<p><strong>ತುಮಕೂರು: </strong>ನಗರದ ಸಿದ್ದಗಂಗಾ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಮಂಗಳವಾರ ಕಾಲೇಜಿನಲ್ಲಿ ದಾಂಧಲೆ ನಡೆಸಿದ್ದಾರೆ.ತರಗತಿಯಿಂದ ಗುಂಪುಗುಂಪಾಗಿ ಕೊಠಡಿಗಳಿಂದ ಹೊರ ಬಂದ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಕೈಗೆ ಸಿಕ್ಕ ಹೂವಿನ ಕುಂಡಗಳನ್ನು ಎತ್ತಿ ಬಿಸಾಡಿ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಹೊಸ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜನೆಗೆ ಸಂಬಂಧಿಸಿದಂತೆ ಪ್ರಾಂಶುಪಾಲರ ನಡುವೆ ಮಾತಿಗೆಮಾತು ಬೆಳೆದು ಪರಿಸ್ಥಿತಿ ಕೈಮೀರಿತು ಎಂದು ಹೇಳಲಾಗಿದೆ. <br /> <br /> ಸಮಾರಂಭ ನಡೆಸಲು ಸಭಾಂಗಣ ಕೊಡುವಂತೆ ವಿದ್ಯಾರ್ಥಿಗಳು ಕೇಳಿದ್ದಾರೆ. ಆದರೆ ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಸಭಾಂಗಣ ಕೊಡಲು ಸಾಧ್ಯವಿಲ್ಲ. ತರಗತಿ ಕೊಠಡಿಯಲ್ಲೇ ಕಾರ್ಯಕ್ರಮ ಮಾಡಿಕೊಳ್ಳಿ ಎಂದು ಪ್ರಾಂಶುಪಾಲರು ಹೇಳಿದ್ದಾರೆ.<br /> <br /> ಸಭಾಂಗಣ ಬೇಕೆಬೇಕು ಎಂದು ಪಟ್ಟುಹಿಡಿದ ವಿದ್ಯಾರ್ಥಿಗಳು ಅಂತಿಮವಾಗಿ ದಾಂಧಲೆ ಮಾಡತೊಡಗಿದರು. ಕಾಲೇಜಿನ ನೋಟಿಸ್ ಬೋರ್ಡ್ ಪುಡಿಪುಡಿ ಮಾಡಿದರು. ಹೂವು, ಅಲಂಕಾರಿಕಾ ಗಿಡಗಳ ಕುಂಡಗಳನ್ನು ಚೂರು ಚೂರು ಮಾಡಿದರು. <br /> <br /> ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಮನಗಂಡ ಪ್ರಾಂಶುಪಾಲರು ಕೂಡಲೇ ತಿಲಕ್ ಪಾರ್ಕ್ ಪೊಲೀಸರಿಗೆ ದೂರವಾಣಿ ಕರೆ ಮಾಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.<br /> ವಿಭಾಗದ ಮುಖ್ಯಸ್ಥರ ಚಿತಾವಣೆಯೇ ಘಟನೆಗೆ ಕಾರಣ ಎಂದು ಪ್ರಾಂಶುಪಾಲ ವೈದೇಶ್ವರ ಸ್ಥಳದಲ್ಲಿದ್ದ ಸುದ್ದಿಗಾರರಿಗೆ ತಿಳಿಸಿದರು. <br /> <br /> ವಿಭಾಗದ ಮುಖ್ಯಸ್ಥ ಜೈಸ್ವಾಮಿ ಅವರೊಂದಿಗೆ ಮಾತನಾಡಿದ ಪೊಲೀಸರು, ವಿದ್ಯಾರ್ಥಿಗಳನ್ನು ಸುಮ್ಮನಿರಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಆಗ ಜೈಸ್ವಾಮಿ ವಿದ್ಯಾರ್ಥಿಗಳ ಮನವೊಲಿಸಿ ಕಾಲೇಜು ಆವರಣದಿಂದ ಹೊರ ಕಳುಹಿಸಿದರು.