<p><strong>ತುಮಕೂರು:</strong> ಸಿದ್ದಗಂಗಾ ಮಠದಲ್ಲಿ ಗುರುವಾರ ಡಾ.ಶಿವಕುಮಾರ ಸ್ವಾಮೀಜಿ ಅವರ 106ನೇ ಜನ್ಮದಿನೋತ್ಸವ ಹಾಗೂ ಗುರುವಂದನೆ ಕಾರ್ಯಕ್ರಮ ಅದ್ದೂರಿಯಾಗಿ ನೇರವೇರಿತು.<br /> <br /> ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಸ್ವಾಮೀಜಿ ದರ್ಶನ ಪಡೆದರು. ಗುರುವಂದನೆ ಸಲ್ಲಿಸಲು ಭಕ್ತರು ಬುಧವಾರ ರಾತ್ರಿಯಿಂದಲೇ ಮಠಕ್ಕೆ ತಂಡೋಪತಂಡವಾಗಿ ಆಗಮಿಸಿ ಬೀಡು ಬಿಟ್ಟಿದ್ದರು.<br /> <br /> ಮೂವತ್ತೊಂಬತ್ತು ದಿನ ಕಳೆದರೆ ಸ್ವಾಮೀಜಿ (ಏಪ್ರಿಲ್ 1ಕ್ಕೆ) 107ನೇ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಮತ್ತೊಂದು ಸಂಭ್ರಮ ಹತ್ತಿರದಲ್ಲಿದ್ದರೂ 106ನೇ ಜನ್ಮದಿನಾಚರಣೆಯಲ್ಲಿ ಪಾಲ್ಗೊಳ್ಳಲು ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.<br /> <br /> ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಎಪ್ಪತ್ತಕ್ಕೂ ಹೆಚ್ಚು ಮಠಗಳ ಮಠಾಧೀಶರು ಪಾಲ್ಗೊಂಡು ಶುಭ ಹಾರೈಸಿದರು.<br /> <br /> ಮಠದ ಆವರಣದಲ್ಲಿ ನಿರ್ಮಿಸಿರುವ ಬೃಹತ್ ನಂದಿ ವಿಗ್ರಹ, ಈಶ್ವರ ಲಿಂಗವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಸಮಾರಂಭದಲ್ಲಿ ಮಾತನಾಡಿದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇತರರು ಶಿವಕುಮಾರ ಸ್ವಾಮೀಜಿ ಸೇವೆ ಸ್ಮರಿಸಿದರು.<br /> <br /> <strong>ಬೆಂಗಳೂರಿನಲ್ಲಿ 107ನೇ ಜನ್ಮದಿನಾಚರಣೆ:</strong> ಶಿವಕುಮಾರ ಸ್ವಾಮೀಜಿ ಅವರ 107ನೇ ಜನ್ಮದಿನೋತ್ಸವವನ್ನು ಬೆಂಗಳೂರಿನಲ್ಲಿ ಜೂನ್–ಜುಲೈನಲ್ಲಿ 3 ದಿನ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸಿದ್ದಗಂಗಾ ಮಠದಲ್ಲಿ ಗುರುವಾರ ಡಾ.ಶಿವಕುಮಾರ ಸ್ವಾಮೀಜಿ ಅವರ 106ನೇ ಜನ್ಮದಿನೋತ್ಸವ ಹಾಗೂ ಗುರುವಂದನೆ ಕಾರ್ಯಕ್ರಮ ಅದ್ದೂರಿಯಾಗಿ ನೇರವೇರಿತು.<br /> <br /> ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಸ್ವಾಮೀಜಿ ದರ್ಶನ ಪಡೆದರು. ಗುರುವಂದನೆ ಸಲ್ಲಿಸಲು ಭಕ್ತರು ಬುಧವಾರ ರಾತ್ರಿಯಿಂದಲೇ ಮಠಕ್ಕೆ ತಂಡೋಪತಂಡವಾಗಿ ಆಗಮಿಸಿ ಬೀಡು ಬಿಟ್ಟಿದ್ದರು.<br /> <br /> ಮೂವತ್ತೊಂಬತ್ತು ದಿನ ಕಳೆದರೆ ಸ್ವಾಮೀಜಿ (ಏಪ್ರಿಲ್ 1ಕ್ಕೆ) 107ನೇ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಮತ್ತೊಂದು ಸಂಭ್ರಮ ಹತ್ತಿರದಲ್ಲಿದ್ದರೂ 106ನೇ ಜನ್ಮದಿನಾಚರಣೆಯಲ್ಲಿ ಪಾಲ್ಗೊಳ್ಳಲು ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.<br /> <br /> ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಎಪ್ಪತ್ತಕ್ಕೂ ಹೆಚ್ಚು ಮಠಗಳ ಮಠಾಧೀಶರು ಪಾಲ್ಗೊಂಡು ಶುಭ ಹಾರೈಸಿದರು.<br /> <br /> ಮಠದ ಆವರಣದಲ್ಲಿ ನಿರ್ಮಿಸಿರುವ ಬೃಹತ್ ನಂದಿ ವಿಗ್ರಹ, ಈಶ್ವರ ಲಿಂಗವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಸಮಾರಂಭದಲ್ಲಿ ಮಾತನಾಡಿದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇತರರು ಶಿವಕುಮಾರ ಸ್ವಾಮೀಜಿ ಸೇವೆ ಸ್ಮರಿಸಿದರು.<br /> <br /> <strong>ಬೆಂಗಳೂರಿನಲ್ಲಿ 107ನೇ ಜನ್ಮದಿನಾಚರಣೆ:</strong> ಶಿವಕುಮಾರ ಸ್ವಾಮೀಜಿ ಅವರ 107ನೇ ಜನ್ಮದಿನೋತ್ಸವವನ್ನು ಬೆಂಗಳೂರಿನಲ್ಲಿ ಜೂನ್–ಜುಲೈನಲ್ಲಿ 3 ದಿನ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>