<p><strong>ಬೆಂಗಳೂರು:</strong> ರಾಜ್ಯದಲ್ಲಿ ಬುಧವಾರ ಸಂಜೆ ಸಿಡಿಲು ಬಡಿದ ಮೂರು ಪ್ರತ್ಯೇಕ ಘಟನೆಗಳಲ್ಲಿ ತಂದೆ, ಮಗ ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.<br /> <br /> <strong>ಮೊಳಕಾಲ್ಮುರು ವರದಿ:</strong> ಮನೆಗೆ ಸಿಡಿಲು ಬಡಿದು ಇಬ್ಬರು ಸತ್ತ ಘಟನೆ ಮೊಳಕಾಲ್ಮುರು ತಾಲ್ಲೂಕಿನ ಸಿದ್ದಯ್ಯನಕೋಟೆಯಲ್ಲಿ ನಡೆದಿದೆ.ಅದೇ ಗ್ರಾಮದ ಕೃಷಿ ಕಾರ್ಮಿಕರಾದ ಓದು ತಿಪ್ಪೇಸ್ವಾಮಿ (46) ಹಾಗೂ ಆತನ ಪುತ್ರ ತಿಮ್ಮಣ್ಣ (20) ಮೃತಪಟ್ಟವರು.</p>.<p>ಸ್ಥಳಕ್ಕೆ ತಹಶೀಲ್ದಾರ್ ವಿ.ಆರ್. ನಾಯಕ್, ಸಿಪಿಐ ಎಸ್. ನಾಗರಾಜ್ ಭೇಟಿ ನೀಡಿದ್ದರು. ತಾಲ್ಲೂಕಿನ ವಿವಿಧೆಡೆ ಸುಮಾರು ಒಂದು ಗಂಟೆ ಕಾಲ ಮಳೆ ಸುರಿದಿದೆ.<br /> <br /> <strong>ಗುಲ್ಬರ್ಗ ವರದಿ:</strong> ಚಿಂಚೋಳಿ ತಾಲ್ಲೂಕಿನ ಚಿಕ್ಕಲಿಂಗದಳ್ಳಿ ತಾಂಡಾದಲ್ಲಿ ಶೇಕಿಬಾಯಿ ಮೇಘು (14) ಎಂಬಾಕೆ ಸಿಡಿಲಿಗೆ ಬಲಿಯಾಗಿದ್ದಾಳೆ. ತಾಲ್ಲೂಕಿನಲ್ಲಿ ಕೆಲವೆಡೆ ಗುಡುಗು ಮಿಂಚು ಸಹಿತ ಮಳೆ ಸುರಿದಿದೆ.<br /> <br /> <strong>ಖಾನಾಪುರ (ಬೆಳಗಾವಿ): </strong>ಹೊಲದಿಂದ ಮನೆಗೆ ಹೊರಟಿದ್ದ ರೈತ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅವರೊಳ್ಳಿಯಲ್ಲಿ ಸಂಭವಿಸಿದೆ. ಮೃತನನ್ನು ಅದೇ ಗ್ರಾಮದ ರಾವಳಪ್ಪ ಕುಬೇರ ಕೋಡೋಳಿ (18) ಎಂದು ಗುರುತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಬುಧವಾರ ಸಂಜೆ ಸಿಡಿಲು ಬಡಿದ ಮೂರು ಪ್ರತ್ಯೇಕ ಘಟನೆಗಳಲ್ಲಿ ತಂದೆ, ಮಗ ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.<br /> <br /> <strong>ಮೊಳಕಾಲ್ಮುರು ವರದಿ:</strong> ಮನೆಗೆ ಸಿಡಿಲು ಬಡಿದು ಇಬ್ಬರು ಸತ್ತ ಘಟನೆ ಮೊಳಕಾಲ್ಮುರು ತಾಲ್ಲೂಕಿನ ಸಿದ್ದಯ್ಯನಕೋಟೆಯಲ್ಲಿ ನಡೆದಿದೆ.ಅದೇ ಗ್ರಾಮದ ಕೃಷಿ ಕಾರ್ಮಿಕರಾದ ಓದು ತಿಪ್ಪೇಸ್ವಾಮಿ (46) ಹಾಗೂ ಆತನ ಪುತ್ರ ತಿಮ್ಮಣ್ಣ (20) ಮೃತಪಟ್ಟವರು.</p>.<p>ಸ್ಥಳಕ್ಕೆ ತಹಶೀಲ್ದಾರ್ ವಿ.ಆರ್. ನಾಯಕ್, ಸಿಪಿಐ ಎಸ್. ನಾಗರಾಜ್ ಭೇಟಿ ನೀಡಿದ್ದರು. ತಾಲ್ಲೂಕಿನ ವಿವಿಧೆಡೆ ಸುಮಾರು ಒಂದು ಗಂಟೆ ಕಾಲ ಮಳೆ ಸುರಿದಿದೆ.<br /> <br /> <strong>ಗುಲ್ಬರ್ಗ ವರದಿ:</strong> ಚಿಂಚೋಳಿ ತಾಲ್ಲೂಕಿನ ಚಿಕ್ಕಲಿಂಗದಳ್ಳಿ ತಾಂಡಾದಲ್ಲಿ ಶೇಕಿಬಾಯಿ ಮೇಘು (14) ಎಂಬಾಕೆ ಸಿಡಿಲಿಗೆ ಬಲಿಯಾಗಿದ್ದಾಳೆ. ತಾಲ್ಲೂಕಿನಲ್ಲಿ ಕೆಲವೆಡೆ ಗುಡುಗು ಮಿಂಚು ಸಹಿತ ಮಳೆ ಸುರಿದಿದೆ.<br /> <br /> <strong>ಖಾನಾಪುರ (ಬೆಳಗಾವಿ): </strong>ಹೊಲದಿಂದ ಮನೆಗೆ ಹೊರಟಿದ್ದ ರೈತ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅವರೊಳ್ಳಿಯಲ್ಲಿ ಸಂಭವಿಸಿದೆ. ಮೃತನನ್ನು ಅದೇ ಗ್ರಾಮದ ರಾವಳಪ್ಪ ಕುಬೇರ ಕೋಡೋಳಿ (18) ಎಂದು ಗುರುತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>