ಘಟನೆಯಲ್ಲಿ ದ್ವಿಚಕ್ರ ವಾಹನವೊಂದು ಜಖಂಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ನಗರದ ಸಿದ್ದಗಂಗಾ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಮಂಗಳವಾರ ಕಾಲೇಜಿನಲ್ಲಿ ದಾಂಧಲೆ ನಡೆಸಿದ್ದಾರೆ.ತರಗತಿಯಿಂದ ಗುಂಪುಗುಂಪಾಗಿ ಕೊಠಡಿಗಳಿಂದ ಹೊರ ಬಂದ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಕೈಗೆ ಸಿಕ್ಕ ಹೂವಿನ ಕುಂಡಗಳನ್ನು ಎತ್ತಿ ಬಿಸಾಡಿ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಹೊಸ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜನೆಗೆ ಸಂಬಂಧಿಸಿದಂತೆ ಪ್ರಾಂಶುಪಾಲರ ನಡುವೆ ಮಾತಿಗೆಮಾತು ಬೆಳೆದು ಪರಿಸ್ಥಿತಿ ಕೈಮೀರಿತು ಎಂದು ಹೇಳಲಾಗಿದೆ. <br /> <br /> ಸಮಾರಂಭ ನಡೆಸಲು ಸಭಾಂಗಣ ಕೊಡುವಂತೆ ವಿದ್ಯಾರ್ಥಿಗಳು ಕೇಳಿದ್ದಾರೆ. ಆದರೆ ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಸಭಾಂಗಣ ಕೊಡಲು ಸಾಧ್ಯವಿಲ್ಲ. ತರಗತಿ ಕೊಠಡಿಯಲ್ಲೇ ಕಾರ್ಯಕ್ರಮ ಮಾಡಿಕೊಳ್ಳಿ ಎಂದು ಪ್ರಾಂಶುಪಾಲರು ಹೇಳಿದ್ದಾರೆ.<br /> <br /> ಸಭಾಂಗಣ ಬೇಕೆಬೇಕು ಎಂದು ಪಟ್ಟುಹಿಡಿದ ವಿದ್ಯಾರ್ಥಿಗಳು ಅಂತಿಮವಾಗಿ ದಾಂಧಲೆ ಮಾಡತೊಡಗಿದರು. ಕಾಲೇಜಿನ ನೋಟಿಸ್ ಬೋರ್ಡ್ ಪುಡಿಪುಡಿ ಮಾಡಿದರು. ಹೂವು, ಅಲಂಕಾರಿಕಾ ಗಿಡಗಳ ಕುಂಡಗಳನ್ನು ಚೂರು ಚೂರು ಮಾಡಿದರು. <br /> <br /> ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಮನಗಂಡ ಪ್ರಾಂಶುಪಾಲರು ಕೂಡಲೇ ತಿಲಕ್ ಪಾರ್ಕ್ ಪೊಲೀಸರಿಗೆ ದೂರವಾಣಿ ಕರೆ ಮಾಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.<br /> ವಿಭಾಗದ ಮುಖ್ಯಸ್ಥರ ಚಿತಾವಣೆಯೇ ಘಟನೆಗೆ ಕಾರಣ ಎಂದು ಪ್ರಾಂಶುಪಾಲ ವೈದೇಶ್ವರ ಸ್ಥಳದಲ್ಲಿದ್ದ ಸುದ್ದಿಗಾರರಿಗೆ ತಿಳಿಸಿದರು. <br /> <br /> ವಿಭಾಗದ ಮುಖ್ಯಸ್ಥ ಜೈಸ್ವಾಮಿ ಅವರೊಂದಿಗೆ ಮಾತನಾಡಿದ ಪೊಲೀಸರು, ವಿದ್ಯಾರ್ಥಿಗಳನ್ನು ಸುಮ್ಮನಿರಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಆಗ ಜೈಸ್ವಾಮಿ ವಿದ್ಯಾರ್ಥಿಗಳ ಮನವೊಲಿಸಿ ಕಾಲೇಜು ಆವರಣದಿಂದ ಹೊರ ಕಳುಹಿಸಿದರು.ಘಟನೆಯಲ್ಲಿ ದ್ವಿಚಕ್ರ ವಾಹನವೊಂದು ಜಖಂಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>