<p><strong>ಬೆಂಗಳೂರು: </strong>ಗೃಹ ಮಂಡಳಿಯಿಂದ ಅಕ್ರಮವಾಗಿ ನಿವೇಶನ ಪಡೆದಿರುವ ಪ್ರಕರಣದಲ್ಲಿ ಶಾಸಕ ಸಿ.ಟಿ.ರವಿ ಅವರನ್ನು ಆರೋಪ ಮುಕ್ತಗೊಳಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ದೂರುದಾರ ಆರ್.ದೇವಿಪ್ರಸಾದ್ ಶನಿವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.<br /> <br /> `ಲೋಕಾಯುಕ್ತ ಪೊಲೀಸರ ತೀರ್ಮಾನ ಸರಿಯಾಗಿಲ್ಲ. ಪತ್ನಿಯನ್ನು ಆರೋಪಿ ಎಂದು ಗುರುತಿಸಿ, ಪತಿಯನ್ನು ದೋಷಮುಕ್ತಗೊಳಿಸಲಾಗಿದೆ. ಈ ಕ್ರಮವನ್ನು ಪ್ರಶ್ನಿಸಿ ಶೀಘ್ರದಲ್ಲೇ ಆಕ್ಷೇಪಣೆ ಸಲ್ಲಿಸಲಾಗುವುದು~ ಎಂದು ವಿಚಾರಣೆ ವೇಳೆ ದೇವಿಪ್ರಸಾದ್ ಪ್ರಮಾಣ ಪತ್ರ ಸಲ್ಲಿಸಿದರು.<br /> <br /> ಪ್ರಕರಣದ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ಅಬ್ದುಲ್ ಅಹದ್ ಅವರನ್ನು ಈ ಕುರಿತು ಪ್ರಶ್ನಿಸಿದ ನ್ಯಾಯಾಧೀಶರು, `ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಗಮನಕ್ಕೆ ತಂದ ಬಳಿಕವೇ ಮೊದಲನೇ ಆರೋಪಿಯನ್ನು ಆರೋಪ ಮುಕ್ತಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆಯೇ~ ಎಂದು ಕೇಳಿದರು.<br /> <br /> `ಲೋಕಾಯುಕ್ತದ ಎಸ್ಪಿಯವರ ಮೇಲ್ವಿಚಾರಣೆ ಯಲ್ಲಿ ತನಿಖೆ ನಡೆದಿದೆ. ಅವರ ಪತ್ರದ ಆಧಾರದಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ~ ಎಂದು ತಿಳಿಸಿದರು. ಬಳಿಕ ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಿ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಆದೇಶ ಹೊರಡಿಸಿದರು.<br /> <br /> <strong>ವಿವರಣೆ ನೀಡಲು ಸೂಚನೆ: </strong>ತನಿಖೆಯ ಸಂದರ್ಭದಲ್ಲಿನ ಅಗತ್ಯ ಆಧರಿಸಿ ಆರೋಪಿಗಳನ್ನು ಬಂಧಿಸಲು ಪೊಲೀಸರೇ ನಿರ್ಧಾರ ಕೈಗೊಂಡ ಪ್ರಕರಣಗಳ ವಿವರ ಒದಗಿಸುವಂತೆ ವಿಶೇಷ ನ್ಯಾಯಾಲಯ ಲೋಕಾಯುಕ್ತದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಸೂಚಿಸಿದೆ.<br /> <br /> ಭೂಕಬಳಿಕೆ ಆರೋಪ ಎದುರಿಸುತ್ತಿರುವ ಸಿರಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸೂಚನೆ ನೀಡಿತು. ತನಿಖೆಯ ಅವಧಿಯಲ್ಲಿನ ಅಗತ್ಯಕ್ಕೆ ತಕ್ಕಂತೆ ಬಂಧನದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಲೋಕಾಯುಕ್ತ ಪೊಲೀಸರ ವಾದದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ನಿರ್ದೇಶನ ನೀಡಿದೆ. ಅರ್ಜಿಯ ವಿಚಾರಣೆಯಲ್ಲಿ ಏಪ್ರಿಲ್ 19ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗೃಹ ಮಂಡಳಿಯಿಂದ ಅಕ್ರಮವಾಗಿ ನಿವೇಶನ ಪಡೆದಿರುವ ಪ್ರಕರಣದಲ್ಲಿ ಶಾಸಕ ಸಿ.