನಿರ್ಧರಿಸಿದೆ. ಈ ವಿಸ್ತರಣೆ ಕಾಮಗಾರಿ ಶೀಘ್ರದಲ್ಲಿ ಆರಂಭಗೊಳ್ಳಲಿದ್ದು, ಮುಂದಿನ ವರ್ಷದ ಜೂನ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಇದೆ.</p>.<p>`ಬೆಂಗಳೂರಿನಿಂದ ವಿಮಾನ ನಿಲ್ದಾಣದ ವರೆಗಿನ ಆರು ಪಥದ ರಸ್ತೆ ನಿರ್ಮಾಣದ ಮೊದಲ ಹಂತವೇ ಈ ವಿಸ್ತರಣೆ ಕಾಮಗಾರಿ~ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.</p>.<p>`ಮೇಲ್ಸೇತುವೆಯನ್ನು ಇನ್ನೂ 12 ಅಡಿ ವಿಸ್ತರಿಸಲು ಅವಕಾಶ ಇದೆ. ವಿಸ್ತರಣೆಯಿಂದ ಸಂಚಾರ ದಟ್ಟಣೆ ಕಡಿಮೆ ಆಗಲಿದೆ. ನಿರ್ಮಾಣ-ಮಾಲೀಕತ್ವ-ನಿರ್ವಹಣೆ ಹಾಗೂ ವರ್ಗಾವಣೆ (ಬಿಒಒಟಿ) ಆಧಾರದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಆದರೆ, ಜನರಿಗೆ ಇದರಿಂದ ಹೊರೆ ಬೀಳುವುದಿಲ್ಲ. ವಿಮಾನ ನಿಲ್ದಾಣದ ಸಮೀಪ ಟೋಲ್ ಗೇಟ್ ನಿರ್ಮಿಸಲಾಗುವುದು. ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಂದ ಶುಲ್ಕ ಸಂಗ್ರಹಿಸಲು ಉದ್ದೇಶಿಸಲಾಗಿದೆ~ ಎಂದು ಅವರು ವಿವರಿಸಿದರು.</p>.<p>ಈ ವಿಸ್ತರಣೆ ಕಾಮಗಾರಿಯ ವೆಚ್ಚದ ಬಗ್ಗೆ ವಿವರ ನೀಡದ ಅವರು, `ಮೇಖ್ರಿ ವೃತ್ತದಿಂದ ವಿಮಾನ ನಿಲ್ದಾಣದ ವರೆಗಿನ ಕಾಮಗಾರಿಯ ವೆಚ್ಚ 700 ಕೋಟಿ ರೂಪಾಯಿಗಳು ಆಗಬಹುದು ಎಂದು ಅಂದಾಜಿಸಲಾಗಿದೆ~ ಎಂದರು.</p>.<p>ಈ ಕಾಮಗಾರಿಯ ಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ. `ಯಾವುದೇ ರಸ್ತೆ ವಿಸ್ತರಣೆ ಮಾಡುವುದರಿಂದ ಹೆಚ್ಚುವರಿ ಸಾಮರ್ಥ್ಯ ದೊರಕಲಿದೆ. ಈ ರಸ್ತೆಯಲ್ಲಿ ಈಗ ವಾಹನಗಳ ಪ್ರಮಾಣ ಗಣನೀಯವಾಗಿ ಹೆಚ್ಚಾಗಿ ಒತ್ತಡ ಉಂಟಾಗಿದೆ. ಮೇಲ್ಸೇತುವೆ ವಿಸ್ತರಣೆ ಕಾಮಗಾರಿಯಿಂದ ಸಂಚಾರ ದಟ್ಟಣೆ ಪ್ರಮಾಣ ಕಡಿಮೆ ಆಗಲಿದೆ~ ಎಂದು ಸಂಚಾರ ವಿಭಾಗದ ಹೆಚ್ಚುವರಿ ಕಮಿಷನರ್ ಎಂ.