ಸಿದ್ದಗಂಗೆಯಲ್ಲಿ ಗುರುವಂದನೆ ಸಂಭ್ರಮ

ತುಮಕೂರು: ಸಿದ್ದಗಂಗಾ ಮಠದಲ್ಲಿ ಗುರುವಾರ ಡಾ.ಶಿವಕುಮಾರ ಸ್ವಾಮೀಜಿ ಅವರ 106ನೇ ಜನ್ಮದಿನೋತ್ಸವ ಹಾಗೂ ಗುರುವಂದನೆ ಕಾರ್ಯಕ್ರಮ ಅದ್ದೂರಿಯಾಗಿ ನೇರವೇರಿತು.
ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಸ್ವಾಮೀಜಿ ದರ್ಶನ ಪಡೆದರು. ಗುರುವಂದನೆ ಸಲ್ಲಿಸಲು ಭಕ್ತರು ಬುಧವಾರ ರಾತ್ರಿಯಿಂದಲೇ ಮಠಕ್ಕೆ ತಂಡೋಪತಂಡವಾಗಿ ಆಗಮಿಸಿ ಬೀಡು ಬಿಟ್ಟಿದ್ದರು.
ಮೂವತ್ತೊಂಬತ್ತು ದಿನ ಕಳೆದರೆ ಸ್ವಾಮೀಜಿ (ಏಪ್ರಿಲ್ 1ಕ್ಕೆ) 107ನೇ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಮತ್ತೊಂದು ಸಂಭ್ರಮ ಹತ್ತಿರದಲ್ಲಿದ್ದರೂ 106ನೇ ಜನ್ಮದಿನಾಚರಣೆಯಲ್ಲಿ ಪಾಲ್ಗೊಳ್ಳಲು ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಎಪ್ಪತ್ತಕ್ಕೂ ಹೆಚ್ಚು ಮಠಗಳ ಮಠಾಧೀಶರು ಪಾಲ್ಗೊಂಡು ಶುಭ ಹಾರೈಸಿದರು.
ಮಠದ ಆವರಣದಲ್ಲಿ ನಿರ್ಮಿಸಿರುವ ಬೃಹತ್ ನಂದಿ ವಿಗ್ರಹ, ಈಶ್ವರ ಲಿಂಗವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಸಮಾರಂಭದಲ್ಲಿ ಮಾತನಾಡಿದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇತರರು ಶಿವಕುಮಾರ ಸ್ವಾಮೀಜಿ ಸೇವೆ ಸ್ಮರಿಸಿದರು.
ಬೆಂಗಳೂರಿನಲ್ಲಿ 107ನೇ ಜನ್ಮದಿನಾಚರಣೆ: ಶಿವಕುಮಾರ ಸ್ವಾಮೀಜಿ ಅವರ 107ನೇ ಜನ್ಮದಿನೋತ್ಸವವನ್ನು ಬೆಂಗಳೂರಿನಲ್ಲಿ ಜೂನ್–ಜುಲೈನಲ್ಲಿ 3 ದಿನ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.