ಟಿ.ರವಿ ಅವರನ್ನು ಆರೋಪ ಮುಕ್ತಗೊಳಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ದೂರುದಾರ ಆರ್.ದೇವಿಪ್ರಸಾದ್ ಶನಿವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.<br /> <br /> `ಲೋಕಾಯುಕ್ತ ಪೊಲೀಸರ ತೀರ್ಮಾನ ಸರಿಯಾಗಿಲ್ಲ. ಪತ್ನಿಯನ್ನು ಆರೋಪಿ ಎಂದು ಗುರುತಿಸಿ, ಪತಿಯನ್ನು ದೋಷಮುಕ್ತಗೊಳಿಸಲಾಗಿದೆ. ಈ ಕ್ರಮವನ್ನು ಪ್ರಶ್ನಿಸಿ ಶೀಘ್ರದಲ್ಲೇ ಆಕ್ಷೇಪಣೆ ಸಲ್ಲಿಸಲಾಗುವುದು~ ಎಂದು ವಿಚಾರಣೆ ವೇಳೆ ದೇವಿಪ್ರಸಾದ್ ಪ್ರಮಾಣ ಪತ್ರ ಸಲ್ಲಿಸಿದರು.<br /> <br /> ಪ್ರಕರಣದ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ಅಬ್ದುಲ್ ಅಹದ್ ಅವರನ್ನು ಈ ಕುರಿತು ಪ್ರಶ್ನಿಸಿದ ನ್ಯಾಯಾಧೀಶರು, `ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಗಮನಕ್ಕೆ ತಂದ ಬಳಿಕವೇ ಮೊದಲನೇ ಆರೋಪಿಯನ್ನು ಆರೋಪ ಮುಕ್ತಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆಯೇ~ ಎಂದು ಕೇಳಿದರು.<br /> <br /> `ಲೋಕಾಯುಕ್ತದ ಎಸ್ಪಿಯವರ ಮೇಲ್ವಿಚಾರಣೆ ಯಲ್ಲಿ ತನಿಖೆ ನಡೆದಿದೆ. ಅವರ ಪತ್ರದ ಆಧಾರದಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ~ ಎಂದು ತಿಳಿಸಿದರು. ಬಳಿಕ ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಿ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಆದೇಶ ಹೊರಡಿಸಿದರು.<br /> <br /> <strong>ವಿವರಣೆ ನೀಡಲು ಸೂಚನೆ: </strong>ತನಿಖೆಯ ಸಂದರ್ಭದಲ್ಲಿನ ಅಗತ್ಯ ಆಧರಿಸಿ ಆರೋಪಿಗಳನ್ನು ಬಂಧಿಸಲು ಪೊಲೀಸರೇ ನಿರ್ಧಾರ ಕೈಗೊಂಡ ಪ್ರಕರಣಗಳ ವಿವರ ಒದಗಿಸುವಂತೆ ವಿಶೇಷ ನ್ಯಾಯಾಲಯ ಲೋಕಾಯುಕ್ತದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಸೂಚಿಸಿದೆ.<br /> <br /> ಭೂಕಬಳಿಕೆ ಆರೋಪ ಎದುರಿಸುತ್ತಿರುವ ಸಿರಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸೂಚನೆ ನೀಡಿತು. ತನಿಖೆಯ ಅವಧಿಯಲ್ಲಿನ ಅಗತ್ಯಕ್ಕೆ ತಕ್ಕಂತೆ ಬಂಧನದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಲೋಕಾಯುಕ್ತ ಪೊಲೀಸರ ವಾದದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ನಿರ್ದೇಶನ ನೀಡಿದೆ. ಅರ್ಜಿಯ ವಿಚಾರಣೆಯಲ್ಲಿ ಏಪ್ರಿಲ್ 19ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>