<p><strong>ನವದೆಹಲಿ (ಪಿಟಿಐ): </strong>ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಸಂಬಂಧಿಸಿದ ಕಾಮಗಾರಿ ನಿರ್ವಹಿಸಿದ್ದ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಕಂಪೆನಿಗಳು ಸುಮಾರು 1 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವುದನ್ನು ಕೇಂದ್ರೀಯ ಜಾಗೃತ ಆಯೋಗ (ಸಿವಿಸಿ) ಪತ್ತೆ ಹಚ್ಚಿದೆ.<br /> <br /> ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ನಡೆದ ಹಗರಣದ ಬಗ್ಗೆ ತನಿಖೆ ನಡೆಸಲು ಸಿವಿಸಿ ನೇಮಿಸಿರುವ ತೆರಿಗೆ ಮತ್ತು ಇತರ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಯ ನೆರವಿನಿಂದ ಭಾರಿ ಮೊತ್ತದ ತೆರಿಗೆ ಉಳಿಸಿಕೊಂಡಿರುವುದನ್ನು ಪತ್ತೆ ಮಾಡಲಾಗಿದೆ ಎಂದು ಆಯೋಗದ ಆಯುಕ್ತ ಆರ್. ಶ್ರೀಕುಮಾರ್ ತಿಳಿಸಿದ್ದಾರೆ.<br /> `ಕ್ರೀಡಾಕೂಟದ ವಿವಿಧ ಕಾಮಗಾರಿಗೆ 37 ಇಲಾಖೆಗಳು 15,000 ಕೋಟಿ ರೂಪಾಯಿ ವೆಚ್ಚ ಮಾಡಿವೆ. ಇದರಲ್ಲಿ 9,000 ಕೋಟಿ ರೂಪಾಯಿ ಸಾರ್ವಜನಿಕ ಕ್ಷೇತ್ರಕ್ಕೆ ಸಂಬಂಧಿಸಿದ್ದಾಗಿದೆ. ಈ ಬಗ್ಗೆ ಸಿವಿಸಿ ನೇರ ತನಿಖೆ ಕೈಗೊಂಡಿದೆ~ ಎಂದು ಅವರು ಹೇಳಿದ್ದಾರೆ.</p>.<p><br /> `ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ಸಂಗ್ರಹಿಸಲಾಗುವುದು. 1 ಸಾವಿರ ಕೋಟಿ ರೂಪಾಯಿ ತೆರಿಗೆಗೆ ಸಂಬಂಧಿಸಿದ ವಿಷಯ ಕೂಡ ಅಧಿಕಾರಿಗಳು ಬಗೆಹರಿಸುವ ವಿಶ್ವಾಸ ಇದೆ~ ಎಂದಿದ್ದಾರೆ.<br /> <br /> `ಕ್ರೀಡಾಕೂಟದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದ ವರದಿ ಹೊರಬರಲಿದೆ. ವರದಿಯ ಆಧಾರದ ಮೇಲೆ ನಾವು ಕಾರ್ಯನಿರ್ವಹಿಸಲಿದ್ದೇವೆ. ಸರ್ಕಾರಿ ಮತ್ತು ಖಾಸಗಿ ನಿರ್ಮಾಣ ಸಂಸ್ಥೆಗಳು ಭಾಗಿಯಾಗಿರುವ ಒಟ್ಟು 53 ಪ್ರಕರಣಗಳ ಬಗ್ಗೆ ಸಿವಿಸಿ ತನಿಖೆ ನಡೆಸುತ್ತಿದೆ~ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಸಂಬಂಧಿಸಿದ ಕಾಮಗಾರಿ ನಿರ್ವಹಿಸಿದ್ದ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಕಂಪೆನಿಗಳು ಸುಮಾರು 1 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವುದನ್ನು ಕೇಂದ್ರೀಯ ಜಾಗೃತ ಆಯೋಗ (ಸಿವಿಸಿ) ಪತ್ತೆ ಹಚ್ಚಿದೆ.<br /> <br /> ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ನಡೆದ ಹಗರಣದ ಬಗ್ಗೆ ತನಿಖೆ ನಡೆಸಲು ಸಿವಿಸಿ ನೇಮಿಸಿರುವ ತೆರಿಗೆ ಮತ್ತು ಇತರ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಯ ನೆರವಿನಿಂದ ಭಾರಿ ಮೊತ್ತದ ತೆರಿಗೆ ಉಳಿಸಿಕೊಂಡಿರುವುದನ್ನು ಪತ್ತೆ ಮಾಡಲಾಗಿದೆ ಎಂದು ಆಯೋಗದ ಆಯುಕ್ತ ಆರ್. ಶ್ರೀಕುಮಾರ್ ತಿಳಿಸಿದ್ದಾರೆ.<br /> `ಕ್ರೀಡಾಕೂಟದ ವಿವಿಧ ಕಾಮಗಾರಿಗೆ 37 ಇಲಾಖೆಗಳು 15,000 ಕೋಟಿ ರೂಪಾಯಿ ವೆಚ್ಚ ಮಾಡಿವೆ. ಇದರಲ್ಲಿ 9,000 ಕೋಟಿ ರೂಪಾಯಿ ಸಾರ್ವಜನಿಕ ಕ್ಷೇತ್ರಕ್ಕೆ ಸಂಬಂಧಿಸಿದ್ದಾಗಿದೆ. ಈ ಬಗ್ಗೆ ಸಿವಿಸಿ ನೇರ ತನಿಖೆ ಕೈಗೊಂಡಿದೆ~ ಎಂದು ಅವರು ಹೇಳಿದ್ದಾರೆ.</p>.<p><br /> `ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ಸಂಗ್ರಹಿಸಲಾಗುವುದು. 1 ಸಾವಿರ ಕೋಟಿ ರೂಪಾಯಿ ತೆರಿಗೆಗೆ ಸಂಬಂಧಿಸಿದ ವಿಷಯ ಕೂಡ ಅಧಿಕಾರಿಗಳು ಬಗೆಹರಿಸುವ ವಿಶ್ವಾಸ ಇದೆ~ ಎಂದಿದ್ದಾರೆ.<br /> <br /> `ಕ್ರೀಡಾಕೂಟದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದ ವರದಿ ಹೊರಬರಲಿದೆ. ವರದಿಯ ಆಧಾರದ ಮೇಲೆ ನಾವು ಕಾರ್ಯನಿರ್ವಹಿಸಲಿದ್ದೇವೆ. ಸರ್ಕಾರಿ ಮತ್ತು ಖಾಸಗಿ ನಿರ್ಮಾಣ ಸಂಸ್ಥೆಗಳು ಭಾಗಿಯಾಗಿರುವ ಒಟ್ಟು 53 ಪ್ರಕರಣಗಳ ಬಗ್ಗೆ ಸಿವಿಸಿ ತನಿಖೆ ನಡೆಸುತ್ತಿದೆ~ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>