ಎ. ಸಲೀಮ್ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಮೇಖ್ರಿ ವೃತ್ತದಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವರೆಗೆ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಾಣದ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಹೆಬ್ಬಾಳ ಮೇಲ್ಸೇತುವೆಯಲ್ಲಿ ಮತ್ತೊಂದು ಪಥ (ಲೇನ್) ನಿರ್ಮಿಸಿ ವಿಸ್ತರಿಸಲು ನಿರ್ಧರಿಸಿದೆ. ಈ ವಿಸ್ತರಣೆ ಕಾಮಗಾರಿ ಶೀಘ್ರದಲ್ಲಿ ಆರಂಭಗೊಳ್ಳಲಿದ್ದು, ಮುಂದಿನ ವರ್ಷದ ಜೂನ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಇದೆ.</p>.<p>`ಬೆಂಗಳೂರಿನಿಂದ ವಿಮಾನ ನಿಲ್ದಾಣದ ವರೆಗಿನ ಆರು ಪಥದ ರಸ್ತೆ ನಿರ್ಮಾಣದ ಮೊದಲ ಹಂತವೇ ಈ ವಿಸ್ತರಣೆ ಕಾಮಗಾರಿ~ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.</p>.<p>`ಮೇಲ್ಸೇತುವೆಯನ್ನು ಇನ್ನೂ 12 ಅಡಿ ವಿಸ್ತರಿಸಲು ಅವಕಾಶ ಇದೆ. ವಿಸ್ತರಣೆಯಿಂದ ಸಂಚಾರ ದಟ್ಟಣೆ ಕಡಿಮೆ ಆಗಲಿದೆ. ನಿರ್ಮಾಣ-ಮಾಲೀಕತ್ವ-ನಿರ್ವಹಣೆ ಹಾಗೂ ವರ್ಗಾವಣೆ (ಬಿಒಒಟಿ) ಆಧಾರದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಆದರೆ, ಜನರಿಗೆ ಇದರಿಂದ ಹೊರೆ ಬೀಳುವುದಿಲ್ಲ. ವಿಮಾನ ನಿಲ್ದಾಣದ ಸಮೀಪ ಟೋಲ್ ಗೇಟ್ ನಿರ್ಮಿಸಲಾಗುವುದು. ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಂದ ಶುಲ್ಕ ಸಂಗ್ರಹಿಸಲು ಉದ್ದೇಶಿಸಲಾಗಿದೆ~ ಎಂದು ಅವರು ವಿವರಿಸಿದರು.</p>.<p>ಈ ವಿಸ್ತರಣೆ ಕಾಮಗಾರಿಯ ವೆಚ್ಚದ ಬಗ್ಗೆ ವಿವರ ನೀಡದ ಅವರು, `ಮೇಖ್ರಿ ವೃತ್ತದಿಂದ ವಿಮಾನ ನಿಲ್ದಾಣದ ವರೆಗಿನ ಕಾಮಗಾರಿಯ ವೆಚ್ಚ 700 ಕೋಟಿ ರೂಪಾಯಿಗಳು ಆಗಬಹುದು ಎಂದು ಅಂದಾಜಿಸಲಾಗಿದೆ~ ಎಂದರು.</p>.<p>ಈ ಕಾಮಗಾರಿಯ ಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ. `ಯಾವುದೇ ರಸ್ತೆ ವಿಸ್ತರಣೆ ಮಾಡುವುದರಿಂದ ಹೆಚ್ಚುವರಿ ಸಾಮರ್ಥ್ಯ ದೊರಕಲಿದೆ. ಈ ರಸ್ತೆಯಲ್ಲಿ ಈಗ ವಾಹನಗಳ ಪ್ರಮಾಣ ಗಣನೀಯವಾಗಿ ಹೆಚ್ಚಾಗಿ ಒತ್ತಡ ಉಂಟಾಗಿದೆ. ಮೇಲ್ಸೇತುವೆ ವಿಸ್ತರಣೆ ಕಾಮಗಾರಿಯಿಂದ ಸಂಚಾರ ದಟ್ಟಣೆ ಪ್ರಮಾಣ ಕಡಿಮೆ ಆಗಲಿದೆ~ ಎಂದು ಸಂಚಾರ ವಿಭಾಗದ ಹೆಚ್ಚುವರಿ ಕಮಿಷನರ್ ಎಂ.ಎ. ಸಲೀಮ್ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>