<p>ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಸಂದರ್ಭ ಸೃಷ್ಟಿಯಾದಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಮುಖಂಡರೂ ಅದನ್ನು ವಿರೋಧಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.</p>.<p>ತಮ್ಮ ನಿವಾಸದಲ್ಲಿ ಮಂಗಳವಾರ ಆಟೊ ಚಾಲಕರ ಸಂಘಟನೆಯ ಮುಖಂಡರನ್ನು ಭೇಟಿ ಮಾಡಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಸಿದ್ದರಾಮಯ್ಯ ಅವರು ರಾಜ್ಯದ ಉತ್ತಮ ರಾಜಕಾರಣಿಗಳಲ್ಲಿ ಒಬ್ಬರು. ಅವರು ಮುಖ್ಯಮಂತ್ರಿ ಹುದ್ದೆ ಬಯಸುವುದರಲ್ಲಿ ಯಾವುದೇ ತಪ್ಪು ಇಲ್ಲ. ಅಂತಹ ಸಂದರ್ಭ ಒದಗಿಬಂದರೆ ಕಾಂಗ್ರೆಸ್ ಮುಖಂಡರು ಅದನ್ನು ವಿರೋಧಿಸಬಾರದು' ಎಂದರು.</p>.<p>ಡಿಸೆಂಬರ್ 9ರಂದು ಹಾವೇರಿಯಲ್ಲಿ ನಡೆಯುವ ಕರ್ನಾಟಕ ಜನತಾ ಪಕ್ಷದ ಸಮಾವೇಶದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಸೇರುತ್ತಾರೆ. ರಾಜ್ಯದ ರಾಜಕೀಯದಲ್ಲಿ ಇದು ಒಂದು ಐತಿಹಾಸಿಕ ಸಮಾವೇಶ ಆಗಲಿದೆ. ಈ ಸಮಾವೇಶದ ನಂತರ ರಾಜ್ಯ ರಾಜಕಾರಣದಲ್ಲಿ ಹಲವು ಮಹತ್ವದ ಬದಲಾವಣೆಗಳು ಘಟಿಸಲಿವೆ. ವಿವಿಧ ಪಕ್ಷಗಳ ಹಲವು ಮುಖಂಡರು ಕೆಜೆಪಿ ಸೇರಲು ಸಿದ್ಧರಿದ್ದಾರೆ. ಎಲ್ಲವನ್ನೂ ಮುಂದಿನ ದಿನಗಳಲ್ಲಿ ಬಹಿರಂಗಪಡಿಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಸಂದರ್ಭ ಸೃಷ್ಟಿಯಾದಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಮುಖಂಡರೂ ಅದನ್ನು ವಿರೋಧಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.</p>.<p>ತಮ್ಮ ನಿವಾಸದಲ್ಲಿ ಮಂಗಳವಾರ ಆಟೊ ಚಾಲಕರ ಸಂಘಟನೆಯ ಮುಖಂಡರನ್ನು ಭೇಟಿ ಮಾಡಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಸಿದ್ದರಾಮಯ್ಯ ಅವರು ರಾಜ್ಯದ ಉತ್ತಮ ರಾಜಕಾರಣಿಗಳಲ್ಲಿ ಒಬ್ಬರು. ಅವರು ಮುಖ್ಯಮಂತ್ರಿ ಹುದ್ದೆ ಬಯಸುವುದರಲ್ಲಿ ಯಾವುದೇ ತಪ್ಪು ಇಲ್ಲ. ಅಂತಹ ಸಂದರ್ಭ ಒದಗಿಬಂದರೆ ಕಾಂಗ್ರೆಸ್ ಮುಖಂಡರು ಅದನ್ನು ವಿರೋಧಿಸಬಾರದು' ಎಂದರು.</p>.<p>ಡಿಸೆಂಬರ್ 9ರಂದು ಹಾವೇರಿಯಲ್ಲಿ ನಡೆಯುವ ಕರ್ನಾಟಕ ಜನತಾ ಪಕ್ಷದ ಸಮಾವೇಶದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಸೇರುತ್ತಾರೆ. ರಾಜ್ಯದ ರಾಜಕೀಯದಲ್ಲಿ ಇದು ಒಂದು ಐತಿಹಾಸಿಕ ಸಮಾವೇಶ ಆಗಲಿದೆ. ಈ ಸಮಾವೇಶದ ನಂತರ ರಾಜ್ಯ ರಾಜಕಾರಣದಲ್ಲಿ ಹಲವು ಮಹತ್ವದ ಬದಲಾವಣೆಗಳು ಘಟಿಸಲಿವೆ. ವಿವಿಧ ಪಕ್ಷಗಳ ಹಲವು ಮುಖಂಡರು ಕೆಜೆಪಿ ಸೇರಲು ಸಿದ್ಧರಿದ್ದಾರೆ. ಎಲ್ಲವನ್ನೂ ಮುಂದಿನ ದಿನಗಳಲ್ಲಿ ಬಹಿರಂಗಪಡಿಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>